ಮಣಿಪಾಲ: ಕಸ್ತೂರ್ಬಾ ಆಸ್ಪತ್ರೆಯಲ್ಲಿ ದಾದಿಯರಿಗಾಗಿ ಪಾಲಿಯೆಟಿವ್ ಆರೈಕೆ ಕೋರ್ ತರಬೇತಿ ಕಾರ್ಯಕ್ರಮ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಪಾಲಿಯೆಟಿವ್ ಔಷಧ ವಿಭಾಗದ ಸಹಯೋಗದೊಂದಿಗೆ ನರ್ಸಿಂಗ್ ಸೇವೆಗಳ ವಿಭಾಗವು ಡಾ. ಟಿಎಂಎ ಪೈ ಆಡಿಟೋರಿಯಂನಲ್ಲಿ ಸೆಪ್ಟೆಂಬರ್ 28 ರಿಂದ 30 ರ ವರೆಗೆ ದಾದಿಯರಿಗಾಗಿ ಎಂಡ್ ಆಫ್ ಲೈಫ್ ನರ್ಸಿಂಗ್ ಎಜುಕೇಶನ್ ಕನ್ಸೋರ್ಷಿಯಂ, ಎಲ್ ನೆಕ್/ ಪಾಲಿಯೆಟಿವ್ ಆರೈಕೆ ಕೋರ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಮಿಸ್ ಹನಿಫೆ ಮೆಕ್ ಗಾಮ್ ವೆಲ್, ಆರ್ ಎನ್, ಎಂ ಎಸ್ ಎನ್ , ಎಂ ಟಿ ಸಿ ಎಂ , ಪಿ […]
ಬಾಲ್ಯದ ಕ್ಯಾನ್ಸರ್- ಜಾಗೃತಿ ಮಾಸ: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಮೇಣದ ಬತ್ತಿ ಜಾಥಾ

ಮಣಿಪಾಲ: ಸೆ. 24 ಶನಿವಾರದಂದು ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಕಸ್ತೂರ್ಬಾ ಆಸ್ಪತ್ರೆಯು ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಯೋಗದೊಂದಿಗೆ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ಮೇಣದ ಬತ್ತಿ ನಡಿಗೆಯನ್ನು ಆಯೋಜಿಸಿತ್ತು. ಬಾಲ್ಯದ ಕ್ಯಾನ್ಸರನ್ನು ಆರಂಭಿಕ ಹಂತದಲ್ಲಿ ಪತ್ತೆಮಾಡಿ ಮತ್ತು ತಜ್ಞ ವೈದ್ಯರ ತಂಡದ ಮೂಲಕ ಸರಿಯಾದ ಸಮಯದಲ್ಲಿ ಚಿಕಿತ್ಸೆ ಕೊಡಿಸಿದರೆ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ. ಸೆಪ್ಟೆಂಬರ್ ತಿಂಗಳು ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸವಾಗಿದ್ದು, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದ ಮಕ್ಕಳ […]
ಮಣಿಪಾಲ: ಜೀನ್-ಲುಕ್ ಗೊಡಾರ್ಡ್ ರ ಬ್ರೆಥ್ ಲೆಸ್ ಚಲನಚಿತ್ರ ಪ್ರದರ್ಶನ

ಮಣಿಪಾಲ: ಇತ್ತೀಚಿಗೆ ನಿಧನರಾದ ಖ್ಯಾತ ಚಲನಚಿತ್ರ ನಿರ್ದೇಶಕ ಜೀನ್-ಲುಕ್ ಗೊಡಾರ್ಡ್ ಅವರ ಗೌರವಾರ್ಥವಾಗಿ ಅವರ ಪ್ರಸಿದ್ಧ ಚಲನಚಿತ್ರ ‘ಬ್ರೆಥ್ ಲೆಸ್’ ಪ್ರದರ್ಶನ ಮತ್ತು ಗೊಡಾರ್ಡ್ ಕುರಿತ ವಿಶೇಷ ಸಂವಾದವು ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ (ಜಿಸಿಪಿಎಎಸ್), ಆಶ್ರಯದಲ್ಲಿ ಸೆಪ್ಟೆಂಬರ್ 24, ಶನಿವಾರ ಬೆಳಿಗ್ಗೆ 10.00 ಗಂಟೆಗೆ ಮಣಿಪಾಲದ ಹಳೆಯ ಟ್ಯಾಪ್ಮಿ ಕಟ್ಟಡದ ತರಗತಿ ಕೊಠಡಿ-2ರಲ್ಲಿ ನಡೆಯಲಿದೆ. ಲೇಖಕರು ಮತ್ತು ಉಡುಪಿ ಚಿತ್ರ ಸಮಾಜದ ಮತ್ತು ಸಂಚಾಲಕರಾದ ಪ್ರೊ.ಫಣಿರಾಜ್ ಅವರು ಚಿತ್ರವನ್ನು ಪರಿಚಯಿಸಿ […]
ಯುನೆಸ್ಕೋ ಶಾಂತಿ ಪೀಠದ ಮುಖ್ಯಸ್ಥ ಪ್ರೊ.ಎಂ.ಡಿ.ನಲಪತ್ ಜೊತೆ ಸಂವಾದ ಕಾರ್ಯಕ್ರಮ

ಮಣಿಪಾಲ: ನಾವು ಜೀವಿಸುತ್ತಿರುವ ನೈಜ ಪ್ರಪಂಚ ನೈತಿಕ ಮತ್ತು ಆದರ್ಶದ ಜಗತ್ತಲ್ಲ, ಆದರೆ ಶಾಂತಿಪ್ರಿಯ ನಾಗರಿಕರಾದ ನಾವು ಶಾಂತಿ ಸ್ಥಾಪನೆಗಾಗಿ ಸಾಮೂಹಿಕ ಪ್ರಯತ್ನ ಮಾಡಲೇಬೇಕು ಎಂದು ಯುನೆಸ್ಕೋ ಶಾಂತಿ ಪೀಠದ ಮುಖ್ಯಸ್ಥ ಪ್ರೊ.ಎಂ.ಡಿ.ನಲಪತ್ ಹೇಳಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು, ಸಂಪನ್ಮೂಲಗಳ ಮೇಲಿನ ಪ್ರಾಬಲ್ಯ ಮತ್ತು ನಿಯಂತ್ರಣ ಸಾಧಿಸುವ ಪ್ರಯತ್ನಗಳೇ ಈ ಹಿಂದೆ ಯುದ್ಧಗಳಿಗೆ ಕಾರಣವಾಗಿದೆ ಮತ್ತು ನೈಜ ಜಗತ್ತು ನೈತಿಕ ಜಗತ್ತಲ್ಲ ಆದರೆ ನಾವು […]
ಮಣಿಪಾಲ: ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಗೆ ಬಿದ್ದು ಸಾವು

ಮಣಿಪಾಲ: ಮೀನು ಹಿಡಿಯಲು ಹೋದ ವ್ಯಕ್ತಿಯೋರ್ವರು ಮಣಿಪಾಲದ ಮಣ್ಣಪಳ್ಳ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಕುಂದಾಪುರದ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಇವರು ಮಣ್ಣಪಳ್ಳ ಕೆರೆಯಲ್ಲಿ ಗಾಳಹಾಕಿ ಮೀನು ಹಿಡಿಯುತ್ತಿದ್ದ ವೇಳೆ ಆಯತಪ್ಪಿ ನೀರಿಗೆ ಬಿದ್ದು ಮುಳುಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್ ಹಾಗೂ ಮಣಿಪಾಲ ಠಾಣಾಧಿಕಾರಿ ರಾಜಶೇಖರ್ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ನೆರವಾದರು.