ಅಧಿಕಾರ ಹಂಚಿಕೆ ಸೂತ್ರವಿಲ್ಲ; ಮುಂದಿನ ಐದು ವರ್ಷ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಂ.ಬಿ.ಪಾಟೀಲ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಸೂತ್ರವಿಲ್ಲ ಎಂದು ಶನಿವಾರ ಕರ್ನಾಟಕ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್ ಹೇಳಿದ್ದಾರೆ. ತಮ್ಮ ನಡುವೆ ಅಧಿಕಾರ ಹಂಚಿಕೆ ಸೂತ್ರವಿದ್ದರೆ ಹೈಕಮಾಂಡ್ ಘೋಷಣೆ ಮಾಡುತ್ತಿತ್ತು ಎಂದ ಪಾಟೀಲ್, ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿಯೇ ಇರುತ್ತಾರೆ ಎಂದರು. ಕರ್ನಾಟಕದ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ನಿರ್ಧರಿಸಲು ಚರ್ಚೆಗಳು ಮತ್ತು ಸಭೆಗಳು ಮುಂದುವರೆದಂತೆ, ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು […]

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೀವನಾಧಾರಿತ ಚಲನ ಚಿತ್ರ ತೆರೆಗೆ: ನಿರ್ಮಾಪಕರ ಜೊತೆ ಮಾತುಕತೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೀವನಾಧಾರಿತ ಕನ್ನಡ ಚಲನಚಿತ್ರವು ತೆರೆಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ. ಕರ್ನಾಟಕದಲ್ಲಿ ಏಪ್ರಿಲ್-ಮೇ 2023 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಈ ಚಿತ್ರ ತೆರೆಕಾಣುವ ನಿರೀಕ್ಷೆ ಇದೆ. ಮಾಜಿ ಶಾಸಕ ಶಿವರಾಜ್ ತಂಗಡಗಿ ಮತ್ತು ಶಾಸಕ ಬಿ ಜೆಡ್ ಜಮೀರ್ ಅಹಮದ್ ಖಾನ್ ಅವರು ಸಿದ್ದರಾಮಯ್ಯ ಅವರ ವೈಯಕ್ತಿಕ ಮತ್ತು ರಾಜಕೀಯ ಪ್ರಯಾಣವನ್ನು ಬಿಂಬಿಸುವ ಚಿತ್ರವನ್ನು ನಿರ್ಮಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ‘ಹೌದು ಹುಲಿಯಾ’ […]

ಭಾರತ್ ಜೋಡೋ ಯಾತ್ರೆ: ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ?

ಬೆಂಗಳೂರು: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 30 ರಂದು ಕರ್ನಾಟಕಕ್ಕೆ ಪ್ರವೇಶಿಸಲಿದ್ದು, ಪಕ್ಷದ ರಾಜ್ಯ ಮುಖ್ಯಸ್ಥ ಡಿ ಕೆ ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವಿನ ಭಿನ್ನಾಭಿಪ್ರಾಯವು ರಾಜ್ಯ ಘಟಕದಲ್ಲಿನ ದೋಷಗಳನ್ನು ಮತ್ತೆ ಬಹಿರಂಗಪಡಿಸಿದೆ ಎಂದು ಮಾಧ್ಯಮ ವರದಿಗಳು ಹೇಳುತ್ತಿವೆ. ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಕರ್ನಾಟಕದ ಉದ್ದಗಲಕ್ಕೂ 22 ದಿನಗಳ ಕಾಲ ಸಂಚರಿಸಲಿದೆ. ಆದರೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಬಣಗಳು ಒಂದಾಗಲು ಹೆಣಗಾಡುತ್ತಿರುವಂತೆ ತೋರುತ್ತಿದೆ. ರಾಜ್ಯದಲ್ಲಿ ಯಾತ್ರೆಯನ್ನು […]

ಸಿದ್ದು ಹಿಂದೂ ವಿರೋಧಿ ಹೇಳಿಕೆಗಳೇ ಕಾಂಗ್ರೆಸ್ ಅಧ:ಪತನಕ್ಕೆ ನಾಂದಿ ಹಾಡಲಿದೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಮೈಯೆಲ್ಲಾ ಹಿಂದೂ ವಿರೋಧಿ ವಿಷ ತುಂಬಿಕೊಂಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಿಂದೂ ವಿರೋಧಿ ಹೇಳಿಕೆಗಳೇ ಕಾಂಗ್ರೆಸ್ ಅಧ:ಪತನಕ್ಕೆ ನಾಂದಿ ಹಾಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಅಪ್ಪಟ ದೇಶ ಭಕ್ತ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ಹೆಸರೆತ್ತಲೂ ಯೋಗ್ಯತೆ ಇಲ್ಲದ ಸಿದ್ದರಾಮಯ್ಯ ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸಮಾಜ ಒಡೆಯುವ ದುಷ್ಕೃತ್ಯದಲ್ಲಿ ತೊಡಗಿರುವುದು ಜಗಜ್ಜಾಹೀರಾಗಿದೆ. ‘ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಬ್ಯಾನರ್ ಯಾಕೆ ಹಾಕಿದ್ದೀರಿ’ ಎಂದಿರುವ ಸಿದ್ದುಗೆ ಹಿಂದೂ ಏರಿಯಾಕ್ಕೆ […]

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ 2 ಲಕ್ಷ ರೂ ಹಣದ ಕಟ್ಟು ವಾಪಸ್ ಎಸೆತ: ಹಣ ಬೇಡ, ಸಮಾಜದಲ್ಲಿ ಶಾಂತಿ ಬೇಕು ಎಂದ ಮಹಿಳೆ

ಕೆರೂರು: ಬಾಗಲಕೋಟೆಯ ಕೆರೂರಿನಲ್ಲಿ ಶುಕ್ರವಾರ ನಡೆದ ಹಿಂಸಾಚಾರದಲ್ಲಿ ಗಾಯಗೊಂಡ ನಾಲ್ವರಲ್ಲಿ ಒಬ್ಬರ ಕುಟುಂಬದ ಸದಸ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡಿದ 2 ಲಕ್ಷ ರೂ. ಗಳ ಹಣದ ಕಟ್ಟನ್ನು ಅವರ ಕಾರಿನ ಮೇಲೆ ವಾಪಸ್ ಎಸೆದಿದ್ದಾರೆ. ಇಷ್ಟು ದಿನ ಕಳೆದರೂ ಯಾವೊಬ್ಬ ನಾಯಕನೂ ಭೇಟಿಗೆ ಬಾರದಿರುವುದಕ್ಕೆ ಗಾಯಾಳುಗಳ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. #WATCH | Karnataka: A woman, whose husband was injured in recent Kerur violence, threw the money that was […]