ಪಂಚೆ ಉಟ್ಟು ಮುಂಡಾಸು ಕಟ್ಟಿ ಕಾಂತಾರ ವೀಕ್ಷಿಸಿದ ಎಂ.ಆರ್.ಪಿ.ಎಲ್ ಉದ್ಯೋಗಿಗಳು!

ಮಂಗಳೂರು: ತುಳುವ ನಾಡಿನ ಸೊಗಡನ್ನು ಹೊಂದಿರುವ ಕಾಂತಾರ ಸೃಷ್ಟಿಸಿದ ಸಂಚಲನ ಹೇಗಿದೆಯೆಂದರೆ ಇದೀಗ ವಿಶ್ವವೆ ತುಳುವ ಸಂಸ್ಕೃತಿಯ ಬಗ್ಗೆ ಮಾತನಾಡುತ್ತಿದೆ ಮಾತ್ರವಲ್ಲ, ಇಲ್ಲಿನ ಆಚಾರ ವಿಚಾರಗಳನ್ನು ತಿಳಿದುಕೊಳ್ಳುವತ್ತ ಮುಖ ಮಾಡಿದೆ. ಇದೀಗ ಎಂ.ಆರ್.ಪಿ.ಎಲ್ ನ ಉದ್ಯೋಗಿಗಳು ಪಂಚೆ ಉಟ್ಟುಕೊಂಡು ಎರಡನೇ ಬಾರಿಗೆ ಚಲನಚಿತ್ರ ವೀಕ್ಷಣೆಗೆ ಹೊರಟಿದ್ದು, ಇದು ಈ ಸಿನಿಮಾ ಮತ್ತು ಈ ಮಣ್ಣಿನ ಸಂಸ್ಕೃತಿಯ ಬಗ್ಗೆ ಈ ಯುವಕರಿಗಿರುವ ಅಭಿಮಾನವನ್ನು ಎತ್ತಿ ತೋರಿಸುತ್ತಿದೆ. ಮೊದಲನೆ ಬಾರಿಗೆ ಕಾಂತಾರ ಚಲನಚಿತ್ರವನ್ನು ಕಂಡು ಖುಷಿಪಟ್ಟ ಈ ಯುವಕರ ತಂಡವು […]

ಬುಕ್ ಮೈ ಶೋನಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದ ‘ಕಾಂತಾರ’

ದೇಶದ ಚಲನಚಿತ್ರೋದ್ಯಮದಲ್ಲೇ ಸಂಚಲನ ಸೃಷ್ಟಿಸಿರುವ ‘ಕಾಂತಾರ’ ಭಾರತೀಯ ಚಿತ್ರರಂಗದಲ್ಲಿ ಇದುವರೆಗೆ ತೆರೆಕಂಡ ಅತ್ಯುತ್ತಮ ಚಲನಚಿತ್ರಗಳ ಸ್ಥಾನಮಾನವನ್ನು ಗಳಿಸಿದೆ. ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನದ ಈ ಚಿತ್ರವು ರಾಷ್ಟ್ರಪ್ರಶಸ್ತಿಯನ್ನು ಪಡೆಯುವ ಎಲ್ಲಾ ಲಕ್ಷಣಗಳೂ ಕಾಣಿಸುತ್ತಿವೆ. ಅಲ್ಲದೆ ಗಲ್ಲಾ ಪೆಟ್ಟಿಗೆ ಸಂಗ್ರಹಣೆಯೂ ದಿನೇ ದಿನೇ ಏರುತ್ತಲೇ ಇದೆ. ಹೊಂಬಾಳೆ ಫಿಲಂಸ್ ನಿರ್ಮಾಣದ ‘ಕಾಂತಾರ’ ರಜಾ ದಿನವಲ್ಲದೆ, ಕೆಲಸದ ದಿನಗಳಲ್ಲೂ ಹೌಸ್ ಫುಲ್ ಓಡುತ್ತಿದ್ದು, ಬುಕ್ ಮೈ ಶೋ ವೆಬ್ ಸೈಟ್ ನಲ್ಲಿ ಸಿನಿಮಾ ನೋಡುಗರಿಂದ ಟಿಕೆಟ್ ಗೆ ಭಾರಿ […]

ರಾಜ್ ಬಿ ಶೆಟ್ಟಿ ನೃತ್ಯ ಸಂಯೋಜನೆಯಲ್ಲಿ ಮೂಡಿಬಂತು ತುಳುನಾಡ ದೈವಾರಾಧನೆ: ಕನ್ನಡದ RRR ಕೈಚಳಕದ ಕಾಂತಾರಾ!!

ವಿಶ್ವ ಚಲನಚಿತ್ರ ವೇದಿಕೆಯಲ್ಲಿ ಸಂಚಲನ ಮೂಡಿಸುತ್ತಿರುವ, ತುಳುನಾಡು, ತುಳು ಸಂಸ್ಕೃತಿಯ ಬಗ್ಗೆ ಅಮೋಘ ಚಿತ್ರಣವನ್ನು ಹೊಂದಿರುವ, ಗಲ್ಲಾಪೆಟ್ಟಿಗೆಯನ್ನು ಕೊಳ್ಳೆ ಹೊಡೆಯುತ್ತಿರುವ ಹೊಂಬಾಳೆ ಫಿಲಂಮ್ಸ್ ನಿರ್ಮಾಣದ, ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದ ಹಿಂದೆ ರಾಜ್ ಬಿ.ಶೆಟ್ಟಿ ಮತ್ತು ಕಿರಿಕ್ ಹುಡುಗ ರಕ್ಷಿತ್ ಶೆಟ್ಟಿಯವರ ಕೈ ಚಳಕವೂ ಇದೆ! ಇಡೀ ಚಲನಚಿತ್ರದ ಅತ್ಯಂತ ಅಮೋಘ ಮತ್ತು ಅಕಲ್ಪನೀಯ ದೃಶ್ಯವಾಗಿರುವ ದೈವಾರಾಧನೆಯ ದೃಶ್ಯಗಳಿಗೆ ನೃತ್ಯ ಸಂಯೋಜನೆ ಮಾಡಿರುವುದು ಗರುಡ ಗಮನ ವೃಷಭ ವಾಹನ ಖ್ಯಾತಿಯ ರಾಜ್.ಬಿ. ಶೆಟ್ಟಿ. . @RajbShettyOMK […]

ಕರಾವಳಿ ಸೊಗಡಿನ ಕಾಂತಾರಕ್ಕೆ ಪ್ರೇಕ್ಷಕರಿಂದ ಭರಪೂರ ಅಭಿನಂದನೆ: ರಿಷಭ್ ಶೆಟ್ಟಿ ಅಭಿನಯಕ್ಕೆ ಮನಸೋತ ಅಭಿಮಾನಿಗಳು

ಉಡುಪಿ: ಅಪ್ಪಟ ಕರಾವಳಿಯ ಸೊಗಡನ್ನು ಹೊಂದಿರುವ ಕಾಂತಾರಾ ಕನ್ನಡ ಚಲನಚಿತ್ರವು ಶುಕ್ರವಾರ ಬಿಡುಗಡೆಹೊಂದಿದ್ದು, ಚಿತ್ರವನ್ನು ವೀಕ್ಷಿಸಿದವರೆಲ್ಲರಿಂದಲೂ ಒಳ್ಳೆಯ ವಿಮರ್ಶೆಗಳು ಬಂದಿವೆ. ತುಳುನಾಡಿನ ಭೂತ ಕೋಲ ಮತ್ತು ಕಂಬಳಗಳನ್ನು ಚಿತ್ರಿಸಿರುವ ಈ ಸಿನಿಮಾವು ತುಳುವರಲ್ಲದವರ ಮನಸ್ಸನ್ನೂ ಸೂರೆಗೊಂಡಿರುವುದು ವಿಶೇಷ. ಬಂಡಾಯ ನಾಯಕ ಶಿವನ ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿರುವ ರಿಷಭ್ ಶೆಟ್ಟಿ ಅಭಿನಯಕ್ಕೆ ಅಭಿಮಾನಿಗಳೆಲ್ಲಾ ಮನಸೋತಿದ್ದಾರೆ. ಈ ಚಿತ್ರದಲ್ಲಿ ಕಂಬಳ ಓಡಿಸುವುದನ್ನು ಡ್ಯೂಪ್ ಇಲ್ಲದೆ ತಾನೇ ನಿರ್ವಹಿಸಿರುವ ರಿಷಬ್ ಇದಕ್ಕಾಗಿ ತಮ್ಮ ಹುಟ್ಟೂರಿನಲ್ಲಿ ಹಲವು ದಿನಗಳ ಕಾಲ ಅಭ್ಯಾಸ […]

ತುಳುವ ಮಣ್ಣಿನ ಕಂಪು ಪಸರುವ ಕಾಂತಾರಾ ಚಿತ್ರದ ಟ್ರೈಲರ್ ಬಿಡುಗಡೆ

ಮಂಗಳೂರು/ಉಡುಪಿ: ಅವಿಭಜಿತ ದ.ಕ ಜಿಲ್ಲೆಯ ಬಹುಮುಖ ಪ್ರತಿಭೆ, ಕುಂದಾಪುರದ ಅಭಿಜಾತ ನಿರ್ದೇಶಕ, ರಾಷ್ಟ್ರಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕಾಂತಾರಾ ಚಿತ್ರದ ಟ್ರೈಲರ್ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಖುದ್ದು ರಿಷಬ್ ಶೆಟ್ಟಿ ಚಿತ್ರಕಥೆ ಬರೆದು ನಟಿಸಿ ನಿರ್ದೇಶಿಸಿರುವ ಈ ಚಿತ್ರದ ಟ್ರೈಲರ್ ನಲ್ಲಿ ತುಳುನಾಡಿನ ದೈವಾರಾಧನೆ ಮತ್ತು ಕಂಬಳದ ದೃಶ್ಯಗಳು ಮನೋಜ್ಞವಾಗಿ ಮೂಡಿಬಂದಿವೆ. ನಾಯಕಿಯಾಗಿ ಸಪ್ತಮಿ ಗೌಡ ಮುಖ್ಯ ಭೂಮಿಕೆಯಲ್ಲಿದ್ದಾರೆ. ಮತೊಬ್ಬ ಪ್ರತಿಭಾನ್ವಿತ ಸಂಗೀತ ನಿರ್ದೇಶಕ ಬಿ ಅಜನೀಶ್ ಲೋಕನಾಥ್ ಸಂಗೀತ ಮತ್ತು ಹಿನ್ನೆಲೆ ಸಂಗೀತವು […]