ಮಣಿಪಾಲ: ಅ.17 ರಂದು ತನುಜಾಸ್ ಮೈಂಡ್ ಥೆರಪಿ ಉದ್ಘಾಟನಾ ಕಾರ್ಯಕ್ರಮ

ಮಣಿಪಾಲ: ಖ್ಯಾತ ವ್ಯಕ್ತಿತ್ವ ತರಬೇತುಗಾರ್ತಿ ತನುಜಾ ಮಾಬೆನ್ ರವರ ತನುಜಾಸ್ ಮೈಂಡ್ ಥೆರಪಿ ಅ.17 ಸೋಮವಾರದಂದು 10 ಗಂಟೆಗೆ ಮಣಿಪಾಲದ ಕೆನರಾ ಬ್ಯಾಂಕ್ ನ ಎದುರು ಮನಿಸಿಪಲ್ ಕಾಂಪ್ಲೆಕ್ಸ್ ನ ಮೊದಲನೆ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದ್ದು, ಶಾಸಕ ಕೆ ರಘುಪತಿ ಭಟ್, ಮನಿಪಾಲ್ ಟೆಕ್ನಾಲಜೀಸ್ ನ ಕಾರ್ಯಾಧ್ಯಕ್ಷ ಗೌತಮ್ ಪೈ, ಶಿಕ್ಷಣತಜ್ಞೆ ಕೋಮಲ್ ಜೆನಿಫರ್ ಡಿ’ಸೋಜಾ ಭಾಗವಹಿಸಲಿದ್ದಾರೆ. ಶನಿವಾರ ಪತ್ರಿಕಾ ಭವನದಲ್ಲಿ ಈ ಬಗ್ಗೆ ಮಾಹಿತಿ ನೀಡಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾನಸಿಕ ತರಬೇತುಗಾರ್ತಿ ಮತ್ತು ಚಿಕಿತ್ಸಕಿ ತನುಜಾ ಮಾಬೆನ್, […]

ಮಾಹೆ: ನಿರ್ದೇಶಕ ದಿನೇಶ್ ಶೆಣೈ ಚೊಚ್ಚಲ ಚಲನಚಿತ್ರ ‘ಮಧ್ಯಂತರ’ ಪ್ರದರ್ಶನ

ಮಣಿಪಾಲ: ಬರಹಗಾರ ಮತ್ತು ನಿರ್ದೇಶಕ ದಿನೇಶ್ ಶೆಣೈ ಚೊಚ್ಚಲ ಚಲನಚಿತ್ರ ‘ಮಧ್ಯಂತರ’ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನಲ್ಲಿ ಪ್ರದರ್ಶನಗೊಂಡಿತು. ಮಾಹೆ ಪರಿಸರದಲ್ಲಿ ಬೆಳೆದ, ಸದ್ಯ ದೆಹಲಿಯಲ್ಲಿ ವಾಸಿಸುತ್ತಿರುವ ಶೆಣೈ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಬದುಕನ್ನು ಅವಲೋಕಿಸುವುದು ಮತ್ತು ವೈವಿಧ್ಯಮಯ ಚಲನಚಿತ್ರಗಳನ್ನು ನೋಡುವುದು ಉತ್ತಮ ಚಲನಚಿತ್ರವನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ‘ಮಧ್ಯಂತರ’ದಲ್ಲಿನ ಹೆಚ್ಚಿನ ವಿವರಗಳು ಸಿನಿಮಾದೊಂದಿಗಿನ ಅವರ ಎರಡು ದಶಕಗಳಿಗೂ ಹೆಚ್ಚಿನ ಒಡನಾಟದ ಸಮಯದಲ್ಲಿನ ಅವಲೋಕನ ಮತ್ತು ಅನುಭವದಿಂದ ಜನಿಸಿದವುಗಳಾಗಿವೆ ಎಂದರು. ತಮ್ಮ […]

ಅಕ್ಟೋಬರ್ 19 ರಂದು ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ

ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಅಕ್ಟೋಬರ್ 19 ರಂದು ಉಡುಪಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕುರಿತು ಚರ್ಚಿಸಲಾಗುವುದು. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲು ಹಾಗೂ ಸಲಹೆಗಳಿದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಇವರಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾ […]

ಪಾದಚಾರಿಗಳಿಗೆ ಕಾರು ಡಿಕ್ಕಿ: ಹಲವರಿಗೆ ಗಾಯ; ಓರ್ವ ಮೃತ್ಯುವಶ

ಮಣಿಪಾಲ: ಇಲ್ಲಿನ ಸೆಂಟ್ರಲ್ ಪಾರ್ಕ್ ಹೋಟೇಲ್ ಇಳಿಜಾರು ರಸ್ತೆಯಲ್ಲಿ ತಡರಾತ್ರಿ ಅತಿ ವೇಗದಿಂದ ಬಂದ ಕಾರೊಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಹಲವರು ಗಾಯಗೊಂಡಿದ್ದು, ಓರ್ವ ಯುವಕ ಮೃತನಾಗಿದ್ದಾನೆ. ಇಲ್ಲಿನ ಐನಾಕ್ಸ್ ಚಿತ್ರಮಂದಿರದ ಹತ್ತಿರ ಹೋಟೇಲ್ ಒಂದರಲ್ಲಿ ಕೆಲಸ ಮುಗಿಸಿ ಬರುತ್ತಿದ್ದ ಪಶ್ಚಿಮ ಬಂಗಾಲದ ನಿವಾಸಿ ಸಾಹಿನ್ ಎಸ್.ಕೆ(18) ಮೃತಪಟ್ಟ ಯುವಕ. ಇನ್ನುಳಿದ ಇತರ ಪಾದಾಚಾರಿಗಳಾದ ಸುಮಿತ್ ಜಸ್ವಾಲ್, ಸಂಸುಲ್ ಆರೀಫ್ ಹೋಕ್ಯೂ, ಲತೀಫುಲ್ ಚೌಧರಿ, ಸುಕ್ದೇಬ್ ಕರ್ಮರ್ಕರ್ ಇವರಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಎಲ್ಲರಿಗೂ […]

ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವಿಶ್ವ ವಿಶ್ರಾಂತಿ ಮತ್ತು ಪ್ರಶಾಮಕ ಆರೈಕೆ ದಿನವನ್ನು ಆಚರಿಸಲಾಯಿತು.

ಮಣಿಪಾಲ: ಅಕ್ಟೋಬರ್ ಎರಡನೇ ಶನಿವಾರದಂದು ವಿಶ್ವ ವಿಶ್ರಾಂತಿ ಮತ್ತು ಪ್ರಶಾಮಕ ಆರೈಕೆ ದಿನವನ್ನು ಆಚರಿಸಲಾಗುತ್ತದೆ. ವಾಯ್ಸ್ ಫಾರ್ ವಿಶ್ರಾಂತಿ ದಿನವನ್ನು ಪ್ರತಿ ಎರಡು ವರ್ಷಗಳಿಗೊಮ್ಮೆ ಅದೇ ದಿನ ಆಚರಿಸಲಾಗುತ್ತದೆ. ವಿಶ್ವ ಹಾಸ್ಪೈಸ್ ಮತ್ತು ಪ್ರಶಾಮಕ ಆರೈಕೆ ದಿನವನ್ನು ಆಚರಿಸುವುದರ ಮುಖ್ಯ ಉದ್ದೇಶ ಪ್ರಶಾಮಕ ಆರೈಕೆ ಅಗತ್ಯಗಳನ್ನು ಪರಿಹರಿಸುವುದು ಮತ್ತು ಅವಶ್ಯವಿರುವ ರೋಗಿಗಳಿಗೆ ಪ್ರಶಾಮಕ ಆರೈಕೆಯ ಅರಿವು ಹೆಚ್ಚಿಸುವ ದೃಷ್ಟಿಯನ್ನು ಹಂಚಿಕೊಳ್ಳುವುದು. ಈ ಅಭಿಯಾನವು ಜೀವನ-ಸೀಮಿತ ಕಾಯಿಲೆಯಿಂದ ಬಳಲುತ್ತಿರುವ ಜನರು ಮತ್ತು ಅವರ ಕುಟುಂಬಗಳ ವೈದ್ಯಕೀಯ, ಸಾಮಾಜಿಕ, ಪ್ರಾಯೋಗಿಕ […]