ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನ ಸುವರ್ಣ ಮಹೋತ್ಸವ: ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆಗೆ ರಘುಪತಿ ಭಟ್ ರಿಂದ ಚಾಲನೆ

ಉಡುಪಿ: ಕಲ್ಮಾಡಿಯಲ್ಲಿನ ವೆಲಂಕಣಿ ಮಾತೆಯ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಘೋಷಣೆ ಮತ್ತು ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನ ಸುವರ್ಣ ಮಹೋತ್ಸವದ ಸಂದರ್ಭ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ಆದಿವುಡುಪಿ ಜಂಕ್ಷನ್ ನಿಂದ ಕಲ್ಮಾಡಿ ಚರ್ಚಿನವರೆಗೆ ನಡೆಯಿತು. ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ರಘುಪತಿ ಭಟ್ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಮ್ಮ ಕಾಲೇಜು ದಿನಗಳಲ್ಲಿ ಹೊಸ ವರುಷದಂದು ಕಲ್ಮಾಡಿ ಚರ್ಚಿಗೆ ಭೇಟಿ ನೀಡುತ್ತಿದ್ದನ್ನು ಅವರು ನೆನಪಿಸಿಕೊಂಡರು. ಉಡುಪಿ ಧರ್ಮಕ್ಷೇತ್ರದಲ್ಲಿ ಅತ್ತೂರು, ಕೆರೆಕಟ್ಟೆ ಬಳಿಕ […]
ಮಲ್ಪೆಯಲ್ಲಿ ರಾಜ್ಯದ ಪ್ರಪ್ರಥಮ ತೇಲುವ ಸೇತುವೆ ಉದ್ಘಾಟನೆ

ಉಡುಪಿ: ಸಮುದ್ರದಲ್ಲಿ ತೇಲುವ ರಾಜ್ಯದ ಪ್ರಪ್ರಥಮ ತೇಲುವ ಸೇತುವೆಯನ್ನು ಮಲ್ಪೆ ಬೀಚ್ ನಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಶುಕ್ರವಾರದಂದು ಉದ್ಘಾಟಿಸಿದರು. ಮಲ್ಪೆ ಸಮುದ್ರ ತೀರವು ಈಗಾಗಲೇ ದೇಶ ವಿದೇಶದ ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುತ್ತಿದ್ದು, ಪ್ರಸ್ತುತ ನಿರ್ಮಾಣಗೊಂಡಿರುವ ಸಮುದ್ರದಲ್ಲಿ ತೇಲುವ ಸೇತುವೆಯು ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸಲಿದೆ. ಪ್ರವಾಸಿಗರನ್ನು ಆಕರ್ಷಿಸುವುದು ಮಾತ್ರವಲ್ಲದೇ, ಭದ್ರತೆಯನ್ನು ಒದಗಿಸುವುದು ಕೂಡಾ ನಮ್ಮ ಕರ್ತವ್ಯವಾಗಿದ್ದು, ಫ್ಲೋಟಿಂಗ್ ಬ್ರಿಡ್ಜ್ ಯೋಜನೆಯ ಆರಂಭದಲ್ಲೇ 20 ರಿಂದ 25 ಲೈಫ್ ಗಾರ್ಡ್ಗಳ ನೇಮಕ ಮಾಡಲಾಗುವುದು ಎಂದು ಹೇಳಿದರು. […]
ಸಹಕಾರಿ ಬ್ಯಾಂಕಿನ ನಿರಂತರ ಪ್ರೋತ್ಸಾಹದಿಂದ ಮಹಿಳಾ ಸಬಲೀಕರಣ – ಸುನಿಲ್ ಕುಮಾರ್

ಮಣಿಪಾಲದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ 111ನೇ ಶಾಖೆ, ಮೊಬೈಲ್ ಬ್ಯಾಂಕ್ ಉದ್ಘಾಟನೆ ಮಣಿಪಾಲ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಎಸ್ ಸಿಡಿಸಿಸಿ ಬ್ಯಾಂಕ್) ಇದರ 111ನೇ ಶಾಖೆ ಮತ್ತು ಉಡುಪಿ ಮೊಬೈಲ್ ಬ್ಯಾಂಕ್ ಮಣಿಪಾಲದಲ್ಲಿ ಸೋಮವಾರ ಉದ್ಘಾಟನೆಗೊಂಡಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ದೀಪ ಪ್ರಜ್ವಲನೆಯ ಮಾಡುವ ಮೂಲಕ ನೂತನ ಶಾಖೆಯನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಎಂ. ಐ. ಟಿ. ಕಾಲೇಜ್ ಬಳಿಯ ಮೈದಾನದಲ್ಲಿ ನಡೆದ ನವೋದಯ […]
ಉಡುಪಿ ಕಲ್ಸಂಕ ಜಂಕ್ಷನ್ ವಾಹನ ದಟ್ಟಣೆ ತಪ್ಪಿಸಲು ಸರ್ಕಲ್ ನಿರ್ಮಾಣಕ್ಕೆ ಚಿಂತನೆ

ಉಡುಪಿ: ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169ಎ ಹಾದುಹೋಗುವ ಕಲ್ಸಂಕ ಜಂಕ್ಷನ್ ನಲ್ಲಿ ಅತಿಯಾದ ವಾಹನ ದಟ್ಟಣೆಯಿಂದ ಸಾರ್ವಜನಿಕವಾಗಿ ಸಮಸ್ಯೆಗಳು ಉಂಟಾಗುತ್ತಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಕಲ್ಸಂಕ ಜಂಕ್ಷನ್ ನಲ್ಲಿ ಸರ್ಕಲ್ ರಚಿಸುವ ಬಗ್ಗೆ ಶನಿವಾರದಂದು ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಗಳ ಜೊತೆ ಶಾಸಕ ರಘುಪತಿ ಭಟ್ ಸಭೆ ನಡೆಸಿ ಚರ್ಚಿಸಿದರು. ತೀರ್ಥಹಳ್ಳಿ – ಮಲ್ಪೆ ರಾಷ್ಟ್ರೀಯ ಹೆದ್ದಾರಿ – 169ಎ ಹಾದು ಹೋಗುವ ಪರ್ಕಳ ಪೇಟೆಯಿಂದ ಮಣಿಪಾಲ, ಉಡುಪಿ ನಗರದವರೆಗೆ ನಗರ ಪ್ರದೇಶವಾಗಿದ್ದು, […]
ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ 400 ಫಲಾನುಭವಿಗಳಿಗೆ ಗ್ಯಾಸ್ ವಿತರಣೆ ಮಾಡಿದ ಶಾಸಕ ರಘುಪತಿ ಭಟ್

ದೇಶಾದ್ಯಂತ ಭಾರೀ ಯಶಸ್ಸು ಕಂಡ ಪ್ರಧಾನಮಂತ್ರಿ ನರೇಂದ್ರ ಮೋದಿಯವ ಮಹತ್ವಾಕಾಂಕ್ಷೆಯ ಯೋಜನೆಯಾದ “ಉಜ್ವಲ” ಯೋಜನೆಯಡಿಯಲ್ಲಿ ಉಡುಪಿ ಜಿಲ್ಲೆಯ ಒಟ್ಟು 2000 ಫಲಾನುಭವಿಗಳಿಗೆ ಗ್ಯಾಸ್ ಸೌಲಭ್ಯ ಈಗಾಗಲೇ ಸಿಕ್ಕಿದ್ದು ಇಂದು 400 ಜನರಿಗೆ ಗ್ಯಾಸ್ ವಿತರಣೆಯನ್ನು ಶಾಸಕರಾದ ಶ್ರೀ ರಘುಪತಿ ಭಟ್ ಅವರು ಮಾಡಿದ್ದಾರೆ. ಕೊಕ್ಕರ್ಣೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್, ಕೇಂದ್ರ ಸರಕಾರ ಜನಸಾಮಾನ್ಯರ ಕಣ್ಣೊರೆಸುವ ಕೆಲಸ ಮಾಡುತ್ತಿದೆ, ಒಲೆಯ ಮುಂದೆ ಕೂತು ಕಣ್ಣೀರುಡುತ್ತಿದ್ದ ತಾಯಂದಿರ ಮುಖದಲ್ಲಿ ಇಂದು ಮಂದಹಾಸ ಕಾಣುತ್ತಿದೆ, ಯಾಕೆಂದರೆ […]