ಸಿಜೆಐ ಟಿ.ಎಸ್.ನರಸಿಂಹ ಅವರಿಂದ ಶ್ರೀಕೃಷ್ಣಮಠಕ್ಕೆ ಭೇಟಿ

ಉಡುಪಿ: ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಟಿ.ಎಸ್.ನರಸಿಂಹ ತಮ್ಮ ಕುಟುಂಬ ಸಮೇತರಾಗಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಇವರು ಉಪಸ್ಥಿತರಿದ್ದರು.

ಕಾಪು: ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಚುನಾವಣಾ ಉಸ್ತುವಾರಿಯಾಗಿ ನಿವೃತ್ತ ಪಿ.ಎಸ್.ಐ ಜಯ ಕೌಡೂರು ನೇಮಕ

ಕರ್ನಾಟಕ ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ವಿನಯ್ ಕುಮಾರ್ ಸೊರಕೆ ಶಿಫಾರಸ್ಸಿನ ಮೇರೆಗೆ ಉಡುಪಿ ಜಿಲ್ಲಾ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಜಯಕುಮಾರ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮುಂದಾಳುತ್ವದಲ್ಲಿ ಕಾಪು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪರಿಶಿಷ್ಟ ಜಾತಿ ಪಂಗಡ ವಿಭಾಗದ ಚುನಾವಣಾ ಉಸ್ತುವಾರಿಯಾಗಿ ನಿವೃತ್ತ ಪಿ.ಎಸ್.ಐ ಜಯ ಕೌಡೂರು ಇವರನ್ನು ನೇಮಕ ಮಾಡಲಾಗಿದೆ. ಇವರು ಕಾಪು, ಉಡುಪಿ, ಪಡುಬಿದ್ರಿ ಪೊಲೀಸ್ ಠಾಣೆಗಳಲ್ಲಿ ಪಿ.ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ. ಈ ಸಂದರ್ಭದಲ್ಲಿ […]

ಕೆಮ್ಮಣ್ಣು: ಗುಜ್ಜರಬೆಟ್ಟು ಎಸ್.ಸಿ. ಕಾಲನಿಯಲ್ಲಿ ದೀಪಾವಳಿ ತುಡರ್ ಕಾರ್ಯಕ್ರಮದ ಪೂರ್ವಭಾವಿ ಸಭೆ

ಕೆಮ್ಮಣ್ಣು: ಕೇದಾರೋತ್ಥಾನ ಟ್ರಸ್ಟ್ ಮತ್ತು ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ವತಿಯಿಂದ ನಾಳೆ, ಅ. 26 ರಂದು ಸಂಜೆ 6.00 ಗಂಟೆಗೆ ಕೆಮ್ಮಣ್ಣು ಗುಜ್ಜರಬೆಟ್ಟು ಪರಿಶಿಷ್ಟ ಜಾತಿಯವರ ಕಾಲನಿಯಲ್ಲಿ ದೀಪಾವಳಿ ತುಡರ್ ಕಾರ್ಯಕ್ರಮ ನಡೆಯಲಿದೆ. ಕೇದಾರೋತ್ಥಾನ ಟ್ರಸ್ಟ್ ಅಧ್ಯಕ್ಷ, ಶಾಸಕ ಕೆ. ರಘುಪತಿ ಭಟ್ ನೇತೃತ್ವದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮದ ಪೂರ್ವ ತಯಾರಿ ಬಗ್ಗೆ ಮಂಗಳವಾರದಂದು ಪರಿಶಿಷ್ಟ ಜಾತಿ ಸಮುದಾಯದ ಮುಖಂಡರು ಹಾಗೂ ಸ್ಥಳೀಯರೊಂದಿಗೆ ಶಾಸಕ ರಘುಪತಿ ಭಟ್ ಸಭೆ ನಡೆಸಿ ಚರ್ಚಿಸಿದರು. ಈ ಸಂದರ್ಭದಲ್ಲಿ ಕೇದಾರೋತ್ಥಾನ […]

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಸಲ್ಲಿಸಿ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಸಮುದಾಯಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.bcwd.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: […]

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ತನ್ನ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಕಾಲ ನಡೆದ ವಾದದಲ್ಲಿ ಅರ್ಜಿದಾರರ ಪರ 21 ವಕೀಲರು ಭಾಗಿಯಾಗಿದ್ದು, ಪ್ರತಿವಾದಿಗಳ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ಕರ್ನಾಟಕ ಅಡ್ವೊಕೇಟ್ ಜನರಲ್ ಪ್ರಭುಲಿಂಗ […]