ಸಿದ್ದರಾಮಯ್ಯ ಕ್ಷುಲ್ಲಕ-ಚೀಪ್ ಮೆಂಟಾಲಿಟಿ ಹೊಂದಿರುವ ರಾಜಕಾರಣಿ: ಶೋಭಾ ಕರಂದ್ಲಾಜೆ

ಉಡುಪಿ: ವೀರ ಸವಾರ್ಕರ್‌ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಅದಕ್ಕಾಗಿ ಅವರಿಗೆ ಗೌರವ ಸಲ್ಲಿಸುವ ಕೆಲಸ ಆಗಬೇಕು. ಸ್ವಾತಂತ್ರ್ಯಕ್ಕಾಗಿ ಯಾರೆಲ್ಲ ಹೋರಾಟ ಮಾಡಿದ್ದಾರೆಂಬುವುದೇ ಗೊತ್ತಿಲ್ಲದ ಸಿದ್ದರಾಮಯ್ಯಗೆ ಇದೆಲ್ಲ ಅರ್ಥ ಆಗುವುದಿಲ್ಲ. ಅವರು ಓರ್ವ ಕ್ಷುಲಕ, ಚೀಪ್‌ ಮೆಂಟಾಲಿಟಿ ಹೊಂದಿರುವ ರಾಜಕಾರಣಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದರು. ಉಡುಪಿಯಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸವಾರ್ಕರ್‌ ಅವರ ಇಡೀ ಕುಟುಂಬ ದೇಶಕ್ಕಾಗಿ ತ್ಯಾಗ ಮಾಡಿದೆ. ಸಿದ್ದರಾಮಯ್ಯನವರಿಗೆ ಕೇವಲ ವೋಟ್‌, ಜಾತಿ, ಧರ್ಮ ಮಾತ್ರ ಕಾಣುತ್ತದೆ. […]