ಪುತ್ತೂರು: “ಈ ನಾಟಕ ತೂಲೆ” ತುಳು ನಾಟಕದ ಪ್ರಥಮ ಪ್ರದರ್ಶನ ಕಾರ್ಯಕ್ರಮ

ಕಲ್ಪನಾ ಲೋಕ‌ ಪುತ್ತೂರು ಉಡುಪಿ ಇವರು ಅರ್ಪಿಸುವ ನೂತನ ಶೈಲಿಯ ಕಥಾ ನಿರೂಪಣೆಯ “ಈ ನಾಟಕ ತೂಲೆ” ತುಳು ಸಾಮಾಜಿಕ ನಾಟಕದ ಪ್ರಥಮ ಪ್ರದರ್ಶನ ಕಾರ್ಯಕ್ರಮ ಪುತ್ತೂರಿನ ಭಗವತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು. ಇದೇ ಸಂದರ್ಭದಲ್ಲಿ ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ ನಡಿಯಲ್ಲಿ ಅದ್ಧೂರಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಮಧು ವೈ.ಜಿ. ಹಳ್ಳಿ ನಿರ್ದೇಶನದ ಕುದ್ರು ಕನ್ನಡ ಚಲನಚಿತ್ರದ ಟೀಸರ್ ಬಿಡುಗಡೆಗೊಳಿಸಲಾಯಿತು. ಅಲ್ಲದೆ, ಚಿತ್ರದ ಒಂದು ಹಾಡನ್ನು ಇದೇ ವೇಳೆ ಬಿಡುಗಡೆ ಮಾಡಲಾಯಿತು. ಉಡುಪಿ ಕೃಷ್ಣ ಆಚಾರ್ಯ […]