ಅಕ್ರಮ ಮರಳು ದಾಸ್ತಾನು ಕಂಡುಬಂದಲ್ಲಿ ಕ್ರಿಮಿನಲ್ ಮೊಕದ್ದಮೆ : ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಜಿಲ್ಲೆಯಲ್ಲಿ ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳು ತೆಗೆಯುವ ಅವಧಿಯು ಮುಕ್ತಾಯಗೊಂಡಿದ್ದು, ಈ ಅವಧಿಯಲ್ಲಿ 4 ಲಕ್ಷ ಮೆಟ್ರಿಕ್ ಟನ್ ಮರಳು ತೆಗೆದು ವಿತರಿಸಲಾಗಿದೆ, ಪ್ರಸ್ತುತ ತೆಗೆದಿರುವ ಮರಳು ಜಿಲ್ಲೆಯಿಂದ ಹೊರ ಹೋಗಲು ಅವಕಾಶ ನೀಡಿಲ್ಲ, ಆದರೆ ತೆಗೆದಿರುವ ಅಷ್ಟೂ ಮರಳು ಸಾರ್ವಜನಿಕರಿಗೆ ಸಂಪೂರ್ಣವಾಗಿ ವಿತರಣೆಯಾಗದೇ, ಅನಧಿಕೃತವಾಗಿ ದಾಸ್ತಾನು ಮಾಡಿರುವ ಸಾಧ್ಯತೆಯಿದ್ದು, ಹೀಗೆ ಅನಧಿಕೃತವಾಗಿ ಮರಳು ದಾಸ್ತಾನು ಮಾಡಿರುವವರನ್ನು ಪತ್ತೆ ಹಚ್ಚಿ ಅವರ ವಿರುದ್ದ ಕ್ರಮಿನಲ್ ಪ್ರಕರಣ ದಾಖಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. […]