ಕುಕ್ಕೆ ಸುಬ್ರಹ್ಮಣ್ಯ: ದೇವರ ದರ್ಶನ ಸಮಯದಲ್ಲಿ ಬದಲಾವಣೆ

ಕಡಬ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತರ ಅನುಕೂಲಕ್ಕಾಗಿ ದೇವರ ದರ್ಶನ ಸಮಯದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ದೇವಸ್ಥಾನ ಆಡಳಿತ ಮಂಡಳಿ ಹೊಸ ವೇಳಾಪಟ್ಟಿಯನ್ನು ಜಾರಿಗೆ ತಂದಿದ್ದು, ಭಕ್ತರಿಗೆ ಇದೀಗ ಪ್ರತಿದಿನ ಹೆಚ್ಚುವರಿ ಒಂದು ಗಂಟೆ ದರ್ಶನದ ಅವಕಾಶ ದೊರೆಯಲಿದೆ. ಈ ಮೊದಲು ಮಧ್ಯಾಹ್ನ 1.30ರಿಂದ 3.30ರವರೆಗೆ ದೇವರ ದರ್ಶನವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತಿತ್ತು. ಆದರೆ ಹೊಸ ನಿರ್ಧಾರದಂತೆ ಇದೀಗ ಮಧ್ಯಾಹ್ನ 2.00ರಿಂದ 3.00ರವರೆಗೆ ಮಾತ್ರ ದೇವಸ್ಥಾನ ಬಂದ್ ಮಾಡಲಾಗುತ್ತದೆ. ಇದರಿಂದ ಮಧ್ಯಾಹ್ನದ ವೇಳೆಯಲ್ಲಿ ಭಕ್ತರಿಗೆ ಹೆಚ್ಚುವರಿ ದರ್ಶನ ಸೌಲಭ್ಯ […]

ಸಂವಿಧಾನದ ಪೀಠಿಕೆಯಿಂದ ಸಮಾಜವಾದ ಮತ್ತು ಜಾತ್ಯತೀತತೆ ಪದ ಅಳಿಸಲು ಸುಬ್ರಮಣಿಯನ್ ಸ್ವಾಮಿ ಅರ್ಜಿ: ಸೆ.23 ರಂದು ಸುಪ್ರೀಂ ಕೋರ್ಟ್ ವಿಚಾರಣೆ

ನವದೆಹಲಿ: ಸಂವಿಧಾನದ ಪೀಠಿಕೆಯಿಂದ “ಸಮಾಜವಾದ” ಮತ್ತು “ಜಾತ್ಯತೀತತೆ” ಪದಗಳನ್ನು ಅಳಿಸಲು ಕೋರಿ ರಾಜ್ಯಸಭಾ ಸಂಸದ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ರಿಟ್ ಅರ್ಜಿಯು ಶುಕ್ರವಾರದಂದು ಸುಪ್ರೀಂ ಕೋರ್ಟ್‌ನಲ್ಲಿ ಪರಿಗಣನೆಗೆ ಬಂದಿದೆ. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಎಂಎಂ ಸುಂದ್ರೇಶ್ ಅವರನ್ನೊಳಗೊಂಡ ಪೀಠವು ಸೆಪ್ಟೆಂಬರ್ 23 ರಂದು ಭಾರತದ ಮುಖ್ಯ ನ್ಯಾಯಮೂರ್ತಿಗಳ ಪೀಠದ ಮುಂದೆ ಪಟ್ಟಿ ಮಾಡಲಾದ ಇದೇ ರೀತಿಯ ಅರ್ಜಿಯೊಂದಿಗೆ ಡಾ.ಸ್ವಾಮಿ ಅವರ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲಿದೆ. ವಕೀಲ ಸತ್ಯ ಸಬರ್ವಾಲ್ ಪ್ರಕರಣದ ಎರಡನೇ ಅರ್ಜಿದಾರರಾಗಿದ್ದಾರೆ. 1976 […]