ಪದ್ಮಶ್ರೀ ಮಂಜಮ್ಮ ಜೋಗತಿ ಬದುಕೇ ಒಂದು ಜೀವನ ಪಾಠ: ಡಾ. ತಲ್ಲೂರು ಶಿವರಾಮ ಶೆಟ್ಟಿ

ಉಡುಪಿ: ತೃತೀಯ ಲಿಂಗಿಯಾಗಿ ನಿರಂತರ ಸಂಘರ್ಷ ಜೀವನ ನಡೆಸಿ, ತನ್ನಂತಹ ಶೋಷಿತರ ಧ್ವನಿಯಾದ ಪದ್ಮಶ್ರೀ ಪುರಸ್ಕೃತೆ ಡಾ.ಮಂಜಮ್ಮ ಜೋಗತಿ ಅವರ ಬದುಕೇ ಅವರಂತಹ ತೊಳಲಾಟದ ಮಂದಿಗೆ ಜೀವನ ಪಾಠವಾಗಿದೆ ಎಂದು ತಲ್ಲೂರು ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ ಹಾಗೂ ರಂಗಭೂಮಿ ಉಡುಪಿ ಇದರ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್, ಕರ್ನಾಟಕ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕ, ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ […]
ಡಾ.ರಾಘವ ನಂಬಿಯಾರ್ ಅವರಿಗೆ ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿ ಪ್ರದಾನ

ಉಡುಪಿ: ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧಿ ಪಡೆದಿರುವ ಯಕ್ಷಗಾನದ ಉಳಿವಿಗೆ ಕಲಾವಿದರು, ಆ ರಂಗದಲ್ಲಿ ಸಾಧನೆ ಮಾಡಿದ ವಿದ್ವಾಂಸರು ಹಾಗೂ ಕಲಾ ಸಂಸ್ಥೆಗಳನ್ನು ಗುರುತಿಸಿ, ಪ್ರೋತ್ಸಾಹಿಸುವುದು ಅತ್ಯಗತ ಎಂದು ತಲ್ಲೂರು ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ, ಕರ್ನಾಟಕ ಜಾನಪದ ಪರಿಷತ್ನ ಉಡುಪಿ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಯಕ್ಷಗಾನ ಕಲಾಕ್ಷೇತ್ರ ಉಡುಪಿ ಗುಂಡಿಬೈಲು ಇದರ ವತಿಯಿಂದ ಗುಂಡಿಬೈಲಿನ ತಲ್ಲೂರು ಗಾರ್ಡನ್ ರಂಗ ಮಂಟಪದಲ್ಲಿ ಭಾನುವಾರ ನಡೆದ ನಿಟ್ಟೂರು ಭೋಜಪ್ಪ ಸುವರ್ಣ ಸ್ಮಾರಕ ಪ್ರಶಸ್ತಿ ಪ್ರದಾನ ಹಾಗೂ […]
ಕಾಡಬೆಟ್ಟುವಿನಲ್ಲಿ ನರ್ತಕಿ ಭರತ ನಾಟ್ಯ ತರಬೇತಿ ಶಾಲೆ ಉದ್ಘಾಟನೆ

ಉಡುಪಿ: ನಮ್ಮ ದೇಶದ ಭವ್ಯ ಪ್ರಾಚೀನ ಸಾಂಸ್ಕೃತಿಕ ಪರಂಪರೆಗಳಲ್ಲಿ ಒಂದಾಗಿರುವ ಸಂಗೀತ, ನೃತ್ಯ ಕಲೆಯನ್ನು ಇಂದಿನ ಯುವ ಪೀಳಿಗೆಗೆ ದಾಟಿಸುವ ಅಗತ್ಯವಿದೆ ಎಂದು ತಲ್ಲೂರು ಫ್ಯಾಮಿಲಿ ಟ್ರಸ್ಟ್ನ ಪ್ರವರ್ತಕ, ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಗುರುವಾರ ಉಡುಪಿ ಬ್ರಹ್ಮಗಿರಿಯ ಕಾಡಬೆಟ್ಟುವಿನಲ್ಲಿ ನೃತ್ಯಗುರು ವಿದುಷಿ ಶಾಂಭವಿ ಆಚಾರ್ಯ ಅವರ ಭರತನಾಟ್ಯ ತರಬೇತಿ ಶಾಲೆ ‘ನರ್ತಕಿ’ಯ ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಾಚೀನ ಭಾರತದಲ್ಲಿ ರಾಜಾಶ್ರಯ ಪಡೆದಿದ್ದ, ಭರತಮುನಿಗಳಿಂದ ಲೋಕಾರ್ಪಣೆಗೊಂಡ ಈ ಶ್ರೀಮಂತ […]
ಜಾನಪದ ಉತ್ಸವ ಹಾಗೂ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ

ಕುಂದಾಪುರ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ಉಡುಪಿ ಜಿಲ್ಲೆ, ತಲ್ಲೂರು ಫ್ಯಾಮಿಲಿ ಟ್ರಸ್ಟ್ ಉಡುಪಿ, ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ-ಐರೋಡಿ ಸಂಯುಕ್ತವಾಗಿ ಆಯೋಜಿಸಿರುವ ಜಾನಪದ ಉತ್ಸವ-2022 ತಲ್ಲೂರು ಫ್ಯಾಮಿಲಿ ಟ್ರಸ್ಟ್ ಇವರ ಜಾನಪದ ಪ್ರಶಸ್ತಿ-2022 ಪ್ರಶಸ್ತಿ ಪ್ರದಾನ ಸಮಾರಂಭವು ಡಿ.18 ರಂದು ಗುಂಡ್ಮಿ-ಸಾಲಿಗ್ರಾಮ ಇಲ್ಲಿನ ಸದಾನಂದ ರಂಗ ಮಂಟಪದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಸ್ಥಾಪಕ ಡಾ. ತಲ್ಲೂರು ಶಿವರಾಮ ಶೆಟ್ಟಿ ಇವರು ವಹಿಸಿದ್ದರು. ಕಂಬಳ ಸಮಿತಿ […]
ಡಾ.ತಲ್ಲೂರು ಶಿವರಾಮ ಶೆಟ್ಟಿ ಇವರಿಗೆ ಕರ್ನಾಟಕ ಜಾನಪದ ವಿವಿ ಗೌರವ ಡಾಕ್ಟರೇಟ್ ಪ್ರದಾನ

ಉಡುಪಿ: ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಕೊಡ ಮಾಡುವ 2022 ನೇ ಸಾಲಿನ ಗೌರವ ಡಾಕ್ಟರೇಟ್ ಪದವಿಯನ್ನು ಉಡುಪಿಯ ಪ್ರಸಿದ್ಧ ಸಾಂಸ್ಕೃತಿಕ ಮುಂದಾಳು, ಉದ್ಯಮಿ ಡಾ.ತಲ್ಲೂರು ಶಿವರಾಮ ಶೆಟ್ಟಿ ಇವರಿಗೆ ಗುರುವಾರದಂದು ಪ್ರದಾನ ಮಾಡಲಾಯಿತು. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ವಿಶ್ವವಿದ್ಯಾಲಯದ 6 ಮತ್ತು 7ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಪದವಿಯನ್ನು ಪ್ರದಾನ ಮಾಡಿದರು. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಟಿ.ಎಂ.ಭಾಸ್ಕರ್ ಅವರು ಈ ಪ್ರತಿಷ್ಠಿತ ಗೌರವವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮೂಡಬಿದ್ರೆ […]