ಗಾಂಧೀ ಹತ್ಯೆಗೆ ಯೋಜನೆ ರೂಪಿಸಿದ್ದೇ ಸಾವರ್ಕರ್ ಎಂದ ಸಿದ್ದರಾಮಯ್ಯ..!

ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾರತ ರತ್ನ ಪಡೆಯಲು ಸಾವರ್ಕರ್​​ಗಿಂತ ಅರ್ಹ ವ್ಯಕ್ತಿ ಮತ್ತೊಬ್ಬರಿಲ್ಲ ಎಂಬ ಹೇಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಗಾಂಧೀಜಿ ಹತ್ಯೆ ಮಾಡಲು ಯೋಜನೆ ರೂಪಿಸಿದ್ದೇ ಸಾವರ್ಕರ್. ನಾಥೂರಾಮ್​ ಗೋಡ್ಸೆ ಹಿಂದೆ ನಿಂತು ಗಾಂಧೀಜಿ ಹತ್ಯೆಗೆ ಸಂಚು ರೂಪಿಸಿದ್ದರು. ಸೂಕ್ತ ಸಾಕ್ಷಿ ಇಲ್ಲದೇ ಆರೋಪಿಯಾಗಿ ಗುರುತಿಸಿರಲಿಲ್ಲ. ಅಂತಹ ವ್ಯಕ್ತಿಗೆ ಕೇಂದ್ರ ಸರ್ಕಾರ ಭಾರತ ರತ್ನ […]