ದೇಶದ ಭದ್ರತೆ ದೃಷ್ಟಿಯಿಂದ ಮೋದಿ ಅವರನ್ನು ಬೆಂಬಲಿಸಿ :ಶೋಭಾ ಕರಂದ್ಲಾಜೆ

ಕುಂದಾಪುರ: ಮಹಾಘಟ್ಬಂಧನ್ ಈಗಾಗಲೇ ಛಿದ್ರವಾಗಿದೆ. ಇದಕ್ಕೆ ರಾಜ್ಯದಲ್ಲಿರುವ ಮೈತ್ರಿ ಸರಕಾರದಲ್ಲಿರುವ ಗೊಂದಲಗಳೇ ಮೊದಲ ವೈಫಲ್ಯ. ದೇಶದ ಭದ್ರತೆ ದೃಷ್ಟಿಯಿಂದ ಮೋದಿ ಸರ್ಕಾರವನ್ನು ಬೆಂಬಲಿಸಿ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹೇಳಿದರು. ಅವರು ಗುರುವಾರ ಕುಂದಾಪುರದ ಕೋರ್ಟ್ನಲ್ಲಿ ಬಾರ್ ಅಸೋಸಿಯೇಶನ್ ಸದಸ್ಯರ ಬಳಿ ಮತಯಾಚಿಸಿದ ಬಳಿಕ ಮಾತನಾಡಿದರು. ಉಡುಪಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಮತ್ತೊಮ್ಮೆ ಗೆಲ್ಲಿಸಿದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ […]