ಸುದರ್ಶನ ನ್ಯೂಸ್ ವಾಹಿನಿಯ ‘ಬಿಂದಾಸ್ ಬೋಲ್’ ಕಾರ್ಯಕ್ರಮದ ಎರಡು ಎಪಿಸೋಡ್ ಪ್ರಸಾರಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: ಹಿಂದಿಯ ಸುದರ್ಶನ ನ್ಯೂಸ್ ವಾಹಿನಿಯ ವಿವಾದಿತ ‘ಬಿಂದಾಸ್ ಬೋಲ್’ ಕಾರ್ಯಕ್ರಮದ ಎರಡು ಎಪಿಸೋಡ್ ಪ್ರಸಾರಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಮುಸ್ಲಿಂ ಸಮುದಾಯವನ್ನು ‘ಕೆಟ್ಟದಾಗಿ’ ಬಿಂಬಿಸಲಾಗುತ್ತಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್ ಇಂದು ಮತ್ತು ನಾಳೆ ಪ್ರಸಾರವಾಗಬೇಕಿದ್ದ ಎಪಿಸೋಡ್ ಗಳಿಗೆ ನಿರ್ಬಂಧ ವಿಧಿಸಿದೆ. ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ತ್ರಿ ಸದಸ್ಯ ಪೀಠವು ಈ ಕಾರ್ಯಕ್ರಮದ ಬಗ್ಗೆ  ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿತ್ತು. ಸದ್ಯ ಕಾರ್ಯಕ್ರಮಕ್ಕೆ ತಡೆ ನೀಡಿ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 17ಕ್ಕೆ ಮುಂದೂಡಿದೆ. […]