ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ: ಇಬ್ಬರ ಬಂಧನ; ಐದು ಯುವತಿಯರ ರಕ್ಷಣೆ

ಉಡುಪಿ: ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿದ್ದ ಮಣಿಪಾಲ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನ ಮಾಡಿರುವ ಘಟನೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ವಿದ್ಯಾರತ್ನ ನಗರದಲ್ಲಿ ನಡೆದಿದೆ. ಭವಾನಿ ಹೆಸರಿನ ಮನೆಯಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಯುತ್ತಿದ್ದ ಸಂದರ್ಭ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ವೇಶ್ಯಾವಾಟಿಕೆಯ ಜಾಲಕ್ಕೆ ಸಿಲುಕಿದ್ದ 5 ಮಂದಿ ಯುವತಿಯರನ್ನು ರಕ್ಷಣೆ ಮಾಡಲಾಗಿದೆ. ಈ ವೇಳೆ ವೇಶ್ಯಾವಾಟಿಕೆ ವ್ಯವಹಾರ ನಡೆಸುತ್ತಿದ್ದ ಅಬ್ದುಲ್ ಸಲಾಮತ್, ಚಂದ್ರಹಾಸ ಎಂಬ ಆರೋಪಿಗಳನ್ನು ಪೊಲೀಸರು […]
ಮಣಿಪಾಲ: ಎಂಐಟಿ ಕಾಲೇಜಿನಲ್ಲಿ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ

ಮಣಿಪಾಲ: ಪ್ರತಿಷ್ಠಿತ ಭಾರತೀಯ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಸಂಸ್ಥೆ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹೊಸ ಶೈಕ್ಷಣಿಕ ವರ್ಷವನ್ನು ಜುಲೈ 17 ರಂದು ಉದ್ಘಾಟಿಸಲಾಯಿತು. ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರು ಸಮಾರಂಭವನ್ನು ಉದ್ಘಾಟಿಸಿದರು ಮತ್ತು ರಾಷ್ಟ್ರ ನಿರ್ಮಾಣ ಪ್ರಕ್ರಿಯೆಗೆ ಇಂತಹ ಅದ್ಭುತ ಕೊಡುಗೆಗಾಗಿ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಇನ್ಸ್ಟಿಟ್ಯೂಟ್ ಆಫ್ ಎಮಿನೆನ್ಸ್ ಮತ್ತು ಅಗ್ರ ಶ್ರೇಯಾಂಕದ ಸಂಸ್ಥೆಯನ್ನು ಜಿಲ್ಲೆಗೆ ಕೊಡುಗೆ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ನ ಉಪಕುಲಪತಿ ಲೆಫ್ಟಿನೆಂಟ್ […]
ಮಣಿಪಾಲ: ಟೆರೇಸ್ ಮೇಲಿಂದ ಆಕಸ್ಮಿಕವಾಗಿ ಬಿದ್ದು ಬಾಲಕ ಸಾವು

ಮಣಿಪಾಲ: ಆಕಸ್ಮಿಕವಾಗಿ ಟೆರೇಸ್ ಮೇಲಿಂದ ಬಿದ್ದು ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಮಣಿಪಾಲದಲ್ಲಿ ನಡೆದಿದೆ. ಮೃತ ಬಾಲಕನನ್ನು ಧಾರವಾಡ ನಿವಾಸಿ ನಾಮದೇವ ಎಂಬವರ ಪುತ್ರ ಆಯುಷ್ (8) ಎಂದು ಗುರುತಿಸಲಾಗಿದೆ. ಶಸ್ತ್ರಚಿಕಿತ್ಸೆಗಾಗಿ ನಗರಕ್ಕೆ ಬಂದಿಳಿದಿದ್ದ ಬಾಲಕ ಮತ್ತು ಆತನ ತಂದೆ ಇಲ್ಲಿನ ಬಡಗುಬೆಟ್ಟು ಗ್ರಾಮದ ದಶರಥನಗರದಲ್ಲಿರು ಸಂಬಂಧಿಯೊಬ್ಬರ ಮನೆಯಲ್ಲಿ ವಾಸವಾಗಿದ್ದರು. ಜೂನ್ 25 ರಂದು, ಆಯುಷ್ ಇತರ ಮಕ್ಕಳೊಂದಿಗೆ ಟೆರೇಸ್ ಮೇಲೆ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ಬಾಲಕನ ತಲೆಗೆ ತೀವ್ರ ಏಟಾಗಿತ್ತು. ಚಿಕಿತ್ಸೆಗಾಗಿ ಆತನನ್ನು […]
ಗಾಂಜಾ ಪೆಡ್ಲರ್ಗಳ ಬಂಧನ: 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶ

ಉಡುಪಿ: ವಿದ್ಯಾರ್ಥಿ ಸೇರಿದಂತೆ ಮೂವರು ಗಾಂಜಾ ಪೆಡ್ಲರ್ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಂಡ ಘಟನೆ ಮಣಿಪಾಲದಲ್ಲಿ ಬುಧವಾರ ನಡೆದಿದೆ. ಹೆರ್ಗ ಗ್ರಾಮದ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿ ಅಲ್ಲಿ ವಾಸವಾಗಿದ್ದ ವಿದ್ಯಾರ್ಥಿ ಶಶಾಂಕ (25) ಹಾಗೂ ಆತನ ಜತೆಗಿದ್ದ ಕಾರ್ಕಳದ ಪೆಡ್ಲರ್, ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿರುವ ಆದಿಲ್ (36)ನನ್ನು ಬಂಧಿಸಿ ಸುಮಾರು 300 ಗ್ರಾಂ ಗಾಂಜಾ ಜಪ್ತಿ ಮಾಡಲಾಗಿದೆ. ಅನಂತರ ಆದಿಲ್ ನೀಡಿದ ಮಾಹಿತಿಯ ಆಧಾರದ ಮೇಲೆ ಹಿರಿಯಡ್ಕ -ಕಾರ್ಕಳ […]
ತನುಜಾಸ್ ಮೈಂಡ್ ಥೆರಪಿ ವತಿಯಿಂದ ಮೀಟ್ ಮತ್ತು ಗ್ರೀಟ್ ಸೆಷನ್

ಮಣಿಪಾಲ: ಜೂನ್ 11ರಂದು ಇಲ್ಲಿನ ಆಶ್ಲೇಷ್ ಹೋಟೇಲಿನ ಸಭಾಂಗಣದಲ್ಲಿ ತನುಜಾ ಮಾಬೆನ್ ಅವರ ಮೈಂಡ್ ಥೆರಪಿ ವತಿಯಿಂದ ಮೀಟ್ ಮತ್ತು ಗ್ರೀಟ್ ಸೆಷನ್ ಅನ್ನು ಆಯೋಜಿಸಲಾಗಿತ್ತು. ತನುಜಾ ಮಾಬೆನ್ ಅವರ ಬಳಿ ಆಪ್ತಸ್ಮಾಲೋಚನೆಗೆ ಬರುವ ಕ್ಲೈಂಟ್ ಗಳು ಈ ಸೆಷನ್ ನಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡರು. ಇದು ಈ ವರ್ಷದ ಎರಡನೇ ಸೆಷನ್ ಆಗಿತ್ತು. ಸೆಷನ್ ತಂಡದ ಕೆಲಸ, ನಂಬಿಕೆ ಮತ್ತು ಮನಸ್ಸನ್ನು ಅರ್ಥಮಾಡಿಕೊಳ್ಳುವ ಚಟುವಟಿಕೆಗಳ ಜೊತೆಗೆ ಮೋಜಿನಿಂದ ತುಂಬಿತ್ತು. ಮೈಂಡ್ ಥೆರಪಿಯ ಹಲವಾರು ಹೊಸ ಮತ್ತು […]