ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನ ಪ್ರಯುಕ್ತ ಸೇವಾ ಪಾಕ್ಷಿಕ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಉಡುಪಿ ಜಿಲ್ಲೆ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲಇವರ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಸೆಪ್ಟಂಬರ್ 18 ಆದಿತ್ಯವಾರದಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರವರೆಗೆ ಕೆಎಂಸಿ ಮಣಿಪಾಲದ ರಕ್ತನಿಧಿ ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10 ಗಂಟೆಗೆ ಸಭಾ ಕಾರ್ಯಕ್ರಮವಿದ್ದು ಹೆಚ್ಚಿನ ಮಾಹಿತಿಗಾಗಿ ವೀಣಾ ಎಸ್. ಶೆಟ್ಟಿ 9901037557, ರಶ್ಮಿತಾ ಬಿ. ಶೆಟ್ಟಿ 9110831417, ಪ್ರಮೀಳಾ ಹರೀಶ್ […]
ಭಾರತಕ್ಕೆ ಮರಳಲಿವೆ 1950 ರಲ್ಲಿ ಕಣ್ಮರೆಯಾದ ಚೀತಾಗಳು: ಸೆ.17 ರಂದು ಯೋಜನೆ ಬಿಡುಗಡೆ ಮಾಡಲಿರುವ ಪ್ರಧಾನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನ್ಮದಿನವಾದ ಸೆ.17 ರಂದು ‘ಚೀತಾ ಮರು ಪರಿಚಯ’ ಯೋಜನೆಗೆ ಚಾಲನೆ ನೀಡಲಿದ್ದಾರೆ. ಒಡಿಶಾ ರಾಜಧಾನಿ ಭುವನೇಶ್ವರದಲ್ಲಿ ನಡೆಯುತ್ತಿರುವ ಮೃಗಾಲಯ ನಿರ್ದೇಶಕರ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಈ ವಿಷಯವನ್ನು ಬಹಿರಂಗಪಡಿಸಲಾಗಿದೆ. ಈ ಉದ್ದೇಶಕ್ಕಾಗಿ ನಮೀಬಿಯಾದಿಂದ ಚಿರತೆಯನ್ನು ತರಲಾಗುವುದು ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಹೇಳಿದ್ದಾರೆ. 1950 ರ ದಶಕದಲ್ಲಿ ಭಾರತದಿಂದ ಕಣ್ಮರೆಯಾದ ನಂತರ ಚಿರತೆಯನ್ನು ಮರು-ಪರಿಚಯಿಸುತ್ತಿರುವುದು ಇದೇ ಮೊದಲು ಎಂದು […]
ಜಿಲ್ಲಾ ಮಟ್ಟದ ಪ್ರಧಾನಿ ಮೋದಿ ಚಿತ್ರ ಬಿಡಿಸುವ ಸ್ಪರ್ಧೆ

ಉಡುಪಿ/ಮಂಗಳೂರು: ಸೆ.17 ರಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮೆಲ್ಕಾರ್ ಯುವ ಸಂಗಮ ವತಿಯಿಂದ ದ.ಕ ಮತ್ತು ಉಡುಪಿ ಜಿಲ್ಲಾ ಮಟ್ಟದಲ್ಲಿ ಮೋದಿಯವರ ಚಿತ್ರವನ್ನು ಬಿಡಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಶಾಲಾ-ಕಾಲೇಜು ಮತ್ತು ಸಾರ್ವಜನಿಕರಿಗೆ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದೆ. ಎ4 ಸೈಜ್ ಬಿಳಿ ಹಾಳೆಯಲ್ಲಿ ಪೆನ್ಸಿಲ್ ನಿಂದ ಚಿತ್ರ ರಚಿಸಬೇಕಿದ್ದು, ಆಯ್ಕೆಯಾದ ಚಿತ್ರಕ್ಕೆ ಸೂಕ್ತ ಬಹುಮಾನ ನೀಡಲಾಗುವುದು. ಚಿತ್ರದ ಕೆಳಭಾಗದಲ್ಲಿ ಸ್ಪರ್ಧಿಯ ಹೆಸರು- ವಿಳಾಸ, ಮೊಬೈಲ್ ನಂಬ್ರ ನಮೂದಿಸಬೇಕು. ಅನುಭವಿ ಚಿತ್ರಕಲಾವಿದರು ತೀರ್ಪುಗಾರರಾಗಿ ಭಾಗವಹಿಸಲಿದ್ದು, ಅವರ […]
ಇದು ಬ್ರಿಟಿಷರ ಕಾಲದ ರಾಜಪಥ ಅಲ್ಲ: ಇನ್ನು ಮುಂದೆ ಇದು ಆತ್ಮನಿರ್ಭರ ಭಾರತದ ಕರ್ತವ್ಯ ಪಥ

ನವದೆಹಲಿ: ಬ್ರಿಟಿಷರ ಕಾಲದ ಗುಲಾಮಗಿರಿಯ ಎಲ್ಲಾ ಸಂಕೇತಗಳನ್ನು ನಿರ್ಮೂಲನೆ ಮಾಡುವ ಪಣ ತೊಟ್ಟಿರುವ ಪ್ರಧಾನಿ ಮೋದಿ, ಐ.ಎನ್. ಎಸ್ ವಿಕ್ರಾಂತ್ ನಲ್ಲಿರುವ ಬ್ರಿಟಿಷರ ಕಾಲದ ನೌಕಾ ಧ್ವಜವನ್ನು ಬದಿಗೊತ್ತಿ ಛತ್ರಪತಿ ಶಿವಾಜಿ ಮಹಾರಾಜರ ನೌಕಾ ಧ್ವಜದಿಂದ ಪ್ರೇರಿತ ಧ್ವಜವನ್ನು ಅನಾವರಣಗೊಳಿಸಿದ ಬೆನ್ನೆಲ್ಲೇ, ದೆಹಲಿಯ ರಾಜಪಥದ ಹೆಸರನ್ನು ಬದಲಿಸಿ ಇನ್ನು ಮುಂದೆ ಅದನ್ನು ‘ಕರ್ತವ್ಯ ಪಥ’ವೆಂದು ಘೋಷಿಸಲು ಬೇಕಾದ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್ವರೆಗೆ ಸೆಂಟ್ರಲ್ ವಿಸ್ಟಾದ ಕರ್ತವ್ಯ […]
ಶಿಕ್ಷಕರ ದಿನಾಚರಣೆಯಂದು ಪಿಎಂ-ಶ್ರೀ ಶಾಲಾ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ

ನವದೆಹಲಿ: ಶಿಕ್ಷಕರ ದಿನಾಚರಣೆಯಂದು ಭಾರತದಾದ್ಯಂತದ 14,500 ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣ ಯೋಜನೆಗೆ ಪ್ರಧಾನಿ ಮೋದಿ ಶ್ರೀ ಕಾರ ನೀಡಿದ್ದಾರೆ. ಸೋಮವಾರ ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ, “ಇಂದು, ಶಿಕ್ಷಕರ ದಿನದಂದು ನಾನು ಹೊಸ ಉಪಕ್ರಮವನ್ನು ಘೋಷಿಸಲು ಸಂತೋಷಪಡುತ್ತೇನೆ. ಪ್ರಧಾನ ಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ (PM-SHRI) ಯೋಜನೆ ಅಡಿಯಲ್ಲಿ ಭಾರತದಾದ್ಯಂತ 14,500 ಶಾಲೆಗಳ ಅಭಿವೃದ್ಧಿ ಮತ್ತು ಉನ್ನತೀಕರಣವಾಗಲಿದೆ. ಇವುಗಳು ರಾಷ್ಟ್ರೀಯ ಶಿಕ್ಷಣ ನೀತಿಯ ಪೂರ್ಣ ಚೈತನ್ಯವನ್ನು ಆವರಿಸುವ ಮಾದರಿ ಶಾಲೆಗಳಾಗುತ್ತವೆ” […]