ಎಸ್.ಎಸ್.ಎಲ್.ಸಿ ಯಲ್ಲಿ ಜಿಲ್ಲೆ ಪ್ರಥಮ ಸ್ಥಾನ ಪಡೆಯಲು ಯೋಜನೆ ರೂಪಿಸಿ: ದಿನಕರ ಬಾಬು

ಉಡುಪಿ, ಜೂನ್ 15: ಈ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಜಿಲ್ಲೆ ರಾಜ್ಯದಲ್ಲಿ 5 ನೇ ಸ್ಥಾನ ಪಡೆದಿದ್ದು, ಮುಂದಿನ ಬಾರಿ ಜಿಲ್ಲೆ ಪ್ರಥಮ ಸ್ಥಾನ ಪಡೆಯುವ ನಿಟ್ಟಿನಲ್ಲಿ, ಈಗಿನಿಂದಲೇ ಯೋಜನೆ ರೂಪಿಸಿ, ಕಾರ್ಯೋನ್ಮುಖರಾಗುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಸೂಚಿಸಿದ್ದಾರೆ. ಅವರು ಶನಿವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆ ಪ್ರಥಮ ಸ್ಥಾನ ಪಡೆಯಲು ಯೋಜನೆ ರೂಪಿಸುವಂತೆ ಸೂಚಿಸಿದ ಅಧ್ಯಕ್ಷ […]

ಎಸ್.ಎಸ್.ಎಲ್.ಸಿ ಯಲ್ಲಿ ಪ್ರಥಮ ಸ್ಥಾನ ಪಡೆಯಲು ಯತ್ನ: ದಿನಕರ ಬಾಬು

ಉಡುಪಿ, ಮೇ 31:  ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆಯಬೇಕೆನ್ನುವ ಉಡುಪಿ ಜಿಲ್ಲೆಯ ಅತಿಯಾದ ಆತ್ಮವಿಶ್ವಾಸ ಮತ್ತು ತಂತ್ರಗಾರಿಕೆಯನ್ನು ಬೇರೆ ಜಿಲ್ಲೆಯವರು ಅನುಕರಣೆ ಮಾಡಿದ್ದರಿಂದ ಜಿಲ್ಲೆಗೆ ಹಿನ್ನೆಡೆಯಾಗಿದ್ದು,  ರಾಜ್ಯದಲ್ಲಿ 5 ನೇ ಸ್ಥಾನ ಪಡೆಯುವಂತಾಗಿದೆ,   ಮುಂದಿನ ಸಾಲಿನಲ್ಲಿ ಬೇರೆ ರೀತಿಯ ವಿಭಿನ್ನ ತಂತ್ರಗಾರಿಕೆ ಹಾಗೂ ಮಕ್ಕಳಲ್ಲಿ ಕಲಿಯುವಿಕೆಯ ಬಗ್ಗೆ ಹೆಚ್ಚಿನ ಜಾಗೃತಿಯನ್ನು ವಹಿಸುವುದರ ಮೂಲಕ , ರಾಜ್ಯದಲ್ಲಿ ಮತ್ತೆ ಪ್ರಥಮ ಸ್ಥಾನ ಪಡೆಯುವಲ್ಲಿ ಎಲ್ಲಾ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರುಗಳು ಸಹಕರಿಸಬೇಕೆಂದು ಜಿಲ್ಲಾ […]

ಎಸ್ಸೆಸ್ಸೆಲ್ಸಿ ಮರು ಮೌಲ್ಯಮಾಪನ, ಆಳ್ವಾಸ್ ನ ಸುಜ್ಞಾನ್ ಆರ್. ಶೆಟ್ಟಿ ರಾಜ್ಯಕ್ಕೆ ಪ್ರಥಮ

ಮೂಡುಬಿದಿರೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೌಲ್ಯಮಾಪಕರ ಎಡವಟ್ಟಿನಿಂದ ಕಡಿಮೆ ಅಂಕ ಪಡೆದಿದ್ದ ಕರಾವಳಿಯ ಮತ್ತೊಬ್ಬ ಬಾಲಕ ಮರುಮೌಲ್ಯ ಮಾಪನದಲ್ಲಿ ಗರಿಷ್ಠ ಅಂಕ ಪಡೆದಿದ್ದು, ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ಸುಜ್ಞಾನ್ ಆರ್. ಶೆಟ್ಟಿ ಮರುಮೌಲ್ಯಮಾಪನದಲ್ಲಿ 625ರಲ್ಲಿ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಮೊದಲ ಸ್ಥಾನಿಯಾಗಿ ಮೂಡಿಬಂದಿದ್ದಾನೆ. ಮೂಡುಬಿದಿರೆಯ ಅರತಿ ಹಾಗೂ ರಮೇಶ್ ಶೆಟ್ಟಿ ದಂಪತಿಯ ಪುತ್ರನಾಗಿರುವ ಸುಜ್ಞಾನ್ ಆರ್. ಶೆಟ್ಟಿ ಅವರನ್ನು ಆಳ್ವಾಸ್ ಸಂಸ್ಥೆಯ ಮುಖ್ಯಸ್ಥ ಮೋಹನ್ ಆಳ್ವ ಅಭಿನಂದಿಸಿದ್ದಾರೆ.

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ.ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹಧನ

ಉಡುಪಿ, ಮೇ 21: 2019-20 ರಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರೋತ್ಸಾಹಧನ ಮಂಜೂರು ಮಾಡಲಾಗುತ್ತಿದೆ. ಪ್ರಥಮ ಪ್ರಯತ್ನದಲ್ಲಿ ಶೇ.60 -74.99 ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 7000 ರೂ.ಗಳನ್ನು ಮತ್ತು ಶೇ.75 ಹಾಗೂ ಅದಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ 15000 ರೂ. ಗಳನ್ನು ಮಂಜೂರು ಮಾಡಲಾಗುತ್ತಿದೆ. ಈ ಪ್ರೋತ್ಸಾಹಧನವನ್ನು ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆ ಹಾಗೂ ಇತರೆ ವಿವರಗಳನ್ನು ಇಲಾಖೆಯ ವೆಬ್‍ಸೈಟ್ […]

ಎಸ್‍ಎಸ್‍ಎಲ್‍ಸಿ ತೇರ್ಗಡೆಯಾದ ಪ.ಜಾತಿ/ ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಆನ್‍ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭ

ಉಡುಪಿ, ಮೇ 21: 2018 -19 ನೇ ಸಾಲಿಗೆ ಎಸ್‍ಎಸ್‍ಎಲ್‍ಸಿಯಲ್ಲಿ ಪ್ರಥಮ ಬಾರಿಗೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಆನ್‍ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಗಿದೆ. SC ವಿದ್ಯಾರ್ಥಿಗಳು ದಾಖಲೆಗಳೊಂದಿಗೆ www.sw.kar.nic.in SSLC prize money, ಹಾಗೂ ST ವಿದ್ಯಾರ್ಥಿಗಳು www.tw.kar.nic.in SSLC prize money ಸ್ಕೀಮ್‍ನಲ್ಲಿ ಸಂಪೂರ್ಣ ಮಾಹಿತಿಯನ್ನು (ಎಸ್‍ಎಸ್‍ಎಲ್‍ಸಿ ಅಂಕ ಪಟ್ಟಿ, ಆಧಾರ್‍ಕಾರ್ಡ್, ಬ್ಯಾಂಕ್ ಖಾತೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ) ನೀಡಿ ಕಡ್ಡಾಯವಾಗಿ ಆನ್ ಲೈನ್‍ನಲ್ಲಿ […]