ಉಡುಪಿಯಲ್ಲಿ ಪ್ರವಾಹ ಹಿನ್ನೆಲೆ: ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸಂಸದೆ ಶೋಭಾ ಸೂಚನೆ

ಉಡುಪಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಜಿಲ್ಲೆಯಾದ್ಯಂತ ಹಲವಾರು ತಗ್ಗು ಪ್ರದೇಶಗಳಲ್ಲಿ ಮನೆಗಳು ಆಸ್ತಿ-ಪಾಸ್ತಿ ಮುಳುಗಡೆಯಾಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸಂಸದೆ ಶೋಭಾ ಕರಂದ್ಲಾಜೆಯವರು ಚರ್ಚಿಸಿ ಅಗತ್ಯದ ಪರಿಹಾರ ಕಾರ್ಯಗಳನ್ನು ತಕ್ಷಣ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಉಡುಪಿಯಲ್ಲಿ ಪ್ರವಾಹದ ಭೀತಿ ಇರುವ ಕಾರಣದಿಂದ ಇನ್ನು ಹೆಚ್ಚಿನ ವಿಪತ್ತು ಪರಿಹಾರ ಕಾರ್ಯಪಡೆಯನ್ನು ಕಳಿಸಿಕೊಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಾದ ಟಿ. ಎಂ ವಿಜಯ ಭಾಸ್ಕರ್ ಅವರೊಂದಿಗೆ ಸಂಸದೆ ಶೋಭಾ ಕರಂದ್ಲಾಜೆಯವರು ಮನವಿಮಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಈಗಾಗಲೇ ಮಂಗಳೂರಿನಿಂದ ಒಂದು […]