ಪಿಟಿಸಿಎಲ್ ವ್ಯಾಪ್ತಿಗೆ ಒಳಪಡುವ ಜಮೀನು ಜಿಲ್ಲಾಧಿಕಾರಿ ಹಂತದಲ್ಲಿ ಭೂ ಪರಿವರ್ತನೆಗೆ ಅವಕಾಶ: ಶಾಸಕ ರಘುಪತಿ ಭಟ್ ಗೆ ಅಭಿನಂದನೆ

ಉಡುಪಿ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮಂಜೂರಾದ ಜಮೀನಿನಲ್ಲಿ 10 ಸೆಂಟ್ಸ್ ವರೆಗಿನ ಜಮೀನನ್ನು ಸ್ವಂತ ವಾಸ್ತವ್ಯದ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಜಿಲ್ಲಾಧಿಕಾರಿಯವರ ಹಂತದಲ್ಲೇ ಅವಕಾಶ ಕಲ್ಪಿಸಿ ನ. 05 ರಂದು ಸರ್ಕಾರ ಆದೇಶ ಹೊರಡಿಸಿದೆ. ಈ ವಿಚಾರದ ಕುರಿತು ಶಾಸಕ ರಘುಪತಿ ಭಟ್ ಸದನದಲ್ಲಿ ವಿಷಯ ಪ್ರಸ್ತಾಪಿಸಿ, ಶೀಘ್ರದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದರು. ಅಲ್ಲದೆ ಸರ್ಕಾರಿ ಭರವಸೆಗಳ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಿ ಅಧಿಕಾರಿಗಳ ಗಮನಕ್ಕೆ ತಂದು […]

ಮತ್ಸ್ಯ ಸಂಪದ ಯೋಜನೆ: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಮಹಿಳೆಯರಿಂದ ಅರ್ಜಿ ಆಹ್ವಾನ

ಉಡುಪಿ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ 2022-23 ನೇ ಸಾಲಿಗೆ ನೀಡಲಾದ ಗುರಿಗಳಿಗೆ ತಕ್ಕಂತೆ ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಅರ್ಹ ಆಸಕ್ತ ಫಲಾನುಭವಿಗಳಿಂದ ಒಳನಾಡು ಮೀನುಗಾರಿಕೆ ಮತ್ತು ಜಲಕೃಷಿ ಅಭಿವೃದ್ಧಿ, ಕಡಲ ಕೃಷಿ ಮತ್ತು ಕಡಲ ಕಳೆ ಕೃಷಿಗೆ ಸೇರಿದಂತೆ ಸಮುದ್ರ ಮೀನುಗಾರಿಕೆ ಅಭಿವೃದ್ಧಿ, ಅಲಂಕಾರಿಕ ಮತ್ತು ಮನೋರಂಜನೆ ಮೀನುಗಾರಿಕಾ ಅಭಿವೃದ್ಧಿ, ಅಲಂಕಾರಿಕ ಮೀನು/ಅಕ್ವೇರಿಯಂ ಮಾರಾಟ ಮಳಿಗೆ ಸೇರಿದಂತೆ ಚಿಲ್ಲರೆ ಮೀನು ಮಾರಾಟ ಮಳಿಗೆಗಳ ನಿರ್ಮಾಣ , ಆಳಸಮುದ್ರದ ಮೀನುಗಾರಿಕೆಗೆ ಅಭಿವೃದ್ದಿ ಮತ್ತಿತರ […]

ಜಿಲ್ಲಾ ಬಿಜೆಪಿ ವತಿಯಿಂದ ಅ.22ರಂದು ಪ.ಜಾತಿ, ಪ.ಪಂಗಡದ ಬೃಹತ್ ಸಮಾವೇಶ

ಉಡುಪಿ: ಮುಖ್ಯಮಂತ್ರಿ ಬಸವರಾಜ‌ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಶೋಷಿತರು, ದಲಿತರು ಹಾಗೂ ಬಡವರ ಕಲ್ಯಾಣದತ್ತ ಚಿತ್ತ ಹರಿಸಿ, ಪರಿಶಿಷ್ಟ ಜಾತಿ ಮೀಸಲಾತಿಯನ್ನು 15% ದಿಂದ 17%ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 3% ದಿಂದ 7%ಕ್ಕೆ ಏರಿಸುವ ನಿಟ್ಟಿನಲ್ಲಿ ತೆಗೆದುಕೊಂಡ ಐತಿಹಾಸಿಕ ನಿರ್ಧಾರವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸುತ್ತದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಸ್.ಸಿ. ಮತ್ತು ಎಸ್.ಟಿ.‌ ಸಮುದಾಯದ ಮುಖಂಡರು ಅ.17 ರಂದು ಬೃಹತ್ ಸಂಖ್ಯೆಯಲ್ಲಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸಲಿದ್ದಾರೆ […]

ಮಕ್ಕಳು ಸೇರಿದಂತೆ 14 ದಲಿತರನ್ನು ಬಂಧನದಲ್ಲಿಟ್ಟ ಕಾಫಿ ಎಸ್ಟೇಟ್ ಮಾಲೀಕರ ವಿರುದ್ದ ಪ್ರಕರಣ ದಾಖಲು

ಚಿಕ್ಕಮಗಳೂರು: ಇಲ್ಲಿನ ಹುಸನೇಹಳ್ಳಿಯಲ್ಲಿ ಕಾಫಿ ಎಸ್ಟೇಟ್ ಮಾಲೀಕರೊಬ್ಬರು ಹಣಕಾಸಿನ ವಿಚಾರದಲ್ಲಿ 14 ದಲಿತರನ್ನು ಥಳಿಸಿ ಒಂದು ದಿನದ ಮಟ್ಟಿಗೆ ಅವರೆಲ್ಲರನ್ನು ಬಂಧಿಸಿಟ್ಟಿದ ವಿಚಾರದಲ್ಲಿ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕಾಫಿ ಎಸ್ಟೇಟ್ ಮಾಲೀಕ ಜಗದೀಶಗೌಡ ಮತ್ತು ಅವರ ಪುತ್ರ ತಿಲಕ್ ವಿರುದ್ಧ ಪೊಲೀಸರು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳು ಮತ್ತು ಎಸ್‌ಸಿ-ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಗಾಯಗೊಂಡಿರುವ ಮಹಿಳೆಯೊಬ್ಬರು, ಸಂತ್ರಸ್ತರನ್ನು ಹೊಡೆಯುವ […]

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಕುರಿ ಮೇಕೆ ಘಟಕ ಸ್ಥಾಪನೆಗೆ ಸಹಾಯಧನ ಸೌಲಭ್ಯ

ಉಡುಪಿ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಯೋಜನೆ/ ಗಿರಿಜನ ಉಪಯೋಜನೆಯಡಿ ಕುರಿ ಹಾಗೂ ಮೇಕೆ ಘಟಕಗಳನ್ನು ಅರಂಭಿಸಲು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಲ್ಲಿ ನೊಂದಾಯಿತರಾದ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 18 ರಿಂದ 60 ವರ್ಷ ವಯೋಮಿತಿಯ ಮಹಿಳಾ […]