ನಗರದ ಪೇಜಾವರ ಮಠಕ್ಕೆ ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೈ ಭೇಟಿ
![](https://udupixpress.com/wp-content/uploads/2022/03/IMG_20220318_173533.jpg)
ಉಡುಪಿ ಪೇಜಾವರ ಮಠಕ್ಕೆ ಇಂದು ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೈ ಅವರು ಭೇಟಿ ನೀಡಿದರು. ರಾಜ್ಯಪಾಲರನ್ನು ಶ್ರೀಗಳ ಆಪ್ತ ಕಾರ್ಯದರ್ಶಿಗಳಾದ ವಿಷ್ಣುಮೂರ್ತಿ ಆಚಾರ್ಯ, ಕೃಷ್ಣ ಭಟ್ ಹಾಗೂ ಶ್ರೀಗಳ ಶಾಸ್ತ್ರ ವಿದ್ಯಾರ್ಥಿಗಳು ಮಂತ್ರಘೋಷ ಸಹಿತ ಬರಮಾಡಿಕೊಂಡರು. ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಭಾವಚಿತ್ರ ಹಾಗೂ ಪವಿತ್ರ ಪಾದುಕೆಗಳಿಗೆ ಪುಷ್ಪ ಅರ್ಪಿಸಿದ ಬಳಿಕ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಕೆಲಹೊತ್ತು ಸಮಾಲೋಚನೆ ನಡೆಸಿದರು. ಶ್ರೀಗಳು ರಾಜ್ಯಪಾಲರನ್ನು ಶಾಲು ಸ್ಮರಣಿಕೆ ದೇವರ ಗಂಧಪ್ರಸಾದ ಹಾಗೂ ಫಲ ಮಂತ್ರಾಕ್ಷತೆ ನೀಡಿ […]