ಕೊರೊನಾ ವೈರಸ್ ನಿಯಂತ್ರಣ ಆಗುವವರೆಗೂ ಬಂದ್ ಅನಿವಾರ್ಯ: ಶ್ರೀರಾಮುಲು

ಮಂಗಳೂರು: ಕೊರೊನ ತಡೆಗಟ್ಟುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ನೇತೃತ್ವದಲ್ಲಿ ಹಲವು ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಇಂದು ಮಂಗಳೂರಲ್ಲಿರೋ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೈಸೂರು ವಿಭಾಗ ಮಟ್ಟದ ಅಧಿಕಾರಿಗಳ ಸಭೆ ಆರೋಗ್ಯ ಸಚಿವ ಶ್ರೀರಾಮುಲು‌ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಸಚಿವ ಶ್ರೀರಾಮುಲು‌, ಕೊರೊನಾ ವೈರಸ್ ಬಗ್ಗೆ ಇಡೀ ದೇಶದಲ್ಲಿ ಭಯಾನಕ ವಾತಾವರಣ ಸೃಷ್ಟಿ ಆಗಿದೆ. ಕೇಂದ್ರ ರಾಜ್ಯ ಸರಕಾರ ಸವಾಲಾಗಿ ಸ್ವೀಕರಿಸಿ ತಡೆಗಟ್ಟಲು ಪ್ರಾಮಾಣಿಕ ಪ್ರಯತ್ನ […]