ಜಿ 20- ಕೃಷಿ ಮಂತ್ರಿಗಳ ಸಮ್ಮೇಳನದಲ್ಲಿ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಭಾಗಿ

ಹೈದರಾಬಾದ್: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಯವರು ಹೈದರಾಬಾದಿನಲ್ಲಿ ನಡೆಯುತ್ತಿರುವ ಜಿ 20- ಕೃಷಿ ಮಂತ್ರಿಗಳ ಸಮ್ಮೇಳನದಲ್ಲಿ ಭಾಗವಹಿಸಿದರು. ಭಾರತದ ಸಾರಥ್ಯದಲ್ಲಿ ವಸುದೈವ ಕುಟುಂಬಕಂ ಎಂಬ ಧ್ಯೇಯ ವಾಕ್ಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಿ20 ಶೃಂಗ ಸಭೆಯು ಭಾರತದಲ್ಲಿ ನಡೆಯುತ್ತಿದೆ. 3 ದಿನಗಳ ಕಾಲದ ಸಭೆಯಲ್ಲಿ ಜಿ20 ರಾಷ್ಟ್ರಗಳ ಕೃಷಿ ಸಚಿವರು ಹಾಗೂ ಕೃಷಿ ಕ್ಷೇತ್ರದ ಪರಿಣಿತರು ಮತ್ತು ವಿವಿಧ ರಾಷ್ಟ್ರಗಳ 200 ರಕ್ಕೂ ಅಧಿಕ […]

ದೇಶದ ಉಜ್ವಲ ಭವಿಷ್ಯಕ್ಕಾಗಿ ಮಗದೊಮ್ಮೆ ನರೇಂದ್ರ ಮೋದಿ ಅವರನ್ನು ಗೆಲ್ಲಿಸಲು ಶ್ರಮ: ಶೋಭಾ ಕರಂದ್ಲಾಜೆ

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಸೋತಿದ್ದರೂ ಉಡುಪಿ ಜಿಲ್ಲೆಯಲ್ಲಿ ಐದೂ ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲೇ ಮುಂಚೂಣಿ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಮಸ್ತ ಕಾರ್ಯಕರ್ತರ ಸಾಧನೆ ಅಭಿನಂದನೀಯ. ಪ್ರಸಕ್ತ ಚುನಾವಣೆಯ ಅವಲೋಕನದ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮಗದೊಮ್ಮೆ ದೇಶದ ಪ್ರಧಾನಿಯನ್ನಾಗಿಸಲು ಸಂಘಟಿತರಾಗಿ ಶ್ರಮಿಸೋಣ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ […]

ಯುವಜನತೆ ತಾವು ಬೆಳೆಯುವ ಜೊತೆಗೆ ದೇಶದ ಬೆಳವಣಿಗೆಯ ಸಂಕಲ್ಪ ಮಾಡಬೇಕು: ಶೋಭಾ ಕರಂದ್ಲಾಜೆ

ಉಡುಪಿ: ನೆಹರು ಯುವ ಕೇಂದ್ರ ಉಡುಪಿ ಇದರ ಆಶ್ರಯದಲ್ಲಿ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಗರದ ಪೂರ್ಣಪ್ರಜ್ಞ ಕಾಲೇಜಿನ ಆಡಿಟೋರಿಯಂನಲ್ಲಿ ಜಿಲ್ಲಾ ಯುವ ಉತ್ಸವ ಕಾರ್ಯಕ್ರಮವನ್ನು ಬುಧವಾರದಂದು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ಕಲ್ಯಾಣ ರಾಜ್ಯ ಖಾತೆ ಸಚಿವ ಶೋಭಾ ಕರಂದ್ಲಾಜೆ, ಯುವ ಜನತೆ ತಾವು ಬೆಳೆಯುವುದರ ಜೊತೆಗೆ ದೇಶದ ಬೆಳವಣಿಗೆಯ ಸಂಕಲ್ಪ ಮಾಡಬೇಕು. ಮೊದಲು ಭಾರತ ದೇಶವನ್ನು ಭೀಕ್ಷುಕರ ದೇಶ, ಬಡವರ ದೇಶ, ಹಾವಾಡಿಗಾರ ದೇಶವೆಂದು ವಿದೇಶಿಗರು ಕರೆಯುತ್ತಿದ್ದರು. ವಿದೇಶಗಳಲ್ಲಿ […]

ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರಿನ ತನಕ ವಿಸ್ತರಿಸುವಂತೆ ಕೇಂದ್ರ ಸಚಿವೆಗೆ ಮನವಿ ಸಲ್ಲಿಸಿದ ಯಶ್ ಪಾಲ್ ಸುವರ್ಣ

ಉಡುಪಿ: ಇಲ್ಲಿನ ಶಾಸಕ ಯಶ್ ಪಾಲ್ ಸುವರ್ಣ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರವನ್ನು ಮಂಗಳೂರಿಗೆ ವಿಸ್ತರಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಅವರ ಮೂಲಕ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರವರಿಗೆ ಮನವಿ ಸಲ್ಲಿಸಿದರು. ಶೀಘ್ರವೇ ಗೋವಾ – ಮುಂಬೈ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಆರಂಭಗೊಳ್ಳಲಿದ್ದು ಇದನ್ನು ಮಂಗಳೂರಿನ ತನಕ ವಿಸ್ತರಿಸಿದಲ್ಲಿ ಉಡುಪಿ ಹಾಗೂ ಮಂಗಳೂರು ಭಾಗದ ಪ್ರಯಾಣಿಕರಿಗೆ ಇದರ ಪ್ರಯೋಜನ ಲಭಿಸಲಿದೆ. ಅಲ್ಲದೆ ಕಾರವಾರದಿಂದ […]

ಎಕ್ಸಿಟ್ ಪೋಲ್ ವರದಿ ಸುಳ್ಳಾಗಲಿದೆ; ಭಾರತೀಯ ಜನತಾ ಪಕ್ಷ ಸರಕಾರ ರಚಿಸಲಿದೆ: ಶೋಭಾ ಕರಂದ್ಲಾಜೆ

ಬೆಂಗಳೂರು: ಎಕ್ಸಿಟ್ ಪೋಲ್ ಸಮೀಕ್ಷಾ ವರದಿ ಸುಳ್ಳಾಗಲಿದೆ. ಭಾರತೀಯ ಜನತಾ ಪಕ್ಷ ಈ ಬಾರಿ ಸರಕಾರ ರಚಿಸಲಿದೆ ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ ಹೇಳಿದರು. ಗುರುವಾರ ನಗರದ ಕ್ಯಾಪಿಟಲ್ ಹೋಟೆಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಜನರ ಉತ್ಸಾಹದ ಮತದಾನ, ಬೂತ್‍ಗಳಲ್ಲಿ ನಮಗೆ ಕಂಡು ಬಂದ ವರದಿಗಳು ಇದಕ್ಕೆ ಕಾರಣ. ನಮ್ಮ ಕಾರ್ಯಕರ್ತರ ಸಮೀಕ್ಷೆ ಆಧಾರದಲ್ಲಿ ನೂರಕ್ಕೆ 100 ಬಿಜೆಪಿ ಬಹುಮತದ […]