ಮೂರನೇ ಅವಧಿಗೆ ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಐಕ್ಯರಂಗ ರಚನೆಗೆ ಮುಂದಾದ ಪ್ರತಿಪಕ್ಷ: ಪಟ್ನಾದಲ್ಲಿ ಸಭೆ

ಪಟ್ನಾ: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ಐಕ್ಯರಂಗವನ್ನು ರಚಿಸಲು ಭಾರತದ 17 ರಾಜಕೀಯ ಪಕ್ಷಗಳ ನಾಯಕರು ಶುಕ್ರವಾರ ಒಪ್ಪಿಕೊಂಡಿದ್ದಾರೆ. “ನಮ್ಮ ನಡುವೆ ಖಂಡಿತವಾಗಿಯೂ ಕೆಲವು ಭಿನ್ನಾಭಿಪ್ರಾಯಗಳಿವೆ ಆದರೆ ನಾವು ಒಟ್ಟಿಗೆ ಕೆಲಸ ಮಾಡುತ್ತೇವೆ, ಹೊಂದಿಕೊಳ್ಳುವಿಕೆಯೊಂದಿಗೆ ಕೆಲಸ ಮಾಡುತ್ತೇವೆ ಎಂದು ನಾವು ನಿರ್ಧರಿಸಿದ್ದೇವೆ” ಎಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದ ಈ ಸಭೆಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಆಯೋಜಿಸಿದ್ದರು. ದೇಶದ […]

ಹಿರಿಯರ ಮಾತಿಗೆ ಬೆಲೆ ಕೊಟ್ಟು ತಲೆಬಾಗಬೇಕಾಯಿತು; ತಾಳ್ಮೆ ಕಾಯ್ದುಕೊಳ್ಳಿ: ಅಭಿಮಾನಿಗಳಿಗೆ ಡಿಕೆಶಿ ಕರೆ

ಕನಕಪುರ: ಮುಖ್ಯಮಂತ್ರಿ ಪಟ್ಟಕ್ಕಾಗಿ ತಮ್ಮ ಆಕಾಂಕ್ಷೆಗಳನ್ನು ಜೀವಂತವಾಗಿರಿಸಿಕೊಂಡಿರುವ ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಮ್ಮ ಬೆಂಬಲಿಗರನ್ನು ಉದ್ದೇಶಿಸಿ “ತಾಳ್ಮೆಯಿಂದ” ಇರಿ ಮತ್ತು “ನಿರಾಶೆಗೊಳ್ಳಬೇಡಿ” ಎಂದು ಕೇಳಿಕೊಂಡಿದ್ದಾರೆ. ದೊಡ್ಡ ಜವಾಬ್ದಾರಿಯಾದ ಮುಖ್ಯಮಂತ್ರಿ ಹುದ್ದೆ ಸಿಗುತ್ತದೆ ಎಂದು ನೀವೆಲ್ಲರೂ ಭಾವಿಸಿ ಪ್ರೀತಿಯ ಸುರಿಮಳೆಗೈದಿದ್ದೀರಿ, ಯಾರೂ ನಿರಾಶರಾಗುವ ಅಗತ್ಯವಿಲ್ಲ ಎಂದು ಶನಿವಾರ ತಮ್ಮ ಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಹೇಳಿದ್ದಾರೆ. ತಮ್ಮನ್ನು ಅಧಿಕಾರಕ್ಕೆ ತಂದ ಮತದಾರರಿಗೆ ಅವರು ಧನ್ಯವಾದ ಅರ್ಪಿಸಿ ಮಾತನಾಡಿ, ನನ್ನನ್ನು ಮುಖ್ಯಮಂತ್ರಿಯನ್ನಾಗಿ […]

ಸಾಮಾನ್ಯ ಪಾಸ್ ಪೋರ್ಟ್ ಗಾಗಿ ರಾಹುಲ್ ಗಾಂಧಿಗೆ ಎನ್.ಒ.ಸಿ ನೀಡಿದ ದೆಹಲಿ ನ್ಯಾಯಾಲಯ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಒಪ್ಪಿಸಿದ್ದು, ಹತ್ತು ವರ್ಷ ಕಾಲಾವಧಿಗೆ ಹೊಸ ಪಾಸ್ ಪೋರ್ಟ್ ನೀಡಲು ಅನುವಾಗುವಂತೆ ನಿರಾಕ್ಷೇಪಣಾ ಪತ್ರಕ್ಕಾಗಿ ದೆಹಲಿ ನ್ಯಾಯಾಲಯದಲ್ಲಿ ಮನವಿ ಮಾಡಿದ್ದರು. ಇದಕ್ಕೆ ಬಿಜೆಪಿಯ ಹಿರಿಯ ನಾಯಕ ಸುಬ್ರಮಣ್ಯನ್ ಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ “ಸಾಮಾನ್ಯ ಪಾಸ್‌ಪೋರ್ಟ್” ನೀಡುವುದಕ್ಕಾಗಿ ದೆಹಲಿ ನ್ಯಾಯಾಲಯವು ಶುಕ್ರವಾರ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ರೂಸ್ ಅವೆನ್ಯೂ ನ್ಯಾಯಾಲಯವು […]

ರಾಹುಲ್ ಗಾಂಧಿಯ ಹೊಸ ಪಾಸ್ ಪೋರ್ಟ್ ಮನವಿಗೆ ವಿರೋಧ ವ್ಯಕ್ತಪಡಿಸಿದ ಸುಬ್ರಮಣ್ಯನ್ ಸ್ವಾಮಿ

ನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಸುಬ್ರಮಣ್ಯನ್ ಸ್ವಾಮಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೊಸ ಪಾಸ್‌ಪೋರ್ಟ್ ನೀಡುವಂತೆ ದೆಹಲಿ ನ್ಯಾಯಾಲಯದ ಮುಂದೆ ಸಲ್ಲಿಸಿರುವ ಮನವಿಯನ್ನು ವಿರೋಧಿಸಿದ್ದಾರೆ. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವೈಭವ್ ಮೆಹ್ತಾ ಅವರ ಮುಂದೆ ಹಾಜರಾದ ಗಾಂಧಿ ಪರ ವಕೀಲ ತರನ್ನುಮ್ ಚೀಮಾ ಅವರು ಗಾಂಧಿಗೆ ನಿರಾಕ್ಷೇಪಣಾ ಪ್ರಮಾಣಪತ್ರವನ್ನು ನೀಡಬಹುದು ಎಂದು ಹೇಳಿದರು. ರಾಹುಲ್ ಗಾಂಧಿಗೆ ಜಾಮೀನು ನೀಡುವ ಆದೇಶದಲ್ಲಿ ಯಾವುದೇ ನಿರ್ಬಂಧಗಳನ್ನು ಹಾಕಲಾಗಿಲ್ಲ ಎಂದು ಕೋರ್ಟ್ ಗಮನಿಸಿದೆ. […]

ಕಾಂಗ್ರೆಸ್ ಗ್ಯಾರಂಟಿ ಮುಂದಿನ ಸಂಪುಟ ಸಭೆಯ ನಂತರ ಜಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತಿ ಸಿದ್ದರಾಮಯ್ಯನವರ ಪ್ರಮಾಣ ವಚನ ಸ್ವೀಕಾರ ಸಮಯದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾವು ನಿಮಗೆ 5 ಭರವಸೆಗಳನ್ನು ನೀಡಿದ್ದೇವೆ. ನಾವು ಸುಳ್ಳು ಭರವಸೆ ನೀಡುವುದಿಲ್ಲ ಎಂದು ಹೇಳಿದ್ದೆ. ನಾವು ಹೇಳಿದ್ದನ್ನು ಮಾಡುತ್ತೇವೆ. 1-2 ಗಂಟೆಗಳಲ್ಲಿ ಕರ್ನಾಟಕ ಸರ್ಕಾರದ ಮೊದಲ ಸಂಪುಟ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಈ 5 ಭರವಸೆಗಳು ಕಾನೂನಾಗಲಿವೆ ಎಂದಿದ್ದರು. #WATCH | We made 5 promises to you. I had said we don't make […]