ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಜಿಲ್ಲಾ ಭೇಟಿ

ಉಡುಪಿ: ವಿವಿಧ ಕಾರ್ಯಕ್ರಮ ನಿಮಿತ್ತ ಶನಿವಾರದಂದು ಜಿಲ್ಲೆಗೆ ಆಗಮಿಸಿದ ಗೋವಾ ರಾಜ್ಯದ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಶಾಸಕ ಕೆ. ರಘುಪತಿ ಭಟ್ ಉಡುಪಿ ಪ್ರವಾಸಿ ಮಂದಿರದಲ್ಲಿ ಸ್ವಾಗತಿಸಿದರು.

ಉಡುಪಿ: ತಾಯಿ ಮತ್ತು ಮಕ್ಕಳ ಆಸ್ಪತ್ರೆ ಸಿಬ್ಬಂದಿಗಳ ವೇತನ ಪಾವತಿಗೆ ರೂ.368.70 ಲಕ್ಷ ಬಿಡುಗಡೆ

ಉಡುಪಿ: ಇಲ್ಲಿನ ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಹಾಜಿ ಅಬ್ದುಲ್ಲಾ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ಬಾಕಿ ಇರುವ ವೇತನವನ್ನು ಪಾವತಿಸಲು ಶಾಸಕ ಕೆ ರಘುಪತಿ ಭಟ್ ಮಾಡಿರುವ ಮನವಿಯಂತೆ ವೈದ್ಯಾಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ಬಾಕಿ ಇರುವ ವೇತನವನ್ನು ಪಾವತಿಸಲು ರೂ. 228.33 ಲಕ್ಷಗಳು ಹಾಗೂ ಇತರ ಬಾಕಿ ಇರುವ ಸಾದಿಲ್ವಾರು ವೆಚ್ಚ ರೂ. 140.37 ಲಕ್ಷಗಳು ಸೇರಿದಂತೆ ಒಟ್ಟು ರೂ. 368.70 ಲಕ್ಷ ರೂ ಗಳನ್ನು ಭರಿಸಲು ರಾಜ್ಯ […]

ಬ್ರಹ್ಮಗಿರಿ ವೃತ್ತಕ್ಕೆ ಸಾವರ್ಕರ್ ವೃತ್ತ ಎಂದು ನಾಮಕರಣ: ನಗರಸಭೆಗೆ ಮರು ಅರ್ಜಿ ಸಲ್ಲಿಕೆಗೆ ನಿರ್ಧಾರ

ಉಡುಪಿ: ನಗರದ ಬ್ರಹ್ಮಗಿರಿ ವೃತ್ತಕ್ಕೆ ಸಾವರ್ಕರ್ ವೃತ್ತ ಎಂದು ನಾಮಕರಣ ಮಾಡುವ ಬಗ್ಗೆ ಯಶ್ ಪಾಲ್ ಸುವರ್ಣ ಪ್ರತಿಕ್ರಿಯಿಸಿದ್ದು, ಈ ಬಗ್ಗೆ ನಗರಸಭೆಗೆ ಮನವಿ ಮಾಡಲಾಗಿದೆ. ನಗರಸಭೆಯಿಂದ ಈ ವೃತ್ತಕ್ಕೆ ಆಸ್ಕರ್ ಫೆರ್ನಾಂಡೀಸ್ ವೃತ್ತವೆಂದು ನಾಮಕರಣ ಮಾಡುವ ಬಗ್ಗೆ ಪ್ರಸ್ತಾವನೆ ಸಲ್ಲಿಕೆಯಾಗಿರುವ ಮಾಹಿತಿ ದೊರೆತಿದೆ. ಆದರೆ ಈ ಹಿಂದೆ ತೀರ್ಮಾನವಾದಂತೆ ಈ ವೃತ್ತಕ್ಕೆ ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಹೆಸರು ಇಡಬೇಕು. ಯಾವುದೇ ತೀರ್ಮಾನ ತೆಗೆದುಕೊಂಡಾಗ ತಕ್ಷಣಕ್ಕೆ ವಾಪಸ್ ಪಡೆಯುವುದು ಸಾಧ್ಯವಿಲ್ಲ, ಆದರೂ ಕ್ಷೇತ್ರದ ಶಾಸಕರು ಮತ್ತು […]

ಹಿರಿಯರ ಅನುಭವಪೂರಿತ ಮಾರ್ಗದರ್ಶನದಿಂದ ಜಿಲ್ಲೆಯ ಅಭಿವೃದ್ದಿಯ ಸಂಕಲ್ಪ: ಶಾಸಕ ರಘುಪತಿ ಭಟ್

ಉಡುಪಿ: ಭಾರತೀಯ ಸಂಸ್ಕೃತಿಯಲ್ಲಿ ಯಾವುದೇ ಕಾರ್ಯವನ್ನು ಮಾಡುವಾಗ ಹಿರಿಯರ ಆಶೀರ್ವಾದ ಪಡೆಯುವ ಸಂಸ್ಕೃತಿ ಇದೆ. ಹಿರಿಯರ ಅನುಭವಗಳು ಮುಂದಿನ ಪೀಳಿಗೆಗೆ ದಾರಿದೀಪವಿದ್ದಂತೆ. ಪ್ರಸ್ತುತ ಉಡುಪಿ ಜಿಲ್ಲಾ ರಜತ ಉತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿನ ಹಿರಿಯ ನಾಗರೀಕರ ಸಂಘಟನೆಗಳು ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಮುಂದಿನ ಅಭಿವೃದ್ಧಿಯ ಕುರಿತು ಜಿಲ್ಲೆಯ ಹಿರಿಯ ನಾಗರೀಕರು ತಮ್ಮ ಸಲಹೆ, ಅನುಭವಪೂರಿತ ಮಾರ್ಗದರ್ಶನಗಳನ್ನು ಜಿಲ್ಲಾಡಳಿತಕ್ಕೆ ನೀಡುವಂತೆ ಶಾಸಕ ಕೆ. ರಘುಪತಿ ಭಟ್ ಹೇಳಿದರು. ಅವರು ಶನಿವಾರದಂದು ಕುಂಜಿಬೆಟ್ಟು ಎಂ.ಜಿ.ಎಂ ಕಾಲೇಜಿನ ರವೀಂದ್ರ ಕಲಾ […]

ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಗಾಗಿ ಸಂಚಾರಿ ಕ್ಲಿನಿಕ್ ಉದ್ಘಾಟನೆ

ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಇವರ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಒದಗಿಸುವ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಗೆ ಶುಕ್ರವಾರ ನಗರಸಭೆಯ ಆವರಣದಲ್ಲಿ ಶಾಸಕ ಕೆ.ರಘುಪತಿ ಭಟ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಶ್ಮೀ ಮಂಜುನಾಥ್, ಪೌರಾಯುಕ್ತ ಡಾ. ಉದಯ್ ಕುಮಾರ್ […]