ಕಿಶೋರ ಯಕ್ಷಗಾನ ಸಂಭ್ರಮ -2022 ಸಮಾರೋಪ ಸಮಾರಂಭ; ಸಾಧಕ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಆಶ್ರಯದಲ್ಲಿ,ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಸಹಯೋಗದೊಂದಿಗೆ ಕಿಶೋರ ಯಕ್ಷಗಾನ ಸಂಭ್ರಮ -2022ರ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣವನ್ನು ನೀಡಿದ ಗುರುಗಳನ್ನು ಸನ್ಮಾನಿಸಿದರು. ಕರ್ನಾಟಕದ ಗಂಡು ಕಲೆಯಾದ ಯಕ್ಷಗಾನವು ಹಿಂದಿನ ಅಶಿಕ್ಷಿತ ಜನತೆಗೆ ದೇವರ ಪರಿಚಯ ಮತ್ತು ಪುರಾಣಗಳ ಸಾರವನ್ನು ತಿಳಿಸಿದೆ. ಈಗಿನ ಪ್ರಜೆಗಳಿಗೆ ಅಧ್ಯಾತ್ಮದ ಬಗ್ಗೆ ತಿಳಿಯಲು ಇದು ಉತ್ತಮವಾದ […]
ಕನ್ನಡ ಶಾಲೆಗಾಗಿ ಬೃಹತ್ ಮೊತ್ತದ ದೇಣಿಗೆ ನೀಡಿದ ಉದ್ಯಮಿ ಎಚ್. ಎಸ್. ಶೆಟ್ಟಿಯವರಿಗೆ ಅಭಿನಂದನಾ ಕಾರ್ಯಕ್ರಮ

ಉಡುಪಿ : ನಿಟ್ಟೂರು ಪ್ರೌಢಶಾಲೆಯಲ್ಲಿ ಪಠ್ಯ ಹಾಗೂ ಪಠ್ಯೇತರ ವಿಭಾಗಗಳಲ್ಲಿ ನಡೆಯುತ್ತಿರುವ ಸಮಾಜ ಮುಖಿಯಾದ ಚಟುವಟಿಕೆಗಳನ್ನು ಮೆಚ್ಚಿ ತಮ್ಮ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಮೂಲಕ ಬೃಹತ್ ಮೊತ್ತದ ದೇಣಿಗೆ ನೀಡಿದ ಬೆಂಗಳೂರಿನ ಉದ್ಯಮಿ ಎಚ್. ಎಸ್. ಶೆಟ್ಟಿಯವರಿಗೆ ಗೌರವ ಪೂರ್ವಕ ಕೃತಜ್ಞತೆಯ ದ್ಯೋತಕವಾಗಿ ಶಾಲಾ ಹಳೆ ವಿದ್ಯಾರ್ಥಿಗಳು 10ನೇ ತರಗತಿ ವಿದ್ಯಾರ್ಥಿ ದೀಕ್ಷಿತ್ ಹಾಗೂ ದ್ವಿತೀಯ ಪದವಿ ಓದುತ್ತಿರುವ ಹಳೆ ವಿದ್ಯಾರ್ಥಿನಿ ರಕ್ಷಿತಾಳಿಗೆ ನಿರ್ಮಿಸಿದ ‘ಶ್ರೀನಿವಾಸ’ ಮನೆಯ ಉದ್ಘಾಟನೆ ಡಿಸೆಂಬರ್ 5, ರಂದು ಕರಂಬಳ್ಳಿಯಲ್ಲಿ […]
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಮತ್ತು ಶಿಕ್ಷಣ ಇಲಾಖೆ ಸಹಭಾಗಿತ್ವದಲ್ಲಿ ಕೆ.ಪಿ.ಎಸ್ ಶಾಲೆ ಅಭಿವೃದ್ಧಿಗೆ ಒಡಂಬಡಿಕೆ

ಉಡುಪಿ: ಸರಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೆ.ಪಿ.ಎಸ್ ಶಾಲೆ ಆಭಿವೃದ್ಧಿ ಕುರಿತಂತೆ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿ ಮತ್ತು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಡುವೆ ರಾಜ್ಯದಲ್ಲೇ ಮೊದಲ ಬಾರಿಗೆ ಒಡಂಬಡಿಕೆ ನಡೆಯಿತು. ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಶಾಸಕ ರಘುಪತಿ ಭಟ್ ಮತ್ತು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಅವರ ಸಮ್ಮುಖದಲ್ಲಿ ಒಡಂಬಡಿಕೆ ಪತ್ರದ ಹಸ್ತಾಂತರ ಕಾರ್ಯಕ್ರಮ ಸೋಮವಾರ ನಡೆಯಿತು. ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ […]
ಬಲಿಷ್ಠ ಮತ್ತು ಸಮೃದ್ಧ ಉಡುಪಿಯ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಕಾರ್ಯೋನ್ಮುಖರಾಗಿ: ಸಚಿವ ಸುನೀಲ್ ಕುಮಾರ್

ಉಡುಪಿ: ಉಡುಪಿ ಜಿಲ್ಲೆ ರಚನೆಯಾಗಿ 25 ವರ್ಷಗಳಾಗಿದ್ದು, ಮುಂದಿನ 25 ವರ್ಷಗಳಲ್ಲಿ, ಜಿಲ್ಲೆಯನ್ನು ಎಲ್ಲಾ ಆಯಾಮಗಳಲ್ಲಿ ಅಭಿವೃದ್ಧಿ ಪಡಿಸುವ ಯೋಜನೆಗಳ ಕುರಿತಂತೆ ದಿಕ್ಸೂಚಿಯನ್ನು ರಚಿಸಿ, ಅದರಂತೆ ಕಾರ್ಯನಿರ್ವಹಿಸುವ ಮೂಲಕ ಬಲಿಷ್ಠ ಮತ್ತು ಸಮೃದ್ಧ ಉಡುಪಿ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕಾರ್ಯನಿರ್ವಹಿಸಬೇಕಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಶನಿವಾರ ಪುರಭವನದಲ್ಲಿ, ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಉಡುಪಿ ಜಿಲ್ಲಾ ರಜತ ಮಹೋತ್ಸವದ ಅಂಗವಾಗಿ ದಿಕ್ಸೂಚಿ […]
ಹೆಜಮಾಡಿಯಲ್ಲಿ ಟೋಲ್ ಶುಲ್ಕ ಯಥಾಸ್ಥಿತಿ ಕಾಪಾಡಿ: ಅಧಿಕಾರಿಗಳಿಗೆ ಎಸ್.ಅಂಗಾರ ಸೂಚನೆ

ಉಡುಪಿ: ಜಿಲ್ಲೆಯ ಹೆಜಮಾಡಿ ಟೋಲ್ಗೇಟ್ನಲ್ಲಿ ಈ ಹಿಂದೆ ಪಡೆಯುತ್ತಿದ್ದ ದರಗಳನ್ನು ಮಾತ್ರ ಪಡೆಯುವಂತೆ ಹಾಗೂ ಯಾವುದೇ ಕಾರಣಕ್ಕೂ ಸುರತ್ಕಲ್ ಟೋಲ್ ಪ್ಲಾಜಾ ವಿಲೀನದ ಪರಿಷ್ಕೃತ ದರಗಳನ್ನು ಪಡೆಯದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸೂಚನೆ ನೀಡಿದರು. ಅವರು ಶನಿವಾರ ಉಡುಪಿ ತಾಲೂಕು ಕಚೇರಿಯಲ್ಲಿ, ರಾಷ್ಟ್ರೀಯ ಹೆದ್ದಾರಿ 66 ರ ಸುರತ್ಕಲ್ ಟೋಲ್ ಪ್ಲಾಜಾವನ್ನು ತೆರವುಗೊಳಿಸಿ ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಟೋಲ್ […]