ವ್ಯಾಯಾಮ-ನಿಯಮಿತ ಆಹಾರ ಪದ್ದತಿಯಿಂದ ಮಧುಮೇಹ ನಿಯಂತ್ರಣ: ನಿಶಾ ಜೇಮ್ಸ್

ಉಡುಪಿ: ಪ್ರತಿದಿನ ವ್ಯಾಯಾಮ, ನಿಯಮಿತ ಆಹಾರ ಸೇವನೆ ಹಾಗೂ ಆಗಾಗ ವೈದ್ಯಕೀಯ ಪರೀಕ್ಷೆಗೆ ಒಳಗಾಗುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌ ಹೇಳಿದರು. ವಿಶ್ವ ಮಧುಮೇಹ (ಡಯಾಬಿಟಿಸ್‌) ದಿನದ ಅಂಗವಾಗಿ ಆದರ್ಶ ಆಸ್ಪತ್ರೆ, ಜಿಲ್ಲಾಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಎನ್‌ಸಿಡಿ ಘಟಕ ಹಾಗೂ ಪಿಪಿಸಿ ಕಾಲೇಜಿನ ಸಹಯೋಗದಲ್ಲಿ ಅಜ್ಜರಕಾಡಿನಲ್ಲಿ ಭಾನುವಾರ ಆಯೋಜಿಸಿದ್ದ ಬೃಹತ್‌ ಮಧುಮೇಹ ಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು. ಮಧುಮೇಹ […]