ಜಿಲ್ಲಾ ಸರಕಾರಿ ನೌಕರರ ವಾರ್ಷಿಕ ಸಭೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಉಡುಪಿ: ರಾಜ್ಯದ ಇತರ ಜಿಲ್ಲೆಗಳಿಗೆ ಹೋಲಿಸಿದರೆ ಉಡುಪಿ ಜಿಲ್ಲೆಯ ಸರಕಾರಿ ನೌಕರರು ಸರಕಾರಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನವಾಗುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದು ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿದ್ದಾರೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಶುಕ್ರವಾರದಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಸರಕಾರಿ ನೌಕರರ ಸಂಘದ 2022 ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ 7500 ಕ್ಕೂ ಅಧಿಕ ಸರಕಾರಿ […]

ಮಹಿಳಾ ಉದ್ಯಮಿಗಳ ಪವರ್ ನ ಅನಾವರಣ: ಪವರ್ ಪರ್ಬ ವಿದ್ಯುಕ್ತ ಉದ್ಘಾಟನೆ

ಉಡುಪಿ: ಬಹುನಿರೀಕ್ಷಿತ ಮಹಿಳಾ ಉದ್ಯಮಿಗಳ ಬೃಹತ್ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ “ಪವರ್ ಪರ್ಬ ” ವನ್ನು ನಿವೃತ್ತ ಜಿಲ್ಲಾಧಿಕಾರಿ ಕಲ್ಪನಾ ಗೋಪಾಲನ್ ಉದ್ಘಾಟಿಸಿದರು. ಬೀಡಿನಗುಡ್ಡೆ ಮಹಾತ್ಮಾ ಗಾಂಧಿ ಬಯಲು ರಂಗ ಮಂದಿರದಲ್ಲಿ ಮಾರಾಟ ಮಳಿಗೆಗಳನ್ನು ಹಾಕಲಾಗಿದ್ದು ಇದರ ಉದ್ಘಾಟನೆಯನ್ನು ಶಾಸಕ ರಘುಪತಿ ಭಟ್ ನೆರವೇರಿಸಿದರು. ಈ ಬೃಹತ್ ಮೇಳದಲ್ಲಿ 125ಕ್ಕೂ ಹೆಚ್ಚು ಉತ್ಪನ್ನಗಳ/ ಸೇವೆಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ನೀಡಲಾಗಿದೆ . ಕಾರ್ಯಕ್ರಮದ ಕಳೆಯನ್ನು ಹೆಚ್ಚಿಸಲು ವಿಶಿಷ್ಟ ಆಹಾರ ಮಳಿಗೆಗಳು, ವಿಶೇಷ ಆಟದ […]

ಮಣಿಪಾಲ- ಪೆರಂಪಳ್ಳಿ- ಶೀಂಬ್ರ ರಸ್ತೆಗೆ ಜಾಗದ ಸಮಸ್ಯೆ: ಶಾಸಕ ರಘುಪತಿ ಭಟ್ ರಿಂದ ಸ್ಥಳೀಯರ ಮನವೊಲಿಕೆ

ಉಡುಪಿ: ಇಲ್ಲಿನ ಮಣಿಪಾಲ – ಪೆರಂಪಳ್ಳಿ – ಶೀಂಬ್ರ ರಸ್ತೆ ಅಗಲೀಕರಣಗೊಳಿಸಿ ಅಭಿವೃದ್ಧಿ ಪಡಿಸಲು ಶಾಸಕ ಕೆ. ರಘುಪತಿ ಭಟ್ ರವರ ಶಿಫಾರಸ್ಸಿನ ಮೇರೆಗೆ ರೂ. 7.00 ಕೋಟಿ ಅನುದಾನ ಮಂಜೂರಾಗಿ ಭಾಗಶಃ ಕಾಮಗಾರಿ ಪೂರ್ಣಗೊಂಡಿರುತ್ತದೆ. ಈ ರಸ್ತೆ ಹಾದುಹೋಗುವ ಪೆರಂಪಳ್ಳಿಯ ಶೀಂಬ್ರ ಬ್ರಿಡ್ಜ್ ಬಳಿ ರಸ್ತೆ ಅಗಲೀಕರಣಕ್ಕೆ ಖಾಸಗಿ ಜಾಗದ ಸಮಸ್ಯೆ ಉಂಟಾಗಿ ರಸ್ತೆ ಕಾಮಗಾರಿ ಸ್ಥಗಿತಗೊಂಡಿತ್ತು. ಇದರಿಂದ ಸಾರ್ವಜನಿಕರಿಗೆ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ಸ್ಥಳೀಯರ ಮನವಿಯಂತೆ ಶಾಸಕರು ಶನಿವಾರದಂದು ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ. ಹಾಗೂ […]

ಕರಾವಳಿಯುದ್ದಕ್ಕೂ ಸಾಗಲಿದೆ ಜಿಲ್ಲೆಯ ಪ್ರಗತಿ-ಸಂಸ್ಕೃತಿಯನ್ನು ಬಿಂಬಿಸುವ ರಜತರಥ: ರಘುಪತಿ ಭಟ್

ಉಡುಪಿ: ಉಡುಪಿ ಜಿಲ್ಲೆಯ ರಜತ ಉತ್ಸವದ ಅಂಗವಾಗಿ ಜಿಲ್ಲೆಯನ್ನು ಮುಂದಿನ 25 ವರ್ಷಗಳಲ್ಲಿ ಎಲ್ಲಾ ಕ್ಷೇತ್ರದಲ್ಲಿ ಸಮಗ್ರವಾಗಿ ಅಭಿವೃದ್ದಿಪಡಿಸುವ ಬಗ್ಗೆ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ, ದಿಕ್ಸೂಚಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ವಿವಿಧ ಕ್ಷೇತ್ರಗಳ ತಜ್ಞರು ನೀಡಿರುವ ಸಲಹೆಗಳನ್ನು ದಾಖಲೀಕರಣ ಮಾಡಿ, ಅದರಂತೆ ಜಿಲ್ಲೆಯನ್ನು ಅಭಿವೃದ್ದಿಗೊಳಿಸಲಾಗುವುದು. ರಜತ ಉತ್ಸವ ಅಂಗವಾಗಿ ಜಿಲ್ಲೆಯ ಪ್ರಗತಿ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ರಥವನ್ನು ಸಿದ್ದಪಡಿಸಲಾಗಿದ್ದು, ಕರಾವಳಿಯ ಎಲ್ಲಾ ಕಡೆಗಳಲ್ಲಿ ಸಂಚರಿಸುವ ಈ ರಥವು ಜಿಲ್ಲೆಯ ಪ್ರಗತಿಯನ್ನು ಎಲ್ಲೆಡೆ ಸಾರಲಿದೆ ಎಂದು ಶಾಸಕ […]

ಕೆಳಪರ್ಕಳ ರಸ್ತೆ ಕಾಮಗಾರಿ ಪೂರ್ಣ: ಕೆ.ರಘುಪತಿ ಭಟ್

ಕಾರ್ಕಳ: ಇಲ್ಲಿನ ಪರ್ಕಳ-ಮಣಿಪಾಲ ರಾ.ಹೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಮಣಿಪಾಲದಿಂದ ಉಡುಪಿ ಸಂಪರ್ಕಿಸುವ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ಕೆಳಪರ್ಕಳ ರಸ್ತೆಯನ್ನು ಸರಿಪಡಿಸಲು ಶಾಸಕ ರಘುಪತಿ ಭಟ್ ಸಭೆ ನಡೆಸಿದ್ದು ಅದರಂತೆ ಈಗ ಕೆಳಪರ್ಕಳ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದು ವಾಹನ ಸಂಚಾರಿಗಳು ನಿಟ್ಟುಸಿರು ಬಿಡುವಂತಾಗಿದೆ. ಪರ್ಕಳ – ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವುದರಿಂದ ಮಣಿಪಾಲ – ಉಡುಪಿ ಸಂಪರ್ಕಿಸುವ ವಾಹನಗಳ ಸುಗಮ ಸಂಚಾರಕ್ಕೆ ಪ್ರಸ್ತುತ ಇರುವ ಕೆಳಪರ್ಕಳದ ರಸ್ತೆಯನ್ನು ಸರಿಪಡಿಸಲು ಇಲಾಖಾಧಿಕಾರಿಗಳೊಂದಿಗೆ ಸಭೆ ನಡೆಸಿ ರಸ್ತೆ […]