ಉಡುಪಿಯಲ್ಲಿ ಸದ್ಗುರು ಭಾರತ ಸ್ವಾಗತ ಕಾರ್ಯಕ್ರಮ

ಉಡುಪಿ: ಇಲ್ಲಿನ ಮಣ್ಣು ಉಳಿಸಿ ಸ್ವಯಂಸೇವಕರು ಮೇ 28 ರಂದು ಉಡುಪಿಯ ಕಾರ್ ಸ್ಟ್ರೀಟ್‌ನಲ್ಲಿ ಸದ್ಗುರು ಜಗ್ಗಿ ವಾಸುದೇವ್ ಅವರ ಭಾರತ ಪ್ರಯಾಣದ ಸಂಭ್ರಮಾಚರಣೆಯ ಕಾರ್ಯಕ್ರಮವನ್ನು ನಡೆಸಿದರು. ಮಣ್ಣು ಉಳಿಸುವ ಉಪಕ್ರಮವನ್ನು ಉತ್ತೇಜಿಸಲು ಜಗತ್ತಿನಾದ್ಯಂತ ಭೇಟಿ ನೀಡಿದ ನಂತರ ಸದ್ಗುರುಗಳು ದೇಶಕ್ಕೆ ಮರಳಿದ್ದು ಅವರನ್ನು ಸ್ವಾಗತಿಸಲು ಈ ಕಾರ್ಯಕ್ರಮವನ್ನು ನಡೆಸಲಾಯಿತು. ಮಹೇಶ್ ರಾವ್ ಅವರಿಂದ ರಂಗೋಲಿ, ಶ್ವೇತಾ ಹೆಬ್ಬಾರ್ ಮತ್ತು ತಂಡದಿಂದ ಜಾನಪದ ನೃತ್ಯ, ಅರ್ಜುನ್ ಮತ್ತು ಧೀರಜ್ ಅವರಿಂದ ಯಕ್ಷಗಾನ, ಝೇಂಕಾರ್ ತಂಡದ ಭಜನೆ, ಅಂಬಾ […]

ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ ಕ್ರೀಡಾ ಸಂಕೀರ್ಣ ಕಟ್ಟಡಕ್ಕೆ ಶಾಸಕ ರಘುಪತಿ ಭಟ್ ರಿಂದ ಶಿಲಾನ್ಯಾಸ

ಬ್ರಹ್ಮಾವರ: ಇಲ್ಲಿನ ಬ್ರಹ್ಮಾವರ ಸ್ಪೋರ್ಟ್ಸ್ ಕ್ಲಬ್ (ರಿ.) ಇದರ ಕ್ರೀಡಾ ಸಂಕೀರ್ಣ ಕಟ್ಟಡದ (ಕ್ಲಬ್ ಹೌಸ್) ಶಿಲಾನ್ಯಾಸ ಕಾರ್ಯಕ್ರಮ ಮೇ 23 ರಂದು ಹೇರೂರು ಗ್ರಾಮದ ಹೇರಂಜೆಯಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿ ಕ್ರೀಡಾ ಸಂಕೀರ್ಣ ಕಟ್ಟಡದ ಶಿಲಾನ್ಯಾಸವನ್ನು ನೆರವೇರಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಗುರ್ಮೆ ಫೌಂಡೇಶನ್ ಅಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷ ಮೀರಾ ಸದಾನಂದ ಪೂಜಾರಿ, ಬ್ರಹ್ಮಾವರ ಸ್ಪೋರ್ಟ್ಸ್ […]

ಮೇ 15- ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ

ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವು ಮೇ 15ರಂದು ಉಡುಪಿಯ ಹೋಟೆಲ್ ಶಾರದಾ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ. ಮಧ್ಯಾಹ್ನ 2.30ಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾವೇಶವನ್ನು ಉದ್ಘಾಟಿಸಲಿರುವರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್‌ ಅಧ್ಯಕ್ಷತೆ ವಹಿಸುವರು. ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ಶಾಸಕ‌ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ ಮತ್ತು ಜಗದೀಶ್ ಆಚಾರ್ಯ ಕಪ್ಪೆಟ್ಟು ಉಪಸ್ಥಿತರಿರುವರು. ಮಧ್ಯಾಹ್ನ […]

ಪೊಲಿಪು: ಶ್ರೀ ಲಕ್ಷ್ಮೀನಾರಾಯಣ ದೇವರಿಗೆ ಸ್ವರ್ಣ ಕವಚ ಸಮರ್ಪಣೆ

ಉಡುಪಿ: ಶ್ರೀ ಲಕ್ಷ್ಮೀನಾರಾಯಣ ದೇವರಿಗೆ ಸ್ವರ್ಣ ಕವಚ ಸಮರ್ಪಣೆ ಹಾಗೂ 82ನೇ ವಾರ್ಷಿಕ ಭಜನಾ ಮಂಗಳೋತ್ಸವ ದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ವಹಿಸಿದ್ದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚಿಸಿದರು. ಶಾಸಕ ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವ ವಿನಯ […]

ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಳ ಜೀರ್ಣೋದ್ಧಾರ: ವೀರೇಂದ್ರ ಹೆಗ್ಗಡೆಯವರಿಂದ ರೂ. 25 ಲಕ್ಷ ದೇಣಿಗೆ

ಉಡುಪಿ: ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಳದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರಾದ, ಪದ್ಮವಿಭೂಷಣ ರಾಜರ್ಷಿ ಡಾll ಡಿ. ವೀರೇಂದ್ರ ಹೆಗ್ಗಡೆಯವರು ರೂ. 25 ಲಕ್ಷ ದೇಣಿಗೆ ನೀಡಿದ್ದಾರೆ. ಸೋಮವಾರದಂದು ಸಮಗ್ರ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಶಾಸಕ ಕೆ. ರಘುಪತಿ ಭಟ್ ಹಾಗೂ ದೇವಸ್ಥಾನದ ಮಂಡಳಿಗೆ ದೇಣಿಗೆಯ ಚೆಕ್ ಅನ್ನು ಹೆಗ್ಗಡೆಯವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಡಾ. ರವಿರಾಜ್ ಆಚಾರ್ಯ, ಸದಸ್ಯರಾದ ಮಂಜುನಾಥ್ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ, ಸದಸ್ಯರಾದ ಗಿರೀಶ್ […]