ಮಲ್ಪೆ ಕಡಲ ತೀರದ ತೇಲುವ ಸೇತುವೆ ಪ್ರವಾಸಿಗರಿಗೆ ಮುಕ್ತ

ಮಲ್ಪೆ: ಇಲ್ಲಿನ ಕಡಲತೀರದಲ್ಲಿ ರಾಜ್ಯದ ಪ್ರಪ್ರಥಮ ತೇಲುವ ಸೇತುವೆಯನ್ನು ಶಾಸಕ ರಘುಪತಿ ಭಟ್ ಭಾನುವಾರದಂದು ಮತ್ತೊಮ್ಮೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಘುಪತಿ ಭಟ್ ಈ ರೀತಿಯ ಸೇತುವೆ ಕೇರಳದಲ್ಲಿ ಮಾತ್ರವಿದ್ದು, ಇದೀಗ ಕರ್ನಾಟಕದ ಮಲ್ಪೆಯೂ ತೇಲುವ ಸೇತುವೆಯನ್ನು ಹೊಂದಲಿದೆ. ಇದು ಪ್ರವಾಸಿಗರನ್ನು ಹೆಚ್ಚು ಆಕರ್ಷಿಸಲಿದೆ ಎಂದರು. ಈ ವರ್ಷದ ಮೇ ತಿಂಗಳಲ್ಲಿ ಸೇತುವೆ ಉದ್ಘಾಟನೆಯಾಗಿದ್ದರೂ ಎರಡೇ ದಿನಗಳಲ್ಲಿ ಮುರಿದು ಬಿದ್ದು ಮಳೆಗಾಲದ ಹಿನ್ನೆಲೆಯಲ್ಲಿ ಕಳಚಿ ಇಡಲಾಗಿತ್ತು. ಆದರೆ ಈ ಬಾರಿ ಕೇರಳ ಮತ್ತು ಕರ್ನಾಟಕದ ತಜ್ಞರ […]
ಅಟಲ್ ಉತ್ಸವ: ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ನುಡಿಯಾದ ಐತಿಹಾಸಿಕ ‘ಬೂತ್ ಸಂಗಮ’ ಕಾರ್ಯಕ್ರಮ

ಉಡುಪಿ: ಬಿಜೆಪಿಯ ವಿಧಾನಸಭಾ ಚುನಾವಣೆಯ ಮುನ್ನುಡಿಯಾಗಿ ನಗರದ ಎಂಜಿಎಂ ಕಾಲೇಜು ಮೈದಾನದಲ್ಲಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 98 ನೇ ಜನ್ಮದಿನದ ಅಂಗವಾಗಿ ಅಟಲ್ ಉತ್ಸವ ಆಯೋಜಿಸಲಾಗಿದ್ದು ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಐತಿಹಾಸಿಕ ‘ಬೂತ್ ಸಂಗಮ’ ಕಾರ್ಯಕ್ರಮ ಭಾನುವಾರ ನಡೆಯಿತು. ಉಡುಪಿ ವಿಧಾನಸಭಾ ಕ್ಷೇತ್ರದ ‘ಬೂತ್ ಸಂಗಮ’ದಲ್ಲಿ ನಗರ ಮತ್ತು ಗ್ರಾಮಾಂತರ ಭಾಗದ 226 ಮತಗಟ್ಟೆಗಳಿಂದಲೂ ಕಾರ್ಯಕರ್ತರು ಭಾಗವಹಿಸಿ ಇತಿಹಾಸ ನಿರ್ಮಿಸಿದರು. ಮುಂಬರುವ ವಿಧಾನಸಭೆಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಮಂಥನ ನಡೆಸಲಾಯಿತು. […]
ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ತಯಾರಿಸುವ ಕ್ರೀಡಾ ವಿಜ್ಞಾನ ಕೇಂದ್ರದ ಉದ್ಘಾಟನೆ: ಕೆ. ರಘುಪತಿ ಭಟ್

ಉಡುಪಿ: ಜಿಲ್ಲೆಯಲ್ಲಿನ ಕ್ರೀಡಾಪಟುಗಳಿಗೆ ಉತ್ತೇಜಿಸುವುದರೊಂದಿಗೆ ಅವರುಗಳು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ಉತ್ತಮ ಪ್ರದರ್ಶನ ನೀಡುವುದರೊಂದಿಗೆ ಸ್ಪರ್ಧೆಗಳಲ್ಲಿ ವಿಜೇತರಾಗಿ ಪ್ರಶಸ್ತಿ ಹಾಗೂ ಬಹುಮಾನ ಪಡೆಯುವಂತೆ ಅನುಕೂಲ ಮಾಡುವ ಉದ್ದೇಶದಿಂದ ಉಡುಪಿ ನಗರದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗುತ್ತಿದ್ದು, ಕ್ರೀಡಾಪಟುಗಳು ದೇಹ ಸದೃಢತೆ ಆಧಾರಿತ ಕ್ರೀಡೆಯಲ್ಲಿ ಭಾಗವಹಿಸುವಿಕೆ, ಕ್ರೀಡಾ ಸಂದರ್ಭದಲ್ಲಿ ಆಗುವ ಅವಘಡಗಳ ಚಿಕಿತ್ಸೆಗೆ ನೆರವಾಗುವ ಕ್ರೀಡಾ ವಿಜ್ಞಾನ ಕೇಂದ್ರವನ್ನು 2 ಕೋಟಿ ರೂ. ವೆಚ್ಚದಲ್ಲಿ ಉಡುಪಿಯ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಇದೇ 24 ರಂದು […]
ಡಿ.24ರಂದು ಅಟಲ್ ಉತ್ಸವ ರಾಷ್ಟ್ರಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಕೂಟ

ಉಡುಪಿ: ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನಾಚರಣೆಯ ಅಂಗವಾಗಿ ಬಿಜೆಪಿ ಉಡುಪಿ ನಗರ ಹಾಗೂ ಗ್ರಾಮಾಂತರ ವತಿಯಿಂದ ಡಿ. 24ರಂದು ಸಂಜೆ 5ಗಂಟೆಗೆ “ಅಟಲ್ ಉತ್ಸವ” ರಾಷ್ಟ್ರಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಕೂಟ ಹಾಗೂ ಡಿ. 25ರಂದು ಸಂಜೆ 4ಗಂಟೆಗೆ ಬೂತ್ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಎರಡು ಕಾರ್ಯಕ್ರಮಗಳೂ ಉಡುಪಿ ಎಂಜಿಎಂ ಮೈದಾನದಲ್ಲಿ ನಡೆಯಲಿದೆ ಎಂದು ಶಾಸಕ ರಘುಪತಿ ಭಟ್ ತಿಳಿಸಿದರು. ಮಣಿಪಾಲದ ಕಂಟ್ರಿ ಇನ್ ಹೋಟೆಲ್ ನಲ್ಲಿ ಮಂಗಳವಾರ […]
ಡಿ .25 ರಂದು ಜಿಲ್ಲೆಯಲ್ಲಿ ಅಟಲ್ ಉತ್ಸವ; ಬೂತ್ ಸಂಗಮ ಕಾರ್ಯಕ್ರಮ

ಉಡುಪಿಯ: ಭಾರತೀಯ ಜನತಾ ಪಾರ್ಟಿ ಉಡುಪಿ ನಗರ ಹಾಗೂ ಗ್ರಾಮಾಂತರ ವತಿಯಿಂದ ಮಾಜಿ ಪ್ರಧಾನಮಂತ್ರಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಉಡುಪಿಯಲ್ಲಿ ನಡೆಯಲಿರುವ ಅಟಲ್ ಬಿಹಾರಿ ಉತ್ಸವ ಪ್ರಯುಕ್ತ ಡಿ .25 ರಂದು ಬೂತ್ ಸಂಗಮ ಕಾರ್ಯಕ್ರಮವು ಎಂಜಿಎಂ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಇದರ ಚಪ್ಪರ ಮುಹೂರ್ತವನ್ನು ಸೋಮವಾರದಂದು ಶಾಸಕ ಕೆ ರಘುಪತಿ ಭಟ್ ನೆರವೇರಿಸಿದರು. ಉತ್ಸವದ ಅಂಗವಾಗಿ ಡಿ.24 ರಂದು ರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾಟ […]