ಕೆ.ಎಂ.ಸಿ ಆಸ್ಪತ್ರೆಯಲ್ಲಿ ಕರಾವಳಿಯ ಮೊದಲ ಗ್ರಾಫ್ಟ್ ಮ್ಯಾನಿಪುಲೇಟೆಡ್ ಅರ್ಧ-ಹೊಂದಾಣಿಕೆಯ ಅಸ್ಥಿಮಜ್ಜೆ ಕಸಿ ಯಶಸ್ವಿ ಚಿಕಿತ್ಸೆ

ಮಣಿಪಾಲ: ಒಂದು ವರ್ಷದ ಬಾಲಕನಿಗೆ ಸಿವಿಯರ್ ಕಂಬೈನ್ಡ್ ಇಮ್ಯುನೊ ಡೆಫಿಶಿಯೆನ್ಸಿ ಎಂಬ ತೀವ್ರ ತರಹದ ರೋಗ ನಿರೋಧಕ ಶಕ್ತಿಯ ಕೊರತೆ ಇರುವುದು ಪತ್ತೆಯಾಗಿತ್ತು. ಬಾಲಕನನ್ನು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ಅಸ್ಥಿಮಜ್ಜೆ (ಬೋನ್ ಮಾರೋ ಟ್ರಾನ್ಸ್ ಪ್ಲಾಂಟೇಶನ್) ಕಸಿ ಮಾಡಲು ಕಳುಹಿಸಲಾಗಿತ್ತು. ಅಸ್ಥಿಮಜ್ಜೆ ಕಸಿ ಮಾಡುವುದೊಂದೆ ಆತನ ಕಾಯಿಲೆಯನ್ನು ಗುಣಪಡಿಸಬಲ್ಲ ಏಕೈಕ ಚಿಕಿತ್ಸೆಯಾಗಿತ್ತು. ಮೂಳೆ ಮಜ್ಜೆಯ ಕಸಿ ಎನ್ನುವುದು ವೈದ್ಯರು ಮತ್ತು ಶುಶ್ರೂಷಾ ಸಿಬ್ಬಂದಿಗಳ ತಜ್ಞ ತಂಡವು ಮಾಡುವ ಒಂದು ಸಂಕೀರ್ಣ ವೈದ್ಯಕೀಯ ಚಿಕಿತ್ಸೆಯಾಗಿದೆ. ಅಸ್ಥಿ ಮಜ್ಜೆ ಕಸಿ […]

ಮಣಿಪಾಲ: ಆಗಸ್ಟ್‌ 13 ರಂದು ತಪೋವನ ಲೈಫ್‌ ಸ್ಪೇಸ್‌ನಲ್ಲಿ ಮಕ್ಕಳಿಗಾಗಿ ವಿವಿಧ ಸ್ಪರ್ಧೆ

ಮಣಿಪಾಲ: ಮಣಿಪಾಲ್‌ ಯೂನಿವರ್ಸಲ್‌ ಪ್ರೆಸ್‌, ಮಣಿಪಾಲ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ ಮತ್ತು ತಪೋವನ, ಮಣಿಪಾಲ ‌ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ‘ರಾಷ್ಟ್ರಭಕ್ತಿ’ ಎಂಬ ವಿಷಯದ ಮೇಲೆ ಮಕ್ಕಳಿಗಾಗಿ ಚಿತ್ರಕಲೆ, ಸಂಗೀತ  ಮತ್ತು ಕಥೆ ಹೇಳುವ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಮಣಿಪಾಲದ ತಪೋವನ ಲೈಫ್‌ ಸ್ಪೇಸ್‌ನಲ್ಲಿ ಆಗಸ್ಟ್‌ 13 ರವಿವಾರ ಳಗ್ಗೆ 10 ಗಂಟೆಯಿಂದ ಸ್ಪರ್ಧೆ ಆರಂಭವಾಗಲಿದೆ. ಪ್ರತಿ ಸ್ಪರ್ಧೆಯಲ್ಲಿಯೂ 1 ರಿಂದ 3, 4 ರಿಂದ 7 ಮತ್ತು 8ರಿಂದ 10ನೆಯ ತರಗತಿಯವರೆಗಿನ ಮೂರು ವಿಭಾಗಗಳಿವೆ. ಆಸಕ್ತ ವಿದ್ಯಾರ್ಥಿಗಳು ನೋಂದಣಿ ಮತ್ತು ಹೆಚ್ಚಿನ ಮಾಹಿತಿಗಳಿಗಾಗಿ ಭಾವನಾ ಭಟ್ [ 6364919422] , ಮಹೇಶ ಮಲ್ಪೆ [8660637172] ಇವರನ್ನು ಸಂಪರ್ಕಿಸಬಹುದಾಗಿದೆ.

ಕರ್ನಾಟಕದಲ್ಲೇ ಮೊದಲ ಬಾರಿಗೆ ಅತ್ಯಂತ ಕ್ಲಿಷ್ಟ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿ ಹೆರಿಗೆ ನಡೆಸಿದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯರು

ಮಣಿಪಾಲ: 31 ವರ್ಷ ವಯಸ್ಸಿನ ಮಹಿಳೆಯು ಎರಡನೆ ಬಾರಿ ಗರ್ಭ ಧರಿಸಿದ್ದು, 34ನೇ ವಾರದ ಗರ್ಭಾವಸ್ಥೆಯಲ್ಲಿ ವೈದ್ಯರನ್ನು ಸಂಪರ್ಕಿಸಿದಾಗ ಮಗುವಿನ ಕಸ (Placenta) ಗರ್ಭಕೋಶದ ಬಾಯಿಗೆ ಅಡ್ಡಲಾಗಿರುವ ವಿಶೇಷ ಸ್ಥಿತಿ ಬೆಳಕಿಗೆ ಬಂದಿತ್ತು. ಅಲ್ಟ್ರಾಸೌಂಡ್ ಪರೀಕ್ಷೆ ಮಾಡಿದ ನಂತರ ಪ್ಲಾಸೆಂಟಾ ಪ್ರೀವಿಯಾ ಮತ್ತು ಪ್ಲಾಸೆಂಟಾ ಅಕ್ರಿಟಾ ಇರುವ ಸಾಧ್ಯತೆ ಕಂಡು ಬಂದಿತು. ಮ್ಯಾಗ್ನೆಟಿಕ್ ರೆಸೋನೆನ್ಸ್ ಇಮೇಜಿಂಗ್ (MRI) ರೋಗಿಗಿರುವ ತೊಂದರೆಯನ್ನು ದೃಢಪಡಿಸಿತು. ಪರಿಸ್ಥಿತಿಯನ್ನು ಅರಿತ ಹೆರಿಗೆ ಮತ್ತು ಸ್ತ್ರೀ ರೋಗ ವಿಭಾಗದ ಮುಖ್ಯಸ್ಥ ಡಾ. ಶ್ರೀಪಾದ ಹೆಬ್ಬಾರ್ […]

ಜೆ.ಸಿ.ಐ ಮಣಿಪಾಲ ಹಿಲ್ ಸಿಟಿ ವತಿಯಿಂದ ಯುವ ಸಬಲೀಕರಣ ತರಬೇತಿ ಕಾರ್ಯಕ್ರಮ

ಮಣಿಪಾಲ: ಮಣಿಪಾಲದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಜೆ.ಸಿ.ಐ ಮಣಿಪಾಲ ಹಿಲ್ ಸಿಟಿ ವತಿಯಿಂದ ‘ಯುವ ಸಬಲೀಕರಣ’ ತರಬೇತಿ ಕಾರ್ಯಕ್ರಮವನ್ನು ಆ.5 ರಂದು ಹಮ್ಮಿಕೊಳ್ಳಲಾಗಿತ್ತು. ಸಭೆಯ ಅಧ್ಯಕ್ಷತೆ ಜೇಸಿಐ ಮಣಿಪಾಲ ಹಿಲ್ ಸಿಟಿ ಅಧ್ಯಕ್ಷ ಜೇಸಿ ಜಯಂತ ತಲವಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜಿನ ಪ್ರಾಂಶುಪಾಲ ಕಾಂತರಾಜ್ ಎ.ಎನ್., ಸಂಪನ್ಮೂಲ ವ್ಯಕ್ತಿಯಾಗಿ ಜೇ.ಸಿ.ಐ. ಸೆನೆಟರ್ ಸುಭಾಷ್ ಬಂಗೇರ, ಐಕಾನಿಕ್ ತರಬೇತುದಾರರು, ಜೇಸಿಐ ಭಾರತ, ಹಾಗೂ ಜೊತೆಗೆ ಕಾಲೇಜಿನ ಪ್ರಾಧ್ಯಾಪಕ ವೃಂದದವರು ಹಾಗೂ ಜೇ.ಸಿ.ಐ. ನ […]

ಮಣಿಪಾಲ: ಮಾಹೆ ವತಿಯಿಂದ ನಮಾಮಿ ಗಂಗೆ ಅರಿವು ಕಾರ್ಯಾಗಾರ

ಮಣಿಪಾಲ: ಮಾಹೆ ವತಿಯಿಂದ ಎಂ.ಸಿ.ಎನ್.ಎಸ್ ನ ಪ್ಲಾಟಿನಂ ಹಾಲ್ ನಲ್ಲಿ ಶನಿವಾರದಂದು ನಡೆದ ನಮಾಮಿ ಗಂಗೆ ಅರಿವು ಕಾರ್ಯಾಗಾರದಲ್ಲಿ ನದಿಯ ಪಾವಿತ್ರ್ಯತೆ, ಅವುಗಳ ಪ್ರಾಮುಖ್ಯತೆ, ಮನುಷ್ಯನ ಜೀವನದಲ್ಲಿ ನೀರಿನ ಪಾತ್ರ, ಹಿಂದಿನ ಕಾಲದಿಂದಲೂ ರಾಜ ಮಹಾರಾಜರುಗಳಿಂದ ಕೆರೆಗಳನ್ನು ಕಟ್ಟಿಸಿದ ಉದ್ದೇಶ ಇವೆಲ್ಲದರ ಬಗ್ಗೆ ಶಾಲಾ-ಕಾಲೇಜುಗಳ ಮಕ್ಕಳಿಗೆ ಅರಿವು ಮೂಡಿಸಲಾಯಿತು. ಗಣ್ಯರು ಹಾಗೂ ಪ್ರಾಧ್ಯಾಪಕರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಗಂಗಾನದಿಯ ಹುಟ್ಟು ಹಾಗೂ ಭಾರತದಲ್ಲಿ ಅದಕ್ಕೆ ಇರುವ ಮಹತ್ವದ ಬಗ್ಗೆ ತಿಳಿಸಲಾಯಿತು.