ಅಟಲ್ ಉತ್ಸವ: ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ನುಡಿಯಾದ ಐತಿಹಾಸಿಕ ‘ಬೂತ್ ಸಂಗಮ’ ಕಾರ್ಯಕ್ರಮ

ಉಡುಪಿ: ಬಿಜೆಪಿಯ ವಿಧಾನಸಭಾ ಚುನಾವಣೆಯ ಮುನ್ನುಡಿಯಾಗಿ ನಗರದ ಎಂಜಿಎಂ ಕಾಲೇಜು ಮೈದಾನದಲ್ಲಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 98 ನೇ ಜನ್ಮದಿನದ ಅಂಗವಾಗಿ ಅಟಲ್ ಉತ್ಸವ ಆಯೋಜಿಸಲಾಗಿದ್ದು ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಐತಿಹಾಸಿಕ ‘ಬೂತ್ ಸಂಗಮ’ ಕಾರ್ಯಕ್ರಮ ಭಾನುವಾರ ನಡೆಯಿತು. ಉಡುಪಿ ವಿಧಾನಸಭಾ ಕ್ಷೇತ್ರದ ‘ಬೂತ್ ಸಂಗಮ’ದಲ್ಲಿ ನಗರ ಮತ್ತು ಗ್ರಾಮಾಂತರ ಭಾಗದ 226 ಮತಗಟ್ಟೆಗಳಿಂದಲೂ ಕಾರ್ಯಕರ್ತರು ಭಾಗವಹಿಸಿ ಇತಿಹಾಸ ನಿರ್ಮಿಸಿದರು.   ಮುಂಬರುವ ವಿಧಾನಸಭೆಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಮಂಥನ ನಡೆಸಲಾಯಿತು. […]

ಹೆಜಮಾಡಿ ಟೋಲ್ ನಲ್ಲಿ ದುಬಾರಿ ಶುಲ್ಕ ಅವೈಜ್ಞಾನಿಕ: ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿ ಶಾಸಕ ರಘುಪತಿ ಭಟ್ ಮನವಿ

ಉಡುಪಿ: ಸುರತ್ಕಲ್ ಟೋಲ್ ರದ್ದು ಮಾಡಿ ಅದರ ಶುಲ್ಕವನ್ನು ಹೆಜಮಾಡಿ ಟೋಲ್ ಜತೆ ವಿಲೀನ ಮಾಡಿರುವುದು ಅವೈಜ್ಞಾನಿಕವಾಗಿದ್ದು, ಇದರಿಂದಾಗಿ ಉಂಟಾಗುವ ಪರಿಣಾಮಗಳ ಬಗ್ಗೆ ಡಿ. 01ರಂದು ಶಾಸಕ ರಘುಪತಿ ಭಟ್ ಅವರು ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಿನಂತಿಸಿದರು. ಮನವಿ ಸ್ವೀಕರಿಸಿದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ […]

ಹೆಜಮಾಡಿ ದುಬಾರಿ ಟೋಲ್ ದರ 40% ಕಮೀಷನ್ ನ ಮತ್ತೊಂದು ಉದಾಹರಣೆ: ವೆರೋನಿಕಾ ಕರ್ನೆಲಿಯೋ

ಮಂಗಳೂರು: ಕಳೆದ ಹಲವು ವರ್ಷಗಳಿಂದ ಎಡೆಬಿಡದೆ ಹೋರಾಟ ನಡೆಸಿ ಸುರತ್ಕಲ್‌ ಟೋಲ್‌ಗೇಟ್‌ ಅನ್ನು ತೆರವುಗೊಳಿಸಿದರೂ ಈಗ ಅದನ್ನು ಹೆಜಮಾಡಿ ಟೋಲ್‌ ಪ್ಲಾಝಾ ಜತೆ ವಿಲೀನಗೊಳಿಸಿದ್ದಲ್ಲದೆ ದುಬಾರಿ ಟೋಲ್ ದರ ಇಟ್ಟಿರುವುದು ಸಂಸದ ನಳಿನ್ ಕುಮಾರ್ ಕಟೀಲ್ ಅವರ 40% ಕಮೀಷನ್ ಗೆ ಮತ್ತೊಂದು ಉದಾಹರಣೆಯಾಗಿದೆ ಎಂದು ಕೆಪಿಸಿಸಿ ವಕ್ತಾರರಾದ ವೆರೋನಿಕಾ ಕರ್ನೆಲಿಯೋ ಕಿಡಿ ಕಾರಿದ್ದಾರೆ. ಸಂಸದ ನಳಿನ್ ಕುಮಾರ್ ಇತ್ತೀಚೆಗೆ ಟ್ವೀಟ್ ಮಾಡಿ ಸುರತ್ಕಲ್ ಟೋಲ್ ರದ್ದು ಮಾಡಿದ್ದಕ್ಕಾಗಿ ಕೇಂದ್ರ ಭೂಸಾರಿಗೆ ಸಚಿವರಿಗೆ ಧನ್ಯವಾದ ಅರ್ಪಿಸಿದ್ದಾರೆ ಆದರೆ […]

ಸಾಮಾಜಿಕ ಬದ್ದತೆಯನ್ನು ಹೊಂದಿರುವ ಮಹಾಲಕ್ಷ್ಮೀ ಬ್ಯಾಂಕಿನ ಸಾಧನೆ ಸರ್ವರಿಗೂ ಪ್ರೇರಣೆಯಾಗಲಿ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಉಡುಪಿ: ಆರೋಗ್ಯವಂತ ದೇಹಕ್ಕೆ ರಕ್ತನಾಳಗಳು ಯಾವ ರೀತಿ ಅವಶ್ಯವೋ ಅದೇ ರೀತಿ ಸಮಾಜದಲ್ಲಿ ಸದೃಢ ಆರ್ಥಿಕ ವ್ಯವಸ್ಥೆಯ ನಿರ್ಮಾಣಕ್ಕೆ ನರನಾಡಿಯಂತೆ ಉತ್ತಮ ಬ್ಯಾಂಕಿಂಗ್ ವ್ಯವಸ್ಥೆ ಕೂಡಾ ಅವಶ್ಯ. ಕರಾವಳಿ ಜಿಲ್ಲೆಯಲ್ಲಿ ಶಿಸ್ತುಬದ್ಧ ಕಾರ್ಯವೈಖರಿಯಿಂದ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ನಿರಂತರ ಪ್ರಗತಿ ದಾಖಲಿಸುತ್ತಿರುವ ಮಹಾಲಕ್ಷ್ಮೀ ಬ್ಯಾಂಕ್ ಸಾಧನೆ ಅಭಿನಂದನಾರ್ಹ ಎಂದು ಪೇಜಾವರ ಮಠದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು. ಅವರು ಉಡುಪಿ ಅಜ್ಜರಕಾಡಿನ ಕಲ್ಮಂಜೆ ಟವರ್ಸ್ ನಲ್ಲಿ ಮಹಾಲಕ್ಷ್ಮೀ ಬ್ಯಾಂಕಿನ ವಿಸ್ತರಿತ ಆಡಳಿತ ಕಚೇರಿಯ […]

ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದನೆ: ಸಚಿವೆ ಮನವಿ ಮೇರೆಗೆ ರಾಜ್ಯಕ್ಕೆ ಹೆಚ್ಚುವರಿ 30 ಲಕ್ಷ ಲೀಟರ್ ಸೀಮೆ ಎಣ್ಣೆ ಬಿಡುಗಡೆ ಮಾಡಿದ ಕೇಂದ್ರ  

  ಉಡುಪಿ/ ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿರುವ ನಾಡದೋಣಿ ಮೀನುಗಾರಿಕೆಗೆ ಹಂಚಿಕೆಯಾಗಿದ್ದ ಸೀಮೆ ಎಣ್ಣೆ ಸಕಾಲದಲ್ಲಿ ಸಿಗುತ್ತಿಲ್ಲ ವಾಗಿದ್ದು, ಈ ಕುರಿತು ಕೇಂದ್ರ ಸರಕಾರದ ಗಮನವನ್ನು ಸೆಳೆದು ಹಂಚಿಕೆಯಾಗಿರುವ ಸೀಮೆ ಎಣ್ಣೆಯನ್ನು ತ್ವರಿತವಾಗಿ ಬಿಡುಗಡೆ ಮಾಡಿ ಈ ಮೂಲಕ ಕರಾವಳಿಯ ಮೀನುಗಾರರ ಹಿತವನ್ನು ಕಾಪಾಡಬೇಕು ಎಂದು ಉಡುಪಿಯ ಮೀನುಗಾರರ ಒಕ್ಕೂಟವು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರಿಗೆ ಮನವಿಯನ್ನು ಸಲ್ಲಿಸಿದ್ದು, ಕರಾವಳಿಯ ಮೀನುಗಾರರ ಮನವಿಯನ್ನು ಕೇಂದ್ರ ಸಚಿವೆ, […]