ಸೌತ್ ಕೆನರಾ ಫೋಟೋಗ್ರಾಫ‌ರ್ಸ್ ಅಸೋಸಿಯೇಶನ್ ವತಿಯಿಂದ ಕೆಸರು ಗದ್ದೆ ಕ್ರೀಡಾಕೂಟ

ಉಡುಪಿ: ಸೌತ್ ಕೆನರಾ ಫೋಟೋಗ್ರಾಫ‌ರ್ಸ್ ಅಸೋಸಿಯೇಶನ್ ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಹಾಗೂ ಉಡುಪಿ ವಲಯದ ಅತಿಥ್ಯದಲ್ಲಿ 14 ವಲಯಗಳ ಎಸ್ ಕೆಪಿಎ ಸದಸ್ಯರ ಜಿಲ್ಲಾಮಟ್ಟದ ಕೆಸರು ಗದ್ದೆ ಕ್ರೀಡಾಕೂಟವು ಕಟಪಾಡಿ ಬೀಡು ಕಂಬಳ ಗದ್ದೆಯ ಸಮೀಪದಲ್ಲಿ ಭಾನುವಾರ ನಡೆಯಿತು. ಉಡುಪಿ ಶಾಸಕ ಯಶ್ ಪಾಲ್ ಎ. ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಗತ್ತಿನಲ್ಲಿ ಛಾಯಾಗ್ರಾಹಕರನ್ನು ಮೀರಿಸುವ ವ್ಯಕ್ತಿ ಇಲ್ಲ. ದೇಶದಲ್ಲಿ ಅತೀ ಹೆಚ್ಚು ಭವಿಷ್ಯ ಇರುವ ವೃತ್ತಿ ನಿರತರು ಛಾಯಾಗ್ರಾಹಕರಾಗಿದ್ದಾರೆ. ಪ್ರಸ್ತುತ ಸರಕಾರವನ್ನು ಗುರುತಿಸಿ, […]

ತುಳು ಭಾಷಾಭಿಮಾನ ಮೆರೆದ ಜಿಲ್ಲಾ ಛಾಯಾಗ್ರಾಹಕರು: ವಾರ್ಷಿಕ ಸಭೆಯಲ್ಲಿ ಮಾತೃಭಾಷೆಗೆ ಆದ್ಯತೆ 

ಉಡುಪಿ: ಸದಸ್ಯರು ನಿರಂತರವಾಗಿ ಸಂಘಟನೆಯಲ್ಲಿ ತೊಡಗಿಸಿಕೊಂಡಾಗ ಸಂಘಟನೆಯು ಬಲಿಷ್ಠ ವಾಗುವುದು. ಇದರಿಂದ ಸರಕಾರ ಮಟ್ಟದಲ್ಲಿ ಅಥವಾ ಸ್ಥಳೀಯ ಮಟ್ಟದಲ್ಲಿ ಸಂಘಟನೆಗೆ ಬೇಕಾದ ಸವಲತ್ತುಗಳನ್ನು ಪಡೆಯಲು ಅನುಕೂಲವಾಗುವುದು ಎಂದು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ ಮತ್ತು ಉಡುಪಿ ಜಿಲ್ಲೆ ಇದರ ಉಡುಪಿ ವಲಯದ ವಾರ್ಷಿಕ ಸಭೆಯನ್ನು ಜಿಲ್ಲಾಧ್ಯಕ್ಷ ಆನಂದ ಎನ್ ಕುಂಪಲ ಜ್ಯೋತಿ ಬೆಳಗಿಸಿ, ಉದ್ಘಾಟಿಸಿ ಮಾತನಾಡಿದರು. ತುಳುವಿಗೆ ಅಧಿಕೃತ ಭಾಷೆಯ ಮಾನ್ಯತೆಗಾಗಿ ಹೋರಾಟದ ಈ ಸಂದರ್ಭದಲ್ಲಿ ಉಡುಪಿ ವಲಯವು ಸಭೆಯ ಇಡೀ ನಡಾವಳಿಯನ್ನು ತುಳುವಿನಲ್ಲಿ ನೆರವೇರಿಸಿದ್ದು […]

ಸಮಾಜ ಸೇವೆಯಲ್ಲಿ ಛಾಯಾಗ್ರಹಣದ ಪಾತ್ರ ಪ್ರಮುಖ: ಡಾ.ಜಯಗೌರಿ ಹಡಿಗಾಲ್

ಉಡುಪಿ: ಸಮಾಜ ಸೇವೆಯಲ್ಲಿ ಛಾಯಾಗ್ರಹಣ ಪ್ರಮುಖ ಪಾತ್ರ ವಹಿಸುತ್ತದೆ, ಸಮಾಜದ ಸೇವೆಗಾಗಿ ನಡೆಯುವ ಕಾರ್ಯಕ್ರಮಗಳನ್ನು ದಾಖಲು ಮಾಡುವುದು ತುಂಬಾ ಮುಖ್ಯ ಎಂದು ರೋಟರಿ ಕ್ಲಬ್ 3182 ಜಿಲ್ಲಾ ಗವರ್ನರ್ ಜಯ ಗೌರಿ ಹಡಿಗಾಲ್ ಅಭಿಪ್ರಾಯಪಟ್ಟರು. ಅವರು ಮಣಿಪಾಲದಲ್ಲಿ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯ ಹಾಗೂ ರೋಟರಿ ಕ್ಲಬ್ ಮಣಿಪಾಲದ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಮಹಿಳಾ ಛಾಯಾಗ್ರಾಹಕಿಯಾರಾದ ವಿದ್ಯಾ ಪಿ. ಹೆಬ್ಬಾರ್, ಪೂರ್ಣಿಮಾ ಪ್ರಕಾಶ್ ಶೆಟ್ಟಿ, ವಿಮಲಾ ಕಲ್ಮಾಡಿ ಹಾಗೂ […]

ಸೌತ್‌ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ ಮಹಾಸಭೆ

ಉಡುಪಿ: ವ್ಯಕ್ತಿಯ ವ್ಯಕ್ತಿತ್ವ, ಸಮಾಜವನ್ನು ಕೇವಲ ಒಂದು ಚಿತ್ರದ ಮೂಲಕ ಬಿಂಬಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಛಾಯಾಚಿತ್ರ ಗ್ರಾಹಕರು ಸಮಾಜದ ದೃಷ್ಠಿಕೋನವನ್ನು ಅರ್ಥೈಸಿಕೊಂಡು ಧನಾತ್ಮಕ ಚಿತ್ರ ತೆಗೆಯಲು ಪ್ರಯತ್ನಿಸಬೇಕು ಎಂದು ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ. ವಿಜಯ ಬಲ್ಲಾಳ್‌ ಹೇಳಿದರು. ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿ ಯೇಶನ್‌ ಸಹಯೋಗದಲ್ಲಿ ಭಾನುವಾರ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಆಯೋಜಿಸಿದ್ದ 31ನೇ ವಾರ್ಷಿಕ ಮಹಾಸಭೆಯನ್ನು ಉದ್ಭಾಟಿಸಿ ಮಾತನಾಡಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ […]

ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ನ ಕೊರೊನಾ ಜನಜಾಗೃತಿ ಅಭಿಯಾನಕ್ಕೆ ಚಾಲನೆ

ಉಡುಪಿ: ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ಉಡುಪಿ ವಲಯದ ವತಿಯಿಂದ ಹಮ್ಮಿಕೊಂಡ ಕೊರೊನಾ ಬಗ್ಗೆ ಜನಜಾಗೃತಿ ಮೂಡಿಸುವ ಕರಪತ್ರ ಹಂಚುವ ಅಭಿಯಾನಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಷ್ಣುವರ್ಧನ್‌ ಹಾಗೂ ಎಎಸ್ಪಿ ಕುಮಾರಚಂದ್ರ ಅವರಿಗೆ ಸೋಮವಾರ ಕರಪತ್ರ ಹಸ್ತಾಂತರಿಸುವ ಮೂಲಕ ಚಾಲನೆ ನೀಡಲಾಯಿತು. ಸಂಸ್ಥೆಯ ವತಿಯಿಂದ ಸುಮಾರು 5 ಸಾವಿರ ಕರಪತ್ರಗಳನ್ನು ನಗರದಾದ್ಯಂತ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭದಲ್ಲಿ ಉಡುಪಿ ವಲಯ ಅಧ್ಯಕ್ಷ ಪ್ರಕಾಶ್‌ ಕೊಡಂಕೂರು, ಕಾರ್ಯದರ್ಶಿ ಸುಖೇಶ್‌ ಅಮೀನ್‌, ಗೌರವಾಧ್ಯಕ್ಷ ಶಿವ ಕೆ. ಅಮೀನ್‌, ಜಿಲ್ಲಾ […]