ಸದ್ಯಕ್ಕೆ ‘ಕಾಂತಾರ- 2’ ಬಗ್ಗೆ ಯಾವುದೇ ಯೋಜನೆಗಳಿಲ್ಲ; ಇದ್ದರೆ ಅಧಿಕೃತ ಘೋಷಣೆ ಮಾಡುತ್ತೇವೆ: ರಿಷಬ್ ಶೆಟ್ಟಿ

ನಟ, ನಿರ್ದೇಶಕ ಮತ್ತು ನಿರ್ಮಾಪಕ ರಿಷಬ್ ಶೆಟ್ಟಿ ಕಾಂತಾರ ಚಿತ್ರದ ಎರಡನೇ ಅವತರಣಿಕೆ ಬರಲಿದೆ ಎನ್ನುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಸದ್ಯಕ್ಕೆ ನಮ್ಮಲ್ಲಿ ಅಂತಹ ಯಾವುದೇ ಯೋಜನೆಗಳಿಲ್ಲ. ಕಾಂತಾರ 2 ರ ಅಂತಹ ಯಾವುದೇ ಯೋಜನೆ ಇದ್ದರೆ, ನಾವು ಅಧಿಕೃತ ಘೋಷಣೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ಇತ್ತೀಚೆಗಷ್ಟೆ ರಿಷಬ್ ಮತ್ತು ಪ್ರಗತಿ ಶೆಟ್ಟಿ ಮಂಗಳೂರಿನ ಭೂತ ಕೋಲವೊಂದರಲ್ಲಿ ದೈವದೆದುರು ನಿಂತಿರುವ ದೃಶ್ಯಗಳನ್ನು ಉಲ್ಲೇಖಿಸಿ ರಿಷಭ್ ಕಾಂತಾರ-2 ಮಾಡಲಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿದ್ದವು. ಆದರೆ ರಿಷಬ್ ಇದನ್ನು […]

ಸಪತ್ನೀಕ ಸಮೇತರಾಗಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ ರಿಷಭ್ ಶೆಟ್ಟಿ

ಕುಂದಾಪುರ: ಇಲ್ಲಿನ ಬಹುಪ್ರಸಿದ್ದ ಕುಂಭಾಶಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಕಾಂತಾರ ಚಿತ್ರದ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕುಟುಂಬ ಸಪತ್ನೀಕ ಸಮೇತರಾಗಿ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ, ಹಿರಿಯ ಮೊಕ್ತೇಸರ ಕೆ ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ದೇವಿದಾಸ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು, ದೇವಳದ ವ್ಯವಸ್ಥಾಪಕರು ಹಾಗೂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.  

ಬಾಲಿವುಡ್ ಬೇಡ ಕನ್ನಡ ಮಾತ್ರ ಸಾಕು; ಕನ್ನಡ ನನ್ನ ಕರ್ಮಭೂಮಿ: ರಿಷಭ್ ಶೆಟ್ಟಿ

ಟೈಮ್ಸ್ ನೌ ಶೃಂಗಸಭೆ 2022 ರಲ್ಲಿ ಹಿಂದಿ ಚಿತ್ರ ನಟ ಅನುಪಮ್ ಖೇರ್, ಕನ್ನಡ ನಟ ರಿಷಭ್ ಶೆಟ್ಟಿ ನಡುವೆ ಲೇಖಕ ಚೇತನ್ ಭಗತ್ ಸಂವಾದವೇರ್ಪಡಿಸಿದ್ದಾರೆ. ಟೈಮ್ಸ್ ನೌ ಶೃಂಗಸಭೆಯ ಹಿಂದಿನ ಆವೃತ್ತಿಗಳಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್, ರವಿಶಂಕರ್ ಪ್ರಸಾದ್, ಪಿಯೂಷ್ ಗೋಯಲ್, ನಿತಿನ್ ಗಡ್ಕರಿ, ಸ್ಮೃತಿ ಇರಾನಿ, ಪೀಟರ್ ಝೈಹಾನ್, ಕೆ ಶಿವನ್ ಮತ್ತು ಶ್ರೀ ರವಿಶಂಕರ್ ಮುಂತಾದವರು ಭಾಗವಹಿಸಿದ್ದಾರೆ. ಈ ಬರಿ ಹಿಂದಿ ಚಿತ್ರನಟ […]

ರಿಷಭ್ ಶೆಟ್ಟಿಯವರನ್ನು ಭೇಟಿಯಾದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್: ಚಿತ್ರ ನಿರ್ಮಾಣಕ್ಕೆ ಸರ್ಕಾರದ ಬೆಂಬಲದ ಬಗ್ಗೆ ಚರ್ಚೆ

ಪಣಜಿ: ಭಾರತದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಲು ರಿಷಭ್ ಶೆಟ್ಟಿ ಗೋವಾಕ್ಕೆ ತೆರಳಿದ್ದ ಸಂದರ್ಭದಲ್ಲಿ ಅವರು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿದ್ದಾರೆ. ರಿಷಭ್ ಅವರನ್ನು ಭೇಟಿಯಾದ ಬಳಿಕ ಸಾವಂತ್ ಟ್ವೀಟ್ ಮಾಡಿ, “ನಟ, ಬರಹಗಾರ, ಚಲನಚಿತ್ರ ನಿರ್ಮಾಪಕ ರಿಷಭ್ ಶೆಟ್ಟಿ ಅವರನ್ನು ಮಹಾಲಕ್ಷ್ಮಿ, ಪಣಜಿಯಲ್ಲಿ ಭೇಟಿ ಮಾಡಿ ಸಂವಾದ ನಡೆಸಿದೆ. ಅವರ ಕಾಂತಾರ ಚಿತ್ರ ಜನಮನ್ನಣೆ ಗಳಿಸಿದೆ. ವಿವಿಧ ವಿಷಯಗಳ ಕುರಿತು ಚರ್ಚಿಸಿದೆ ಮತ್ತು ಗೋವಾದಲ್ಲಿ ಚಲನಚಿತ್ರ ನಿರ್ಮಾಣಕ್ಕೆ ಗೋವಾ ಸರ್ಕಾರದ ಬೆಂಬಲವನ್ನು ಪುನರುಚ್ಚರಿಸಿದೆ” […]

ಶಿರ್ವದಲ್ಲೊಬ್ಬ ತದ್ರೂಪಿ ರಿಷಭ್ ಶೆಟ್ಟಿ: ಕಾಂತಾರದ ಶಿವ ಪಾತ್ರಧಾರಿ ರಿಷಭ್ ರೀತಿ ಕಾಣುವ ವ್ಯಕ್ತಿಗೆ ಬೇಸ್ತು ಬಿದ್ದ ಜನ!

ಶಿರ್ವ: ಉಡುಪಿಯ ಶಿರ್ವದ ಪಂಜಿಮಾರಿನಲ್ಲೊಬ್ಬ ಹೆಚ್ಚುಕಡಿಮೆ ಕಾಂತಾರದ ಶಿವ ಪಾತ್ರಧಾರಿಯಾದ ರಿಷಭ್ ಶೆಟ್ಟರಂತೆಯೆ ಕಾಣುವ ವ್ಯಕ್ತಿಯೊಬ್ಬರಿದ್ದಾರೆ. ದೂರದಿಂದ ನೋಡಿದಾಗ ರಿಷಭ್ ಶೆಟ್ರೇ ಬಂದರೇನೋ ಅನ್ನಿಸಿಬಿಡುತ್ತದೆ. ಆದರೆ ಹತ್ತಿರಹೋಗಿ ನೋಡಿದಾಗ ಇದು ರಿಷಭ್ ಶೆಟ್ರಲ್ಲ ಬದಲಿಗೆ ಅವರ ತದ್ರೂಪಿ ಎನ್ನುವುದು ಗೊತ್ತಾಗಿ ಜನ ಬೇಸ್ತು ಬೀಳುತ್ತಿದ್ದಾರೆ! ಶಿರ್ವದ ಪಂಜಿಮಾರಿನ ನಿವಾಸಿ ಪ್ರದೀಪ್ ಆಚಾರ್ಯ ಇವರೇ ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಮಾಡುತ್ತಿರುವ ಜ್ಯೂನಿಯರ್ ರಿಷಭ್ ಶೆಟ್ಟಿ. ಪ್ರಸ್ತುತ ಇವರು ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರು ಕಾಂತಾರದ ಶಿವ ಪಾತ್ರದಲ್ಲಿ […]