ನಿರ್ಮಾಣ್‌ ಬಿಲ್ಡರ್ ವತಿಯಿಂದ ಮಕ್ಕಳಿಗೆ ವಿಶೇಷ ಸ್ಪರ್ಧೆ ಉದ್ಘಾಟನೆ

ಮಂಗಳೂರು : ನಿರ್ಮಾಣ್‌ ಬಿಲ್ಡರ್ ವತಿಯಿಂದ 73ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳಿಗೆ ಚಿತ್ರ ಬಿಡಿಸುವ ಸ್ಪರ್ಧೆ, ಕಲರಿಂಗ್‌ ಮತ್ತು ಛದ್ಮವೇಷ ಸ್ಪರ್ಧೆ ನಗರದ ಭಾರತ್‌ ಮಾಲ್ ನಲ್ಲಿ ನಡೆಯಿತು. 400 ಮಕ್ಕಳಿಗೆ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ದ್ರಿತಿ ಎಸ್‌. ಪ್ರಥಮ, ಸಿಂಚನಾ ಕೋಟ್ಯಾನ್‌ ದ್ವಿತೀಯ ಹಾಗೂ ಶೀಯಾನ್‌ ತೃತೀಯ ಬಹುಮಾನ ಪಡೆದರು. ಕಲರಿಂಗ್‌ ಸ್ಪರ್ಧೆಯಲ್ಲಿ ವೈಭವಿ ಅಳಕೆ ಪ್ರಥಮ, ಕಾರ್ತಿಕ್‌ ಎಸ್‌. ದ್ವಿತೀಯ ಹಾಗೂ ಭಾರ್ಗವಿ ಎಸ್‌. ಆಚಾರ್ಯ ತೃತೀಯ ಬಹುಮಾನ ಪಡೆದರು. […]