ಉಡುಪಿ ಜಿಲ್ಲಾಧಿಕಾರಿ ಶಿರೂರು ಚೆಕ್‌ಪೋಸ್ಟ್‌ಗೆ ಭೇಟಿ: ತಪಾಸಣೆ ಕ್ರಮ ಪರಿಶೀಲನೆ

ಬೈಂದೂರು: ಶಿರೂರು ಪೊಲೀಸ್‌ ಚೆಕ್‌ ಪೋಸ್ಟ್‌ಗೆ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಭೇಟಿ ನೀಡಿ ತಪಾಸಣೆ ಕ್ರಮವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಕೆ ಅಕ್ಷಯ್‌ ಮಚ್ಚೀಂದ್ರ, ಕುಂದಾಪುರ ಡಿ.ವೈ.ಎಸ್‌.ಪಿ. ಬೆಳ್ಳಿಯಪ್ಪ, ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್‌ ಗಂಗಣ್ಣನವರ್‌, ಬೈಂದೂರು ತಾಲೂಕು ಎ. ಗ್ರೇಡ್‌ ತಹಶೀಲ್ದಾರ್‌ ಪ್ರಭುಸ್ವಾಮಿ ಎ., ಬೈಂದೂರು ತಹಶೀಲ್ದಾರ್‌ ಶ್ರೀಕಾಂತ ಹೆಗ್ಡೆ, ಉಪ ತಹಶೀಲ್ದಾರ್‌ ಭೀಮಪ್ಪ ಬಿಲ್ಲಾರ್‌, ಬೈಂದೂರು ಆರಕ್ಷಕ ಠಾಣೆಯ ವೃತ್ತನಿರೀಕ್ಷಕ ಸಂತೋಷ ಕಾಯ್ಕಿಣಿ, ಶಿರೂರು […]

ವಾರದೊಳಗೆ ಹೆದ್ದಾರಿ ಅಡಚಣೆ ನಿವಾರಣೆ: ಉಡುಪಿ ಜಿಲ್ಲಾಧಿಕಾರಿ ಸೂಚನೆ

ಉಡುಪಿ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಕಂಡುಬರಬಹುದಾದ ಎಲ್ಲಾ ಸಮಸ್ಯೆಗಳ ಮತ್ತು ಸಾರ್ವಜನಿಕರ ಸುಗಮ ಸಂಚಾರಕ್ಕೆ ಇರುವ ಅಡಚಣೆ ನಿವಾರಣೆಗೆ ಒಂದು ವಾರದೊಳಗೆ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ನಿರ್ದೇಶಿಸಿದ್ದಾರೆ.     ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮುಂಬರುವ ಮಳೆಗಾಲದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಸಿದ್ಧತೆ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.           ಜಿಲ್ಲೆಯ ಹಲವೆಡೆ ಹೆದ್ದಾರಿ ಹಾಗೂ ಚರಂಡಿ ಕಾಮಗಾರಿ ಸಮರ್ಪಕ ರೀತಿಯಲ್ಲಿ ಪೂರ್ಣಗೊಳ್ಳದೇ […]