ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ: ಪೇಜಾವರ ಶ್ರೀ

ಉಡುಪಿ: ಸಾಲು ಹಬ್ಬಗಳ ಹಿನ್ನಲೆಯಲ್ಲಿ ಕೋವಿಡ್ 19 ನಿರ್ಬಂಧಗಳನ್ನು ಒಂದಷ್ಟು ಸಡಿಲಿಸಿ ಸರಕಾರ ಪುಣ್ಯಕ್ಷೇತ್ರಗಳ ದರ್ಶನ ಹಾಗೂ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲು ಅವಕಾಶ ಮಾಡಿಕೊಟ್ಟಿದೆ. ಆದರೆ ಸಾರ್ವಜನಿಕರು ಯಾವುದೇ ಕಾರಣಕ್ಕೂ ಮೈಮರೆಯಬಾರದು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದರ ಜತೆಗೆ ಸರ್ಕಾರ ಎಲ್ಲ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದ್ದಾರೆ. ಕೊರೊನಾ ಮಹಾಮಾರಿಯಿಂದ ದೇಶವನ್ನು ಮುಕ್ತಗೊಳಿಸಲು ಕೆಲವು ಸ್ವಯಂ ನಿರ್ಬಂಧಗಳನ್ನು ಅನುಸರಿಸಿಕೊಂಡು ಕ್ಷೇತ್ರದರ್ಶನ ಹಾಗೂ ಧಾರ್ಮಿಕ ಕಾರ್ಯಗಳನ್ನು ನಡೆಸಬೇಕು. ಕೊರೊನಾ ಮುಕ್ತಿಗಾಗಿ, […]