ಸೆಪ್ಟೆಂಬರ್ 28ರಿಂದ ಉಡುಪಿ ಶ್ರೀಕೃಷ್ಣಮಠ ಭಕ್ತರ ಪ್ರವೇಶಕ್ಕೆ ಮುಕ್ತ

ಉಡುಪಿ: ಸೆಪ್ಟೆಂಬರ್ 28ರಿಂದ ಉಡುಪಿ ಶ್ರೀಕೃಷ್ಣಮಠದಲ್ಲಿ ಭಕ್ತರಿಗೆ ಕೆಲ ನಿಬಂಧನೆಗಳೊಂದಿಗೆ ದೇವರ ದರ್ಶನ ಪಡೆಯಲು ಅವಕಾಶ ನೀಡಲಾಗುವುದು. ಪರ್ಯಾಯ ಅದಮಾರು ಮಠ ವಿಶ್ವಪ್ರಿಯತೀರ್ಥ ಶ್ರೀಪಾದರ ಮಾರ್ಗದರ್ಶನದಂತೆ ಪರ್ಯಾಯ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಮಠದ ವ್ಯವಸ್ಥಾಪಕರಾದ ಗೋವಿಂದರಾಜ್ ತಿಳಿಸಿದ್ದಾರೆ. ಇಂದು ಮಠದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಸೆ.21ರ ಬಳಿಕ ಕೇಂದ್ರ ಸರ್ಕಾರವು ಕೋವಿಡ್ ಮಾರ್ಗಸೂಚಿಗಳನ್ನು ಸಡಿಲಗೊಳಿಸಿರುವುದರಿಂದ ಕೆಲವೊಂದು ಷರತ್ತುಗಳೊಂದಿಗೆ ಶ್ರೀಕೃಷ್ಣಮಠದಲ್ಲಿ ಸೆ. 28ರಿಂದ ಮಧ್ಯಾಹ್ನ 2ಗಂಟೆಯಿಂದ ಸಂಜೆ 5 ಗಂಟೆಯವರೆಗೆ […]