ಶ್ರೀ ಶಿರೂರು ಶ್ರೀಗಳ ಎಂದೂ ಮುಗಿಯದ ನೆನಪು: ಅಕ್ಷೋಭ್ಯ ಆಚಾರ್ಯರು ತೆರೆದ ಶ್ರೀಗಳ ನೆನಪಿನ ಸಂಪುಟ

ಒಮ್ಮೆ ನನ್ನ ಅಜ್ಜಿ ಕುಸುಮಕ್ಕನ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ ಮಠದಲ್ಲೇ ಉಳಿದೆವು. ರಾತ್ರಿ ಸುಮಾರು 1 ಗಂಟೆಯ ಹೊತ್ತಿಗೆ ಯಾರೋ ಮಠದವರೊಬ್ಬರು ಬೊಬ್ಬಿಡುತ್ತಾ ಬಂದು ನಮ್ಮ ಕೋಣೆಯ ಬಾಗಿಲನ್ನು ಜೋರಾಗಿ ತಟ್ಟಿದರು.​ ​ಕೃಷ್ಣಮಠದ ಪಾಯದ ಕೋಣೆಗೆ ಬೆಂಕಿ ಹತ್ತಿಕೊಂಡಿದೆ ಎಲ್ಲಾ ಬನ್ನಿ ಎಂದು ಕೂಗುತ್ತಾ ಮಠದ ಸಿಬ್ಬಂದಿ ಎಲ್ಲರಿಗೂ ವಿಷಯ ತಿಳಿಸುತ್ತಿದ್ದ. ತಕ್ಷಣ ನನ್ನ ಅಪ್ಪ ಲಾತವ್ಯಾಚಾರ್ ಮಠದ ಕಡೆಗೆ ಓಡಿದರು. ನಾವೂ ಕೂಡಾ ಅಮ್ಮನ ಜೊತೆ ಆ ಸ್ಥಳಕ್ಕೆ ಹೋದೆವು. ಆದರೆ ನಾವು ಬರುವಷ್ಟರಲ್ಲಿ ಶಿರೂರು […]