ಪ್ರತಿಯೊಬ್ಬರಲ್ಲೂ ನಾವು ಭಾರತೀಯರೆಂಬ ಅಭಿಮಾನ ಇರಬೇಕು: ಐ.ಎನ್.ಎಸ್ ಕಮಾಂಡರ್ ಅಶ್ವಿನ್ ರಾವ್

ಕಾರ್ಕಳ: ದೇಶದ ನಾಗರಿಕನಾಗಿ ಸ್ವಯಂ ಪ್ರೇರಣೆಯಿಂದ ಜವಾಬ್ದಾರಿಗಳನ್ನು ವಹಿಸಿಕೊಂಡು ದೇಶದ ಏಳಿಗೆಗೆ ಕೈ ಜೋಡಿಸಬೇಕು. ದೇಶ ಅಂದ್ರೆ ನಾವು, ನಾವು ಅಂದ್ರೆ ದೇಶ ಎಂಬ ಭಾವ ಮೊಳಗಬೇಕು. ನಾನು ಭಾರತೀಯ ಎಂಬ ಹೆಮ್ಮೆ ಗರ್ವ, ಅಭಿಮಾನ ಇರಬೇಕೆಂದು ಕೊಚ್ಚಿಯ ಐ.ಎನ್.ಎಸ್. ಶಾರದಾ ಕಮಾಂಡರ್ ಅಶ್ವಿನ್.ಎಂ.ರಾವ್ ಅಭಿಪ್ರಾಯಪಟ್ಟರು. ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆದ 74 ನೇ ಗಣರಾಜ್ಯೋತ್ಸವದಲ್ಲಿ ಧ್ವಜಹಾರಿಸಿ ಮಾತನಾಡಿದರು. ಶಿಸ್ತುಬದ್ಧ ವಿದ್ಯಾರ್ಥಿ ಜೀವನವು ಯಶಸ್ಸಿನೆಡೆಗೆ ಕೊಂಡೊಯ್ಯುತ್ತದೆ. ಜವಾಬ್ದಾರಿಯುತ ಮನಸ್ಥಿತಿಯು ಎಂತಹ ಪ್ರತಿಕೂಲ ಸ್ಥಿತಿಯನ್ನು […]

ಕ್ರಿಯೇಟಿವ್‌ ಪ.ಪೂ ಕಾಲೇಜಿನಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ

ಕಾರ್ಕಳ: ರಾಜ ಪ್ರಭುತ್ವದೆಡೆಯಿಂದ ಪ್ರಜಾಪ್ರಭುತ್ವದ ಕಡೆಗೆ ಸಾಗಿದ ಹೆಗ್ಗುರುತೇ ಗಣರಾಜ್ಯೋತ್ಸವ. ಸಂವಿಧಾನ ನಮಗೆ ಅನೇಕ ಕೊಡುಗೆಗಳನ್ನು ನೀಡಿದೆ. ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ದಿನವಿದು. ಆದ್ದರಿಂದ ನಾವೆಲ್ಲರೂ ಸಮಾನರೆಂಬ ಭಾವನೆಯನ್ನು ಸಂವಿಧಾನ ನಮಗೆ ನೀಡಿದೆ. ಕಾನೂನಿನ ಅಂಶಗಳನ್ನು ಗೌರವಿಸಿ, ರಾಷ್ಟ್ರಧ್ವಜ, ರಾಷ್ಟ್ರೀಯತೆಯನ್ನು ಗೌರವಿಸಿ ಬದುಕಬೇಕು ಎಂದು ಕ್ರಿಯೇಟಿವ್‌ ವಿದ್ಯಾಸಂಸ್ಥೆಯ ಅರ್ಥಶಾಸ್ತ್ರ ಉಪನ್ಯಾಸಕ ಉಮೇಶ್‌ ಹೇಳಿದರು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಕ್ರಿಯೇಟಿವ್‌ ವಿದ್ಯಾಸಂಸ್ಥೆಯ ಸಂಸ್ಥಾಪ ಆದರ್ಶ ಎಂ.ಕೆ, ಸಂವಿಧಾನಾತ್ಮಕವಾಗಿ ನಮಗೆ ನೀಡಿರುವ ಅಧಿಕಾರವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿ ಪ್ರಜಾಸತ್ತಾತ್ಮಕ […]

ದೇಶದ ಐಕ್ಯತೆಯನ್ನು ಕಾಪಾಡಿ ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ: ಎಸ್.ಅಂಗಾರ

ಉಡುಪಿ: 1950 ಜನವರಿ 26 ಭಾರತದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವ ದಿನ. ಸ್ವತಂತ್ರ ಭಾರತವು ತನ್ನ ಸಂವಿಧಾನವನ್ನು ಅನುಷ್ಠಾನಕ್ಕೆ ತಂದು ದೇಶದ ಆಡಳಿತಕ್ಕೆ ಕಾನೂನು ಚೌಕಟ್ಟನ್ನು ರೂಪಿಸಿದ ಈ ದಿನವು ನಮ್ಮೆಲ್ಲರಿಗೂ ಐತಿಹಾಸಿಕವಾಗಿದೆ. ವಿಶ್ವದ ವಿಶಾಲ ಹಾಗೂ ಅತ್ಯಂತ ಬಲಿಷ್ಠ ಪ್ರಜಾಪ್ರಭುತ್ವವನ್ನು ಮುನ್ನೆಡಸಿಕೊಂಡು ಬಂದ ನಮ್ಮ ದೇಶದ ಎಲ್ಲಾ ಧೀಮಂತ ನಾಯಕರನ್ನು ಈ ಸಂದರ್ಭದಲ್ಲಿ ಸ್ಮರಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದರು. ಅವರು ಗಣರಾಜ್ಯೋತ್ಸವದಂದು ನಗರದ ಅಜ್ಜರಕಾಡು ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿ […]

ಹಲವು ಪ್ರಥಮಗಳಿಗೆ ಸಾಕ್ಷಿಯಾದ ಕರ್ತವ್ಯಪಥದ ಗಣರಾಜ್ಯೋತ್ಸವದ ಪಥಸಂಚಲನ

ನವದೆಹಲಿ: ಗುರುವಾರದಂದು ದೇಶವು 74 ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದು ಈ ಸಂದರ್ಭದಲ್ಲಿ ಹಲವಾರು ‘ಪ್ರಥಮ’ಗಳಿಗೆ ಸಾಕ್ಷಿಯಾಗಿದೆ. ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ನಾಗರಿಕರು ಇದೇ ‘ಮೊದಲ’ ಬಾರಿಗೆ ಹಲವು ವಿಷಯಗಳನ್ನು ನೋಡಿದ್ದಾರೆ. ಇದೇ ಮೊದಲ ಬಾರಿಗೆ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ್ದಾರೆ. ಭಾರತದ ಎರಡನೇ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ರಾಷ್ಟ್ರಧ್ವಜವನ್ನು ಬಿಚ್ಚಿ, ಮೆರವಣಿಗೆ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದ್ದಾರೆ. ಕಳೆದ ವರ್ಷ ಕರ್ತವ್ಯ ಪಥ್ ಎಂದು ಮರುನಾಮಕರಣಗೊಂಡ ರಾಜಪಥದಲ್ಲಿ ಮೊದಲ ಬಾರಿಗೆ ಭಾರತ […]

ಗಣರಾಜ್ಯೋತ್ಸವ ಅಂಗವಾಗಿ ಶೇ.50 ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕಗಳ ಮಾರಾಟ

ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ 2023 ರ ಜನವರಿ ತಿಂಗಳು ಪೂರ್ತಿ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ಲಭ್ಯವಿದ್ದು, ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‌ಸೈಟ್ www.kannadapustakapradhikara.com ನಲ್ಲಿ ನಮ್ಮ ಪುಸ್ತಕಗಳು […]