ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ

ಉಡುಪಿ: ಕೌಂಡಿಣ್ಯ ಗೋತ್ರ ನಾಯಕ ಕುಲಪುರಷ ಕಮಿಟಿ ರಮಾನಾಥ್ ಗೋವಾ ಹಾಗೂ ದಿವಂಗತ. ಬಿ.ಜಯರಾಮ್ ನಾಯಕ್ ಮೆಮೋರಿಯಲ್ ಸ್ಮರಣಾರ್ಥವಾಗಿ ಹತ್ತನೇ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶೇಷ ಸಾಧನೆಗೈದ 9 ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಭಾನುವಾರದಂದು ಉಡುಪಿ ಒಳಕಾಡಿನ ಅನಂತ ವೈದಿಕ ಕೇಂದ್ರದಲ್ಲಿ ಜರುಗಿತು. ಟ್ರಸ್ಟ್ ನ ಅಧ್ಯಕ್ಷ ಮೋಹನ್ ನಾಯಕ್ ಬೆಳಗಾಂ, ಪ್ರತಿ ವಿದ್ಯಾರ್ಥಿಗೂ 5000ರೂ ನಗದು ಸಹಿತ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಅಜೆಕಾರ್ ಪ್ರೇಮಾನಂದ್ ನಾಯಕ್, ರಾಧಾಕೃಷ್ಣ […]
ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಪುಷ್ಪಾನಂದ ಫೌಂಡೇಶನ್ ವತಿಯಿಂದ ಪ್ರತಿಭಾ ಪುರಸ್ಕಾರ ವಿತರಣೆ

ಕಾಪು: ಕಾಪು ಪುರಸಭೆ ವ್ಯಾಪ್ತಿಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ 105 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುಷ್ಪಾನಂದ ಫೌಂಡೇಶನ್ ವತಿಯಿಂದ, ಕಾಪು ಲಕ್ಷ್ಮೀ ಜನಾರ್ಧನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಪುರಸ್ಕಾರಗಳನ್ನು ವಿತರಿಸಲಾಯಿತು. ಪುಷ್ಪಾನಂದ ಫೌಂಡೇಶನ್ ಪ್ರವರ್ತಕ ಯಶ್ ಪಾಲ್ ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ ಕುಮಾರ್ ಶೆಟ್ಟಿ, ಜ್ಯೋತಿಷ್ಯ ವಿದ್ವಾನ್ ಪ್ರಕಾಶ್ ಅಮ್ಮಣ್ಣಾಯ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ಕಾಪು […]
ನಗರಸಭಾ ವ್ಯಾಪ್ತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ದೀನ್ ದಯಾಳ್ ಉಪಾಧ್ಯಾಯ ಸ್ಮರಣ ಪಾರಿತೋಷಕ ವಿತರಣೆ

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಪ್ರೌಢ ಶಾಲೆಗಳಲ್ಲಿ 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿಅತ್ಯಧಿಕ ಅಂಕ ಗಳಿಸಿರುವ ಪ್ರತಿಭಾನ್ವಿತ 3 ವಿದ್ಯಾರ್ಥಿಗಳಿಗೆ ಪಂಡಿತ್ ದೀನದಯಾಳ್ ಉಪಾಧ್ಯಾಯ ಸ್ಮರಣ ಪಾರಿತೋಷಕ, ಶಾಲಾ ಮಟ್ಟದಲ್ಲಿಅತ್ಯಧಿಕ ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಡಾ. ವಿ. ಎಸ್. ಆಚಾರ್ಯ ಸ್ಮರಣ ಪಾರಿತೋಷಕ ಮತ್ತು 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿಅತ್ಯಧಿಕ ಅಂಕಗಳಿಸಿರುವ ವಿದ್ಯಾರ್ಥಿನಿಗೆ ಕುಮಾರಿ ಗಾಯತ್ರಿ ಸ್ಮಾರಣ ಪಾರಿತೋಷಕ ವಿತರಣಾ ಸಮಾರಂಭವು, ಕೀರ್ತಿಶೇಷ ಡಾ. ವಿ. ಎಸ್. ಆಚಾರ್ಯ ಜನ್ಮ ದಿನವಾದ ಜುಲೈ 6 ಬುಧವಾರದಂದು […]
ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆ ಹಿನ್ನೆಲೆ: ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿ

ಉಡುಪಿ: ಜೂನ್ 27 ರಿಂದ ಜುಲೈ 4 ರವರೆಗೆ ಜಿಲ್ಲೆಯ 7 ಪರೀಕ್ಷಾ ಕೇಂದ್ರಗಳಲ್ಲಿ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳು ಮುಕ್ತಾಯವಾಗುವವರೆಗೆ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಮತ್ತು ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟಲು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ 144(1) ರಂತೆ […]
ಹಿರಿಯಡ್ಕ: ನರೇಂದ್ರ ಮೋದಿ ಆಡಳಿತದ ಎಂಟನೇ ವರ್ಷಾಚರಣೆ ಪ್ರಯುಕ್ತ ‘ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ’ ಕಾರ್ಯಕ್ರಮ

ಉಡುಪಿ: ನರೇಂದ್ರ ಮೋದಿ ಆಡಳಿತದ ಎಂಟನೇ ವರ್ಷಾಚರಣೆ ಪ್ರಯುಕ್ತ ‘ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ’ ಕಾರ್ಯಕ್ರಮದಡಿ 80 ಬಡಗುಬೆಟ್ಟು ಹಾಗೂ ಹಿರಿಯಡ್ಕ ಮಹಾ ಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಭಾನುವಾರ ಹಿರಿಯಡ್ಕದ ಗಣೇಶ ಕಲಾ ಮಂದಿರದಲ್ಲಿ ನಡೆಯಿತು. ಸೂರ್ಯಕಲಾ ಅಂಜಾರು ಮಠ ವಂದೇಮಾತರಂ ಗೀತೆ ಹಾಡಿ ಕಾರ್ಯಕ್ರಮ ಪ್ರಾರಂಭಿಸಿದರು. ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ […]