ಪಿಲಿಕುಳ ಅರ್ಬನ್ ಇಕೋ ಪಾರ್ಕ್ ಅಭಿವೃದ್ಧಿಗೆ ಕೂಡಲೇ ಬಾಕಿ ಅನುದಾನ ಬಿಡುಗಡೆ ಮಾಡಲು ಮನವಿ ಸಲ್ಲಿಸಿದ ಮಂಜುನಾಥ ಭಂಡಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿರುವ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ) ದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುದಾನದಿಂದ ಸ್ಥಾಪನೆಯಾದ ಅರ್ಬನ್ ಇಕೋ ಪಾರ್ಕ್ ಯೋಜನೆಗೆ ಸಂಬಂಧಿಸಿದಂತೆ ಬಾಕಿ ಅನುದಾನವನ್ನು ಬಿಡುಗಡೆ ಮಾಡುವ ಕುರಿತು ಶಾಸಕರಾದ ಮಂಜುನಾಥ ಭಂಡಾರಿ ಮನವಿ ಸಲ್ಲಿಸಿದ್ದಾರೆ. ಮಂಗಳೂರಿನ ಪಿಲಿಕುಳದಲ್ಲಿ 356 ಎಕರೆ ವಿಸ್ತೀರ್ಣದ ಪ್ರದೇಶದಲ್ಲಿ ಪಶ್ಚಿಮ ಘಟ್ಟದ ಸಸ್ಯಸಂಪತ್ತು ಹಾಗೂ ವನ್ಯಜೀವಿ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಸಂರಕ್ಷಣೆ, ವಿದ್ಯಾರ್ಥಿ ಹಾಗೂ […]