ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತನ ಕುಟುಂಬಕ್ಕೆ 2 ಲಕ್ಷ ರೂ ಘೋಷಣೆ ಮಾಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ

  ಬೆಂಗಳೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ 2 ಲಕ್ಷ ರೂ ನೀಡುವುದಾಗಿ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಘೋಷಣೆ ಮಾಡಿದ್ದಾರೆ. ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಮಾತನಾಡಿ, ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷ ಅವರ ಅಗಲಿಕೆ ವೈಯಕ್ತಿಕವಾಗಿ ತುಂಬಲಾರದ ನಷ್ಟವಾಗಿದ್ದು, ಆತನ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. “ಹರ್ಷನನ್ನು ಕಳೆದುಕೊಂಡಿರುವುದು ನನ್ನ ಸ್ವಂತ ಮಗನನ್ನೇ ಕಳೆದುಕೊಂಡಂತಾಗಿದೆ. ನಾನು ಅವರ ಕುಟುಂಬದ ಜೊತೆಗಿದ್ದೇನೆ. ಆತನ ಕುಟುಂಬಕ್ಕೆ 2 ಲಕ್ಷ ರೂ ನೀಡುತ್ತಿದ್ದೇನೆ”. ಎಂದು ಶಾಸಕ ಘೋಷಣೆ […]

ಶಿವಮೊಗ್ಗ ಭಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: ಇಬ್ಬರ ಬಂಧನ

  ಶಿವಮೊಗ್ಗ: ಫೆ. 20 ರಂದು ಶಿವಮೊಗ್ಗ ಜಿಲ್ಲೆಯ ಸೀಗೆ ಹಟ್ಟಿಯಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ(24) ನನ್ನು ಬರ್ಬರವಾಗಿ ಕೊಲೆಗೈಯಲಾಗಿದ್ದು, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಎಡಿಜಿಪಿಎಸ್ ಮುರುಗನ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮುರುಗನ್, ನಗರದಲ್ಲಿ ಕಾನೂನು ಸುವ್ಯವಸ್ಥೆಹದಗೆಡಲು ಬಿಡುವುದಿಲ್ಲ, ಶಾಂತಿ ಕಾಪಾಡಲು ಕ್ರಮ ಕೈಗೊಳ್ಳುತ್ತಿದ್ದೇವೆ ಮತ್ತು ಪರಿಸ್ಥಿತಿಯ ಅವಲೋಕನ ನಡೆಸುತ್ತಿದ್ದೇವೆ. ಜನರು ಶಾಂತಿ ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿದರು. ಭಜರಂಗದಳ ಕಾರ್ಯಕರ್ತನ ಹತ್ಯೆಯಿಂದ ಜಿಲ್ಲೆಯಾದ್ಯಂತ ಉದ್ವಿಗ್ನ ಪರಿಸ್ಥಿತಿ […]