ಉಡುಪಿಯಲ್ಲಿ ಮೊಂತಿ ಫೆಸ್ಟ್ ಸಂಭ್ರಮ

ಉಡುಪಿ: ಕರಾವಳಿ ಕ್ರೈಸ್ತ ಬಾಂಧವರ ಅತ್ಯಂತ ಶ್ರದ್ಧೆಯ ಹಬ್ಬ ತೆನಹಬ್ಬ ಹಾಗೂ  ಕನ್ಯಾಮರಿಯಮ್ಮನವರ ಜನ್ಮದಿನ (ಮೊಂತಿ ಫೆಸ್ಟ್) ವನ್ನು ಕೊರೊನಾ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಸರಳ ರೀತಿಯಲ್ಲಿ ಮಂಗಳವಾರ ಆಚರಿಸಲಾಯಿತು. ಜಿಲ್ಲೆಯ ಎಲ್ಲ ಚರ್ಚ್ ಗಳಲ್ಲಿ ಧರ್ಮಗುರುಗಳು ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಭತ್ತದ ತೆನೆಯನ್ನು ಆಶಿರ್ವಾದಿಸಿ ಬಲಿಪೂಜೆಗಳನ್ನು ನೆರವೇರಿಸಲಾಯಿತು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಉಡುಪಿ ಶೋಕ ಮಾತಾ ಇಗರ್ಜಿಯಲ್ಲಿ ಹೊಸ ತೆನೆಗಳನ್ನು ಆಶೀರ್ವಾದಿಸಿ  ಬಲಿಪೂಜೆಯನ್ನು ನೆರವೇರಿಸಿ […]