ರಾಷ್ಟ್ರರಾಜಧಾನಿಯಲ್ಲಿ ‘ಭಾರತ ಡ್ರೋನ್ ಮಹೋತ್ಸವ’: ದೇಶದ ಅತಿದೊಡ್ಡ ಡ್ರೋನ್ ಉತ್ಸವವನ್ನು ಉದ್ಘಾಟಿಸಲಿರುವ ಪ್ರಧಾನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರದಂದು ದೆಹಲಿಯ ಪ್ರಗತಿ ಮೈದಾನದಲ್ಲಿ ದೇಶದ “ಅತಿದೊಡ್ಡ ಡ್ರೋನ್ ಉತ್ಸವ” ಎಂದು ಕರೆಯಲ್ಪಡುವ ಭಾರತ್ ಡ್ರೋನ್ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ಈ ವಲಯದಲ್ಲಿ ಭಾರತದ ಉಪಸ್ಥಿತಿಯನ್ನು ಹೆಚ್ಚಿಸುವ ಉದ್ದೇಶದಿಂದ ಸ್ಟಾರ್ಟ್‌ಅಪ್‌ಗಳು ಸೇರಿದಂತೆ ಪ್ರಮುಖ ಪಾಲುದಾರರನ್ನು ಈ ವೇದಿಕೆ ಒಟ್ಟುಗೂಡಿಸುತ್ತದೆ. ತಂತ್ರಜ್ಞಾನ ಮತ್ತು ನಾವೀನ್ಯತೆಯಲ್ಲಿ ಆಸಕ್ತಿ ಹೊಂದಿರುವ ಎಲ್ಲರೂ ಕಾರ್ಯಕ್ರಮವನ್ನು ವೀಕ್ಷಿಸುವಂತೆ ನಾನು ಒತ್ತಾಯಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನಮಂತ್ರಿ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ಮೋದಿ ಅವರು ಕಿಸಾನ್ ಡ್ರೋನ್ […]

ರಸಗೊಬ್ಬರ ಬೆಲೆ ಏರಿಕೆ: ರೈತ ರಕ್ಷಣೆಗಾಗಿ ರೂ 3.4 ಲಕ್ಷ ಕೋಟಿ ಸಹಾಯಧನ; ಕೇಂದ್ರ ಸರ್ಕಾರದ ವಾಗ್ದಾನ

ನವದೆಹಲಿ: ಜಾಗತಿಕವಾಗಿ ಏರುತ್ತಿರುವ ರಸಗೊಬ್ಬರಗಳ ಬೆಲೆಯಿಂದ ರೈತರನ್ನು ರಕ್ಷಿಸಲು 2022-23 ರ ಕೇಂದ್ರ ಬಜೆಟ್‌ನಲ್ಲಿ ಈಗಾಗಲೇ ಮಂಜೂರು ಮಾಡಲಾದ 1.05 ಲಕ್ಷ ಕೋಟಿ ರೂಪಾಯಿಗಳ ಜೊತೆಗೆ ಹೆಚ್ಚುವರಿಯಾಗಿ 1.10 ಲಕ್ಷ ಕೋಟಿ ರೂಪಾಯಿಗಳನ್ನು ರೈತರಿಗೆ ನೀಡಲಾಗುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಕೇಂದ್ರ ಅಬಕಾರಿ ಸುಂಕ ಕಡಿತವನ್ನು ಘೋಷಿಸಿ, “ನಾವು ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಲೀಟರ್‌ಗೆ 8 ರೂಪಾಯಿ ಮತ್ತು ಡೀಸೆಲ್‌ಗೆ 6 […]

ವಿಶ್ರಾಂತಿ ಪಡೆಯಲು ಸಮಯವಿಲ್ಲ, 2024 ಕ್ಕೆ ಸಿದ್ಧರಾಗಿ: ಯೋಗಿ ಸಂಪುಟ ಭೇಟಿಯಾದ ಪ್ರಧಾನಿಯಿಂದ ‘ಬುಲ್ಡೋಜರ್ ಅಭಿಯಾನಕ್ಕೆ’ ಶ್ಲಾಘನೆ

ಉತ್ತರ ಪ್ರದೇಶ: ಸೋಮವಾರ ಸಂಜೆ ಲಕ್ನೋನಲ್ಲಿ ಯೋಗಿ ಆದಿತ್ಯನಾಥ್ ಸಂಪುಟದೊಂದಿಗೆ ಚಿಂತನ-ಮಂಥನ ಸಭೆ ನಡೆಸಿದ ಪ್ರಧಾನಿ ಮೋದಿ, ಉತ್ತಮ ಆಡಳಿತದಿಂದ ಮಾತ್ರ ಅಧಿಕಾರದ ಹಾದಿ ಸುಗಮವಾಗುತ್ತದೆ ಎಂದು ಕಿವಿಮಾತು ಹೇಳಿದ್ದಾರೆ. ಯೋಗಿ ಸಂಪುಟದ ಸಚಿವರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಸಚಿವರು ಸಾರ್ವಜನಿಕರ ಸೇವೆಗೆ ಮುಡುಪಾಗಿರಬೇಕು. ವಿಶ್ರಾಂತಿಗೆ ಸಮಯ ಉಳಿದಿಲ್ಲ, 2024 ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಎಲ್ಲರೂ ಸಿದ್ಧತೆಗಳನ್ನು ಪ್ರಾರಂಭಿಸಬೇಕು ಎಂದಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ. ಅಪರಾಧಿಗಳ ವಿರುದ್ಧ ಯೋಗಿ ಆದಿತ್ಯನಾಥ್ ಸರ್ಕಾರದ […]

ಪಿಎಸ್ಐ ನೇಮಕಾತಿ ಹಗರಣ: ಪ್ರಧಾನಿ ಮೋದಿಗೆ ರಕ್ತದಲ್ಲಿ ಬರೆದ ಅನಾಮಧೇಯ ಪತ್ರ ವೈರಲ್!

ಬೆಂಗಳೂರು : ಹಗರಣಗಳಿಂದ ಹತಾಶರಾಗಿರುವ ಪಿಎಸ್ಐ ಅಭ್ಯರ್ಥಿಗಳು ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪಿಎಸ್ಐ ಅಭ್ಯರ್ಥಿಗಳು ಬರೆದಿದ್ದಾರೆ ಎನ್ನಲಾಗುವ ಈ ಪತ್ರದಲ್ಲಿ ಯಾರದ್ದೇ ಹೆಸರು ಉಲ್ಲೇಖವಾಗಿಲ್ಲ. ರಾಜ್ಯದಲ್ಲಿ ಪಿಎಸ್ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮದ ಸುದ್ದಿಯ ನಡುವೆ, ಪಿಎಸ್ಐ ಅಭ್ಯರ್ಥಿಗಳು ಪ್ರಧಾನಿಗೆ ರಕ್ತದಲ್ಲಿ ಬರೆದಿದ್ದಾರೆ ಎನ್ನಲಾದ ಪತ್ರ ಸಂಚಲನ ಮೂಡಿಸಿದೆ. ಪಿಎಸ್ ಐ ಪರೀಕ್ಷೆಯ ಅಕ್ರಮದಿಂದಾಗಿ ಮೋಸ ಹೋದವರಿಗೆ ನ್ಯಾಯ ಸಿಗಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ. ಅನ್ಯಾಯ ಮಾಡಿದವರನ್ನ ಜೈಲಿಗೆ […]

ಪ್ರಧಾನಿ ಮೋದಿ ಹಿಂದಿನವರಿಗಿಂತ ಭಿನ್ನ; ಅವರು ಭಯೋತ್ಪಾದನೆಯನ್ನು ಕಡೆಗಣಿಸುವುದಿಲ್ಲ ಅಥವಾ ಸಹಿಸುವುದಿಲ್ಲ: ಜೈಶಂಕರ್

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಯೋತ್ಪಾದನೆಯನ್ನು, ವಿಶೇಷವಾಗಿ ಗಡಿಯಾಚೆಗಿನ ಆಕ್ರಾಮಕ ಸ್ವಭಾವವನ್ನು ಸಾಮಾನ್ಯವೆಂದು ಎಂದಿಗೂ ಪರಿಗಣಿಸುವುದಿಲ್ಲವೆಂದು ‘ಸ್ಫಟಿಕದಷ್ಟು ಸ್ಪಷ್ಟವಾಗಿ’ ಹೇಳಿದ್ದಾರೆ. ಈ ನಿರ್ಣಯವು 2014 ರಿಂದ ಈಚೆಗೆ ಪಾಕಿಸ್ತಾನದ ಬಗ್ಗೆ ಭಾರತದ ನೀತಿಯನ್ನು ರೂಪಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. “ಮೋದಿ@20: ಡ್ರೀಮ್ಸ್ ಮೀಟ್ ಡೆಲಿವರಿ” ಪುಸ್ತಕದಲ್ಲಿ ಈ ಬಗ್ಗೆ ಬರೆದಿರುವ ಜೈಶಂಕರ್, 2015 ರಲ್ಲಿ ವಿದೇಶಾಂಗ ಕಾರ್ಯದರ್ಶಿಯಾದ ನಂತರ ತಮ್ಮ ‘ಸಾರ್ಕ್ ಯಾತ್ರೆ’ಗೆ ಸಿದ್ಧವಾಗುತ್ತಿರುವಾಗ, ಮೋದಿ ನೀಡಿದ ಸೂಚನೆಗಳನ್ನು ನೆನಪಿಸಿಕೊಂಡಿದ್ದಾರೆ. “ನನ್ನ ಅನುಭವ […]