ಶ್ರೀ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣ ಸ್ವಾಮೀಜಿ ಬಂಧನ

ಚಿತ್ರದುರ್ಗ: ಶ್ರೀ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ನಿನ್ನೆ ರಾತ್ರಿ ಬಂಧಿಸಲಾಗಿದೆ. ಅಪ್ರಾಪ್ತ ವಯಸ್ಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ 6 ದಿನಗಳ ನಂತರ ಶಿವಮೂರ್ತಿ ಅವರನ್ನು ಬಂಧಿಸಲಾಯಿತು. ಚಿತ್ರದುರ್ಗ ಜಿಲ್ಲೆಯ ತಮ್ಮ ಮಠದಿಂದ ನಡೆಸಲ್ಪಡುವ ಹಾಸ್ಟೆಲ್‌ನಲ್ಲಿ ಇಬ್ಬರು ಅಪ್ರಾಪ್ತ ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಇವರ ಮೇಲಿದೆ. ಶಿವಮೂರ್ತಿಯವರನ್ನು ಬಂಧಿಸುವ […]

ಅಪ್ರಾಪ್ತ ಬಾಲಕಿಗೆ ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ: ಕಾರ್ಕಳ ಯುವಕನ ಬಂಧನ

ಕಾರ್ಕಳ: ಕಾರ್ಕಳದ ಹುಡ್ಕೋ ನಿವಾಸಿ, ಅನ್ಯಕೋಮಿನ ಹುಡುಗ ಮಹಮ್ಮದ್ ಯಾಸಿನ್ (21) ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಕಾರ್ಕಳದ ಹಿಂದೂ ಅಪ್ರಾಪ್ತ ಬಾಲಕಿ(14)ಗೆ ಕಿರುಕುಳ ನೀಡುತ್ತಿದ್ದು, ಈತನ ಮೇಲೆ ದಾಖಲಾದ ದೂರಿನ ಮೇಲೆ ನಗರ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಹಮ್ಮದ್ ಸಾಮಾಜಿಕ ಜಾಲತಾಣದಲ್ಲಿ ಬಾಲಕಿಯ ಪರಿಚಯ ಮಾಡಿಕೊಂಡಿದ್ದು, ಆಕೆಗೆ ಅಶ್ಲೀಲ ಸಂದೇಶಗಳನ್ನು ರವಾನಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ. ಇದಲ್ಲದೆ, ತನ್ನನ್ನು ಪ್ರೀತಿಸುವಂತೆ ಹಾಗೂ ತನ್ನ ಜೊತೆ ಬರುವಂತೆ ಆಕೆಯನ್ನು ಪೀಡಿಸುತ್ತಿದ್ದ ಎನ್ನಲಾಗಿದೆ. ಈ ಕುರಿತು ಶುಕ್ರವಾರ ನಗರ […]