ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಬಂಧನ? ಆಸ್ಪತ್ರೆ ಮುಂದೆ ಹೈಡ್ರಾಮ

ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆಯ ನಂತರ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯವು ಬಂಧಿಸಿದೆ ಎನ್ನಲಾಗಿದೆ. 2011 ರಿಂದ 2015 ರ ಎಐಎಡಿಎಂಕೆ ನೇತೃತ್ವದ ಸರ್ಕಾರದ ಅವಧಿಯಲ್ಲಿ ಅವರು ಸಾರಿಗೆ ಸಚಿವರಾಗಿದ್ದಾಗ ಬಾಲಾಜಿಗೆ ಸಂಬಂಧಿಸಿರುವ ಸ್ಥಳಗಳ ಮೇಲೆ ಮಂಗಳವಾರ ಇಡಿ ದಾಳಿ ನಡೆಸಿ ಅವರನ್ನು ಪ್ರಶ್ನಿಸಿದೆ. ಉದ್ಯೋಗಕ್ಕಾಗಿ ನಗದು ಹಗರಣದ ಕುರಿತು ಪೊಲೀಸ್ ಮತ್ತು ಇಡಿ ತನಿಖೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ ತಿಂಗಳುಗಳ ನಂತರ ಈ […]
ಜಲ್ಲಿಕಟ್ಟು- ಕಂಬಳ-ಎತ್ತಿನ ಗಾಡಿ ಓಟಕ್ಕೆ ಅನುಮತಿ: ಸಾಂಸ್ಕೃತಿಕ ಪರಂಪರೆ ನ್ಯಾಯಾಂಗದ ಭಾಗವಾಗಬಾರದು ಎಂದ ಸುಪ್ರೀಂ ಕೋರ್ಟ್

ನವದೆಹಲಿ: ತಮಿಳುನಾಡು, ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಸಾಂಪ್ರದಾಯಿಕ ಗೂಳಿ ಪಳಗಿಸುವ ಕ್ರೀಡೆಯಾದ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನ ಗಾಡಿ ಓಟದ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಗುರುವಾರ ಎತ್ತಿಹಿಡಿದಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ನ್ಯಾಯಮೂರ್ತಿ ಕೆ ಎಂ ಜೋಸೆಫ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು, “ ಶಾಸಕಾಂಗವು ಇದನ್ನು ರಾಜ್ಯದ ಸಾಂಸ್ಕೃತಿಕ ಪರಂಪರೆಯ ಭಾಗವಾಗಿದೆ ಎಂಬ ದೃಷ್ಟಿಕೋನವನ್ನು ತೆಗೆದುಕೊಂಡಿದೆ ಆದ್ದರಿಂದ ನಾವು ಶಾಸಕಾಂಗದ ದೃಷ್ಟಿಕೋನವನ್ನು ಅಡ್ಡಿಪಡಿಸುವುದಿಲ್ಲ. ಸಂವಿಧಾನದ ಮುನ್ನುಡಿಯಲ್ಲಿ ಇದನ್ನು ತಮಿಳುನಾಡಿನ ಸಂಸ್ಕೃತಿ […]
ಸೈಕ್ಲೋನ್ ಮ್ಯಾಂಡಸ್ ಪರಿಣಾಮ: ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು: ಋತುವಿನ ಮೊದಲ ಚಂಡಮಾರುತವು ಬಂಗಾಳ ಕೊಲ್ಲಿಯಲ್ಲಿ ಅಭಿವೃದ್ಧಿ ಹೊಂದುತ್ತಿದ್ದು, ಪೂರ್ವ ಕರಾವಳಿಯ ತಮಿಳುನಾಡು, ಪುದುಚೇರಿ, ಮತ್ತು ಆಂಧ್ರಪ್ರದೇಶದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಸೈಕ್ಲೋನ್ ಪರಿಣಾಮಗಳನ್ನು ಎದುರಿಸಲು ಆಡಳಿತವು ಸರ್ವ ಸನ್ನದ್ದವಾಗಿದೆ. ಮ್ಯಾನ್-ಡೌಸ್ ಎಂದು ಕರೆಯಲಾಗುವ ಈ ಸೈಕ್ಲೋನ್ ಗೆ ಅರೇಬಿಕ್ ಭಾಷೆಯಲ್ಲಿ ‘ನಿಧಿ ಪೆಟ್ಟಿಗೆ’ ಎನ್ನುವ ಅರ್ಥವಿದೆ. ಈ ಸೈಕ್ಲೋನ್ ನ ಪರಿಣಾಮ ಕರ್ನಾಟಕದ ಬೆಂಗಳೂರಿನಲ್ಲಿಯೂ ಕಾಣಿಸಿಕೊಳ್ಳಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಡಿಸೆಂಬರ್ 9 ರ ಮಧ್ಯರಾತ್ರಿ ವೇಳೆಗೆ ಈ ಸೈಕ್ಲೋನ್ ಗಂಟೆಗೆ […]
ಕೊಯಮತ್ತೂರು ಸ್ಫೋಟ: ಆತ್ಮಹತ್ಯಾ ದಾಳಿ ಎಂದು ಒಪ್ಪಿಕೊಳ್ಳಿ ಎಂದ ಅಣ್ಣಾಮಲೈ; ಯುಎಪಿಎ ಹೇರಿದ ಪೊಲೀಸರು

ಕೊಯಮತ್ತೂರು: ಕೊಯಮತ್ತೂರಿನಲ್ಲಿ ಭಾನುವಾರ ಮುಂಜಾನೆ ವಾಹನದಲ್ಲಿದ್ದ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡಾಗ ವ್ಯಕ್ತಿಯೊಬ್ಬನ ಸಾವಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದ ಒಂದು ದಿನದ ನಂತರ, ಐವರು ಆರೋಪಿಗಳ ವಿರುದ್ಧ ಮಂಗಳವಾರ ಕಾನೂನುಬಾಹಿರ ಚಟುವಟಿಕೆ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಹೇರಲಾಗಿದೆ ಎಂದು ಕೊಯಮತ್ತೂರು ನಗರ ಪೊಲೀಸ್ ಕಮಿಷನರ್ ವಿ ಬಾಲಕೃಷ್ಣನ್ ಹೇಳಿದ್ದಾರೆ. ಕೊಯಮತ್ತೂರು ಪೊಲೀಸರು ಬಂಧಿತ ಆರೋಪಿಗಳನ್ನು ಜಿಎಂ ನಗರದ ಮೊಹಮ್ಮದ್ ಧಾಲ್ಹಾ (25), ಮೊಹಮ್ಮದ್ ಅಜರುದ್ದೀನ್ (25), ಮೊಹಮ್ಮದ್ ರಿಯಾಜ್ (27), ಫಿರೋಜ್ ಇಸ್ಮಾಯಿಲ್ (27), ಮತ್ತು ಮೊಹಮ್ಮದ್ ನವಾಜ್ […]
ಕೋಹ್ಲಿ ಅಭಿಮಾನಿಯಿಂದ ರೋಹಿತ್ ಶರ್ಮಾ ಬೆಂಬಲಿಗನ ಹತ್ಯೆ: ಟ್ವಿಟರ್ ನಲ್ಲಿ ಅರೆಸ್ಟ್ ಕೊಹ್ಲಿ ಟ್ರೆಂಡ್

ಚೆನ್ನೈ: ಐಪಿಲ್ ಕ್ರಿಕೆಟ್ ನ ಹುಚ್ಚು ಅಭಿಮಾನವು ಯುವಕನೊಬ್ಬನ ಹತ್ಯೆಯಲ್ಲಿ ದುರಂತ ಅಂತ್ಯ ಕಂಡಿದೆ. ತಮಿಳುನಾಡಿನಲ್ಲಿ ರೋಹಿತ್ ಶರ್ಮಾ ಬೆಂಬಲಿಗನನ್ನು ವಿರಾಟ್ ಅಭಿಮಾನಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಘಟನೆಯಲ್ಲಿ 24 ವರ್ಷದ ಪಿ ವಿಘ್ನೇಶ್ ಅನ್ನು ಎಸ್ ಧರ್ಮರಾಜ್ ಎನ್ನುವವನು ಕೊಲೆಮಾಡಿದ್ದಾನೆ. ಈ ಇಬ್ಬರೂ ಅರಿಯಲೂರು ಜಿಲ್ಲೆಯ ಪೊಯ್ಯೂರು ಗ್ರಾಮದವರು. ವಿಘೇಶ್ ಮುಂಬೈ ಇಂಡಿಯನ್ ಅಭಿಮಾನಿಯಾಗಿದ್ದರೆ, ಧರ್ಮರಾಜ್ ಆರ್.ಸಿ.ಬಿಯ ಕಟ್ಟರ್ ಅಭಿಮಾನಿ. ಈ ಇಬ್ಬರೂ ಕೂಡಾ ಮದ್ಯ ಸೇವಿಸಿದ್ದರು. ಆರಂಭಿಕ ತನಿಖೆಯ ಪ್ರಕಾರ, ಇಂಡಿಯನ್ ಪ್ರೀಮಿಯರ್ […]