ಉಡುಪಿಯ ಸ್ವಚ್ಛತೆಗೆ ಪೌರಕಾರ್ಮಿಕರ ಅವಿರತ ಸೇವೆ ಕಾರಣ: ಶೋಭಾ ಕರಂದ್ಲಾಜೆ

ಉಡುಪಿ: ಉಡುಪಿ ನಗರವು ಸ್ವಚ್ಛತೆಗ ಹೆಸರುವಾಸಿಯಾಗಿದೆ. ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅವಿರತವಾಗಿದ್ದು, ನಗರವನ್ನು ಸ್ವಚ್ಛವಾಗಿಡಲು ಪೌರಕಾರ್ಮಿಕರು ಶ್ರಮ ವಹಿಸುತ್ತಿದ್ದಾರೆ. ಕೊರೋನ ಸಂದರ್ಭದಲ್ಲಿ ಪೌರಕಾರ್ಮಿಕರು ಸಮಾಜದ ಉಳಿವಿಗಾಗಿ ಸ್ವಚ್ಛತೆಗೆ ಆದ್ಯತೆ ನೀಡಿದ್ದಾರೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಶನಿವಾರ ನಗರದ ಅಜ್ಜರಕಾಡು ಪುರಭವನದಲ್ಲಿ, ಉಡುಪಿ ನಗರಸಭೆ ವತಿಯಿಂದ ನಡೆದ ಪೌರಕಾರ್ಮಿಕರ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮಲ ಹೊರುವ ಪದ್ಧತಿ ನಿಷೇಧಕ್ಕೆ ಡಾ. ವಿ.ಎಸ್ ಆಚಾರ್ಯ ಅವರ […]

29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡ ನಿರ್ಮಾಣ: ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ರಾಷ್ಟ್ರಕ್ಕೆ ಮಾದರಿಯಾಗುವ ವಿದ್ಯಾಸಂಸ್ಥೆಯನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಉಡುಪಿಯ ಪ್ರಗತಿನಗರದಲ್ಲಿ10 ಎಕ್ರೆ ಜಾಗದಲ್ಲಿ ಸುಮಾರು 29 ಕೋಟಿ ರೂ. ವೆಚ್ಚದಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡವನ್ನು ಒಂದೂವರೆ ವರ್ಷದ ಒಳಗಾಗಿ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಸೋಮವಾರದಂದು ನಗರದ ಅಲೆವೂರು ಗ್ರಾಮದ ಪ್ರಗತಿನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದ ಎದುರು ಉಡುಪಿಯ ಕೇಂದ್ರೀಯ ವಿದ್ಯಾಲಯ ಶಾಲೆಯ ನೂತನ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ […]

ಚೈತ್ರಾ ಬೆಂಬಲಕ್ಕೆ ಯಾರೂ ನಿಂತಿಲ್ಲ; ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಶೋಭಾ ಕರಂದ್ಲಾಜೆ

ಬೆಂಗಳೂರು: ಚೈತ್ರಾ ಕುಂದಾಪುರ ಬಹುಕೋಟಿ ವಂಚನೆ ಪ್ರಕರಣದಲ್ಲಿ ಪಕ್ಷದ ಯಾರೂ ಕೂಡಾ ಚೈತ್ರಾ ಬೆಂಬಲಕ್ಕೆ ನಿಂತಿಲ್ಲ. ತಪ್ಪಿತಸ್ಥರು ಯಾರೇ ಆಗಿದ್ದರೂ ಅವರಿಗೆ ಶಿಕ್ಷೆ ಆಗಲೇಬೇಕು. ನಾವು ಯಾರೂ ಕೂಡಾ ವರನ್ನು ರಕ್ಷಿಸುತ್ತಿಲ್ಲ ಅಥವಾ ಯಾರಿಗೂ ಶಿಫಾರಸು ಮಾಡುವ ಕೆಲಸ ಮಾಡುತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮಲ್ಲಿ ಯಾರಿಗೂ ಚೈತ್ರಾ ಜೊತೆ ವೈಯಕ್ತಿಕ ಅಥವಾ ನೇರವಾದ ಯಾವುದೇ ಸಂಬಂಧ ಇಲ್ಲ, ಈ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ. ಕಾನೂನಿನ ಪ್ರಕಾರ ತನಿಖೆ […]

ಐದು ರಾಜ್ಯಗಳಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೊಸ ಅಭ್ಯರ್ಥಿಗಳ ನೇಮಕಕ್ಕೆ ಬಿಜೆಪಿ ಸಿದ್ದತೆ; ಒಕ್ಕಲಿಗ ಸಮುದಾಯಕ್ಕೆ ದೊರೆಯಲಿದೆಯೆ ರಾಜ್ಯದ ಚುಕ್ಕಾಣಿ?

ನವದೆಹಲಿ: ಪ್ರಮುಖ ಬೆಳವಣಿಗೆಯಲ್ಲಿ, ಭಾರತೀಯ ಜನತಾ ಪಕ್ಷವು ಐದು ರಾಜ್ಯಗಳಲ್ಲಿ ತನ್ನ ರಾಜ್ಯ ಘಟಕಗಳಿಗೆ ಹೊಸ ಅಧ್ಯಕ್ಷರ ನೇಮಕಗಳನ್ನು ಕೈಗೊಳ್ಳಲಿದೆ. ಗುಜರಾತ್, ತೆಲಂಗಾಣ, ಪಂಜಾಬ್, ಮಧ್ಯಪ್ರದೇಶ ಮತ್ತು ಕರ್ನಾಟಕಕ್ಕೆ ಹೊಸ ರಾಜ್ಯಾಧ್ಯಕ್ಷರನ್ನು ಹೆಸರಿಸುವ ಸಾಧ್ಯತೆಯಿದೆ. ಮೂಲಗಳ ಪ್ರಕಾರ, ಜಿ ಕಿಶನ್ ರೆಡ್ಡಿ ಅವರನ್ನು ತೆಲಂಗಾಣ ಘಟಕದ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಬಹುದು ಮತ್ತು ಪಂಜಾಬ್ ಘಟಕದ ಮುಖ್ಯಸ್ಥರಾಗಿ ಸುನೀಲ್ ಜಾಖರ್ ಅವರಿಗೆ ಜವಾಬ್ದಾರಿಯನ್ನು ನೀಡಬಹುದು. ಇದೇ ವೇಳೆ ಅಶ್ವಥ್ ನಾರಾಯಣ್ ಅಥವಾ ಶೋಭಾ ಕರಂದ್ಲಾಜೆ ಅವರನ್ನು ಬಿಜೆಪಿ ಕರ್ನಾಟಕ […]

ಹೆದ್ದಾರಿಯಲ್ಲಿ ಆಗುವ ದುರ್ಘಟನೆಗಳಿಗೆ ಸಂಸದರೇ ಕಾರಣ: ರಮೇಶ್ ಕಾಂಚನ್ 

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಲ್ಯಾಣಪುರದ ಸಂತೆಕಟ್ಟೆಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕಾಗಿ ತೋಡಿರುವ ಹೊಂಡದಿಂದ ಮಳೆಗಾಲದಲ್ಲಿ ಹೆದ್ದಾರಿ ಕುಸಿದು ಏನಾದರೂ ಅಪಾಯ ಸಂಭವಿಸಿದ್ದಲ್ಲಿ ಅದರ ನೈತಿಕ ಹೊಣೆಯನ್ನು ಹೊರಲು ಕೇಂದ್ರ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದರಾದ ಕುಮಾರಿ ಶೋಭಾ ಕರಂದ್ಲಾಜೆಯವರು ಸಿದ್ದರಿದ್ದಾರೆಯೇ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಪ್ರಶ್ನಿಸಿದ್ದಾರೆ. ಅವೈಜ್ಞಾನಿಕವಾಗಿ ಯಾವುದೇ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಆಳವಾದ ಗುಂಡಿಯನ್ನು ತೋಡಿದ್ದು ಸೂಕ್ತವಾದ ಮುನ್ನೆಚ್ಚರಿಕಾ ಕ್ರಮವನ್ನು ಕೂಡ ಕೈಗೊಂಡಿಲ್ಲ. ಒಂದು […]