ಕೊಡವೂರು: ಬಸ್ ನಿಲ್ದಾಣಗಳನ್ನು ಸ್ವಚ್ಛ ಮಾಡುವ ಮೂಲಕ ಮೋದಿ ಜನ್ಮ ದಿನಾಚರಣೆ

ಕೊಡವೂರು: ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ನಿಮಿತ್ತ ಕೊಡವೂರಿನ ಕಾರ್ಯಕರ್ತರು ಮತ್ತು ಹಿರಿಯ ನಾಗರಿಕರು ಸೇರಿಕೊಂಡು ಕೊಡವೂರು ವಾರ್ಡಿನಲ್ಲಿರುವ ಎಲ್ಲಾ ಬಸ್ ನಿಲ್ದಾಣಗಳನ್ನು ಸ್ವಚ್ಛ, ಸುಂದರಗೊಳಿಸುವ ಮೂಲಕ ಪ್ರಯಾಣಿಕರಿಗೆ ಒಳ್ಳೆಯ ವಾತಾವರಣ ಕಲ್ಪಿಸಿದ್ದೇವೆ. ನಾವೆಲ್ಲರೂ ಮೋದಿಯವರು ಹಾಕಿಕೊಟ್ಟ ಹೆಜ್ಜೆಗುರುತಿನಲ್ಲಿ ನಡೆಯಬೇಕು. ಬಸ್ ನಿಲ್ದಾಣ ಸ್ವಚ್ಛಗೊಳಿಸುವ ಈ ಕಾರ್ಯದಲ್ಲಿ ಹಲವಾರು ಕಾರ್ಯಕರ್ತರು ಮತ್ತು ಹಿರಿಯ ನಾಗರಿಕರು ಭಾಗವಹಿಸಿದ್ದಾರೆ ಅವರೆಲ್ಲರಿಗೂ ಧನ್ಯವಾದ ಸಮರ್ಪಿಸುತ್ತೇನೆ ಎಂದು ಕೊಡವೂರು ನಗರಸಭಾ ಸದಸ್ಯ ವಿಜಯ್ ಕೊಡವೂರು ಹೇಳಿದರು. ಪ್ರಧಾನಿ ಮೋದಿ […]
ಮೋದಿ ಬ್ರಿಗೇಡ್ ವತಿಯಿಂದ ಮನೆ ಮನೆಗೆ ಮೋದಿ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬದ ಪ್ರಯುಕ್ತ ಉಡುಪಿ ಜಿಲ್ಲಾ ಮೋದಿ ಬ್ರಿಗೇಡ್ ವತಿಯಿಂದ ಜಿಲ್ಲೆಯ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ, ‘ಮನೆ ಮನೆಗೆ ಮೋದಿ ಯೋಜನೆ ‘ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಸುಜಿತ್ ಮತ್ತು ಡಾ. ಸುಭಾಸ್ ಕಿಣಿ ಚಾಲನೆ ನೀಡಿದರು. ಮೋದಿ ಬ್ರಿಗೇಡ್ ಜಿಲ್ಲಾಧ್ಯಕ್ಷ ಸುಭಾಷಿತ್ ಕುಮಾರ್, ಉಪಾಧ್ಯಕ್ಷ ಚಿನ್ಮಯ ಮೂರ್ತಿ ಮತ್ತು ಚಂದ್ರಕಾಂತ್ ದೇವಾಡಿಗ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ […]
ಒಂದೇ ದಿನದಲ್ಲಿ ಗರಿಷ್ಠ ಸಂಖ್ಯೆಯ ರಕ್ತದಾನ: ಹೊಸ ವಿಶ್ವ ದಾಖಲೆ ಸೃಷ್ಟಿಸಿದ ಭಾರತ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ 72 ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ‘ರಕ್ತದಾನ ಅಮೃತ ಮಹೋತ್ಸವ’ ಕಾರ್ಯಕ್ರಮದ ಅಡಿಯಲ್ಲಿ ಭಾರತವು ನಿನ್ನೆ ಒಂದೇ ದಿನದಲ್ಲಿ ಗರಿಷ್ಠ ಸಂಖ್ಯೆಯ ರಕ್ತದಾನಗಳ ಹೊಸ ವಿಶ್ವ ದಾಖಲೆಯನ್ನು ಬರೆದಿದೆ. ಇದು ದೇಶದಾದ್ಯಂತ ನಡೆದ ಅತಿ ದೊಡ್ಡ ರಕ್ತದಾನ ಅಭಿಯಾನವಾಗಿತ್ತು. ಶನಿವಾರದಂದು 6112 ಕ್ಕೂ ಹೆಚ್ಚು ಅನುಮೋದಿತ ಶಿಬಿರಗಳಲ್ಲಿ 1 ಲಕ್ಷಕ್ಕೂ ಹೆಚ್ಚು ದಾನಿಗಳು ರಕ್ತದಾನ ಮಾಡಿದ್ದು, ಈ ಸಂಖ್ಯೆ ಇನ್ನೂ ಹೆಚ್ಚುತ್ತಲಿದೆ. ಈ ಅಭಿಯಾನವು ನಿಯಮಿತ ಸಂಭಾವನೆ ಪಡೆಯದ ಸ್ವಯಂಪ್ರೇರಿತ ರಕ್ತದಾನಗಳ ಬಗ್ಗೆ […]
ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಗಳ ಬಿಡುಗಡೆ: ಚಿರತೆಗಳನ್ನು ನೋಡಲು ಇನ್ನೂ ಸ್ವಲ್ಪ ಕಾಯಬೇಕು ಎಂದ ಪ್ರಧಾನಿ

ನಮೀಬಿಯಾದಿಂದ ಸ್ಥಳಾಂತರಗೊಳಿಸಲಾದ 8 ಚಿರತೆಗಳನ್ನು ಶನಿವಾರದಂದು ಪ್ರಧಾನಿ ಮೋದಿ, ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಬಿಡುಗಡೆಗೊಳಿಸಿದರು. ಆ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿ, ಪ್ರಕೃತಿ ಮತ್ತು ಪರಿಸರವನ್ನು ರಕ್ಷಿಸಿದಾಗ ನಮ್ಮ ಭವಿಷ್ಯವೂ ಸುಭದ್ರವಾಗುತ್ತದೆ. ಬೆಳವಣಿಗೆ ಮತ್ತು ಸಮೃದ್ಧಿಯ ಮಾರ್ಗಗಳು ಸಹ ತೆರೆದುಕೊಳ್ಳುತ್ತವೆ. ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಗಳು ಮತ್ತೆ ಓಡಾಡುವಾಗ ಹುಲ್ಲುಗಾವಲು ಪರಿಸರ ವ್ಯವಸ್ಥೆ ಮತ್ತೆ ಪುನಃಸ್ಥಾಪಿತವಾಗುತ್ತದೆ. ಜೈವಿಕ ವೈವಿಧ್ಯತೆ ಮತ್ತಷ್ಟು ಹೆಚ್ಚಾಗುತ್ತದೆ. ಮುಂದಿನ ದಿನಗಳಲ್ಲಿ ಇಲ್ಲಿ ಪರಿಸರ ಪ್ರವಾಸೋದ್ಯಮವೂ ಹೆಚ್ಚಾಗಲಿದೆ, ಇಲ್ಲಿ ಅಭಿವೃದ್ಧಿಯ ಹೊಸ ಸಾಧ್ಯತೆಗಳು ಹುಟ್ಟಿಕೊಳ್ಳುತ್ತವೆ, […]
ಬಿ747 ಜಂಬೋ ಜೆಟ್ ನಲ್ಲಿ ಭಾರತಕ್ಕೆ ಬರಲಿವೆ 8 ಚಿರತೆಗಳು: ವಿಮಾನದ ಮನಮೋಹಕ ಚಿತ್ರ ಹಂಚಿಕೊಂಡ ಅಧಿಕಾರಿಗಳು

ವಿಂಡ್ಹೋಕ್: ವಿಶೇಷ ವಿಮಾನವೊಂದು ನಮೀಬಿಯಾದಿಂದ ಭಾರತಕ್ಕೆ ಚಿರತೆಗಳನ್ನು ಕರೆತರುತ್ತಿರುವ ಸುಂದರ ಚಿತ್ರ ಕಣ್ಮುಂದೆ ಬಂದಿದೆ. ಇದರಲ್ಲಿ ಚಿರತೆಗಳ ಸುಂದರ ವರ್ಣಚಿತ್ರಗಳನ್ನು ಮಾಡಲಾಗಿದೆ. ವಿಮಾನಯಾನ ಸಂಸ್ಥೆಯು ಈ ವಿಮಾನಕ್ಕೆ 118 ಎನ್ನುವ ವಿಶೇಷ ಸಂಖ್ಯೆ ನೀಡಿದೆ. ಈ ಕಂಪನಿಯು ಇದೆ ಮೊದಲ ಬಾರಿಗೆ ಚಿರತೆಗಳನ್ನು ಸ್ಥಳಾಂತರಿಸುತ್ತಿದೆ. ಈ ದೊಡ್ಡ ವಿಮಾನದಲ್ಲಿ 8 ಚಿರತೆಗಳನ್ನು ಭಾರತಕ್ಕೆ ತರಲಾಗುವುದು. ಚಿರತೆಗಳನ್ನು ಭಾರತಕ್ಕೆ ತರಲು ವಿಶೇಷ ವಿಮಾನ ನಮೀಬಿಯಾಕ್ಕೆ ಆಗಮಿಸಿದ್ದು, ನಮೀಬಿಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ವಿಮಾನದ ಚಿತ್ರವನ್ನು ಟ್ವೀಟ್ ಮಾಡಿದೆ. A […]