ಎಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ: 5 ಲಕ್ಷ ರೂ ಮೌಲ್ಯದ ಮೌಲ್ಯದ ಕೊಬ್ಬರಿ, ತೆಂಗಿನಕಾಯಿ ಬೆಂಕಿಗಾಹುತಿ

ಪಡುಬಿದ್ರಿ: ಕಣ್ಣಂಗಾರ್ ಬೈಪಾಸ್ ಬಳಿಯ ನಡ್ಸಾಲು ಗ್ರಾಮದ ಸುಶೀಲಾ ಗಾಣಿಗ ಅವರ ಗಾಣಿಗರ ಎಣ್ಣೆ ಮಿಲ್ ನಲ್ಲಿ ಬುಧವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಸುಮಾರು 5 ಲಕ್ಷ ರೂ ಗಳಿಗಿಂತಲೂ ಅಧಿಕ ಮೌಲ್ಯದ ಕೊಬ್ಬರಿ, ತೆಂಗಿನಕಾಯಿ ಬೆಂಕಿಗಾಹುತಿಯಾಗಿ ನಷ್ಟವಾಗಿದೆ. ಮಾಹಿತಿ ತಿಳಿದ ಕೂಡಲೇ ಉಡುಪಿ ಅಗ್ನಿ ಶಾಮಕದಳದವರು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ರಾತ್ರಿ ಮಾಮೂಲಿನಂತೆ […]

ಪಡುಬಿದ್ರಿ ಬಳಿ ಬೈಕ್‌ಗೆ‌ ಟೆಂಪೋ ಢಿಕ್ಕಿ; ಗಾಯಾಳು ಯುವಕ ಆಸ್ಪತ್ರೆಯಲ್ಲಿ ಸಾವು

ಉಡುಪಿ: ಪಡುಬಿದ್ರಿ ಬಳಿ ಬೈಕ್‌ಗೆ‌ ಟೆಂಪೋ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಲಿಮಾರು‌‌ ನಿವಾಸಿ ಖಲಂದರ್ ರಫೀಕ್ ಶನಿವಾರ ಮುಂಜಾನೆ ಮೃತಪಟ್ಟಿದ್ದಾರೆ. ಶುಕ್ರವಾರ ಮಧ್ಯಾಹ್ನ ಎರ್ಮಾಳು ಮಸೀದಿಯಿಂದ ಪಡುಬಿದ್ರಿ ಕಡೆಗೆ ತನ್ನ ಬೈಕ್ ನಲ್ಲಿ ಹೋಗುತ್ತಿದ್ದಾಗ ಹಿಂಬದಿಯಿಂದ ಟೆಂಪೋ ಒಂದು ಬಂದು‌‌ ಢಿಕ್ಕಿ ಹೊಡೆದಿತ್ತು. ಅಪಘಾತದಿಂದ ತೀವ್ರವಾಗಿ ಗಾಯಗೊಂಡಿದ್ದ ಖಲಂದರ್‌ ರಫೀಕ್‌ ಅನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಮುಂಜಾನೆ ಆತ ಅಸುನೀಗಿದ್ದು, ಈ ಬಗ್ಗೆ ಪಡುಬಿದ್ರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.