ಶ್ರೀ ಪುತ್ತಿಗೆ ಮಠದ ಚತುರ್ಥ ಪರ್ಯಾಯದ ಪ್ರಮುಖ ಯೋಜನೆಗಳ ಕೇಂದ್ರಕಾರ್ಯಾಲಯ ಉದ್ಘಾಟನೆ.

ಉಡುಪಿ: ಬರುವ 2024-25 ರಲ್ಲಿ ಉಡುಪಿಯ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ನಡೆಯಲಿರುವ ಶ್ರೀ ಪುತ್ತಿಗೆ ಮಠದ ಚತುರ್ಥ ಪರ್ಯಾಯದ ನಿಮಿತ್ತವಾಗಿ ಸಂಕಲ್ಪಿಸಿರುವ ಪ್ರಮುಖ ಯೋಜನೆಗಳ ಕಾರ್ಯಾಲಯ “ಅಂತರ್ಯಾಮಿ” ಕೇಂದ್ರವನ್ನು ಶ್ರೀ ಪುತ್ತಿಗೆ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥಶ್ರೀಪಾದರು ದೀಪವನ್ನು ಬೆಳಗಿಸುವ ಮೂಲಕ ಉದ್ಘಾಟಿಸಿದರು. ಪರ್ಯಾಯದ ಪ್ರಮುಖ ಯೋಜನೆಯಾದ ಕೋಟಿಗೀತಾಲೇಖನ ಯಜ್ಞದ ಅಭಿಯಾನಕ್ಕೂ ಪೂಜ್ಯ ಶ್ರೀಪಾದರು ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಶ್ರೀ ನಾಗರಾಜ ಆಚಾರ್ಯ, ಶ್ರೀ ಪ್ರಸನ್ನ ಆಚಾರ್ಯ, ಶ್ರೀರತೀಶ್ ತಂತ್ರಿ, […]